Homeಕರ್ನಾಟಕಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

- Advertisement -
- Advertisement -

ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಬಂಧಿಸಲಾಗಿದೆ. ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಇದಕ್ಕೆ ತಕರಾರು ಸಲ್ಲಿಸಿದ್ದ ವಿಶೇಷ ಸರ್ಕಾರಿ ವಕೀಲೆ ಕೆ.ಬಿ. ನಾಗವೇಣಿ, “ಬಂಧಿತ ಆರೋಪಿ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ” ಎಂಬ ವಾದವನ್ನು ಮುಂದಿಟ್ಟರು. ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ವಕೀಲರ ವಾದವನ್ನು ಪರಿಗಣಿಸಿದ್ದು, ಮುರುಘಾ ಮಠಾಧೀಶರ ಅರ್ಜಿ ತಿರಸ್ಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶರಣರನ್ನು ಶಿವಮೊಗ್ಗದ ಮೆಗ್ಗಾನ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿತ್ತು. ಅದಂತೆ ಅವರನ್ನು ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಸದ್ಯ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಶರಣರನ್ನು ಆಸ್ಪತ್ರೆಯಿಂದ ಚಿತ್ರದುರ್ಗದ ಕಾರಾಗೃಹಕ್ಕೆ ವಾಪಸ್‌ ಕರೆದೊಯ್ಯಲಾಗಿದೆ.

“ವೈದ್ಯಕೀಯ ಪ್ರಕ್ರಿಯೆಯ ವರದಿಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಆಗುವಾಗ ಶರಣರು ಆರೋಗ್ಯವಾಗಿದ್ದಾರೆ” ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ವಿರೂಪಾಕ್ಷಪ್ಪ ತಿಳಿಸಿದ್ದಾರೆ.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

“ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಹಾಲಿ ಕಾರ್ಯದರ್ಶಿ ವಸ್ತ್ರದಮಠ ಅವರು ಶಿವಮೂರ್ತಿ ಮುರುಘಾ ಶರಣರ ಏಕಪಕ್ಷೀಯ ನೇಮಕವಾಗಿರುತ್ತದೆ. ಇವರ ನೇಮಕದಿಂದ ಸ್ಥಳೀಯ ಭಕ್ತ ಸಮೂಹ ಅಸಮಾಧಾನಗೊಂಡಿದ್ದಾರೆ. ಈಗಿನ ಸಂದಿಗ್ಧ ಸಮಯದಲ್ಲಿ ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ. ಮಠದ ಸಾವಿರಾರು ಕೋಟಿ ರೂ. ಮೊತ್ತದ ಚರ ಮತ್ತು ಸ್ಥಿರಾಸ್ತಿ ದುರುಪಯೋಗವಾಗುವ ಸಾಧ್ಯತೆ ಇದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...