Homeಕರ್ನಾಟಕಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್‌ ಜಾರಿಗೊಳಿಸಿದ ವಿಶೇಷ ನ್ಯಾಯಾಲಯ

ಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್‌ ಜಾರಿಗೊಳಿಸಿದ ವಿಶೇಷ ನ್ಯಾಯಾಲಯ

- Advertisement -
- Advertisement -

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಮೊದಲ ಆರೋಪಿಯಾಗಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬೆಂಗಳೂರಿನ ವಿಶೇಷ ಸತ್ರ ನ್ಯಾಯಾಲಯವು ಮಂಗಳವಾರ (ನವೆಂಬರ್ 18) ಸಮನ್ಸ್‌ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ಬಿ.ಎಸ್‌ ಯಡಿಯೂರಪ್ಪ, ವೈ.ಎಂ ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಅವರಿಗೆ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶರಾದ ಎಸ್‌. ಸುಜಾತಾ ಅವರು ಸಮನ್ಸ್‌ ಜಾರಿಗೊಳಿಸಿ, ಡಿಸೆಂಬರ್ 2ಕ್ಕೆ ಖುದ್ದು ಹಾಜರಾಗಲು ನಿರ್ದೇಶಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ವಿಶೇಷ ಪ್ರಾಸಿಕ್ಯೂಟರ್‌ ಅಶೋಕ್‌ ಎನ್.ನಾಯಕ್‌ ಅವರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಧೀಶರು 30 ದಿನಗಳ ಒಳಗಾಗಿ ಸಾಕ್ಷಿ ವಿಚಾರಣೆ ಆಗಬೇಕು ಎಂಬ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮತ್ತು ಇತರರಿಗೆ ಸಮನ್ಸ್‌ ಜಾರಿಗೆ ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.

ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಫೆಬ್ರವರಿ 28ರ ಆದೇಶವನ್ನು ನವೆಂಬರ್ 13ರಂದು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಎರಡನೇ ಬಾರಿಗೆ ಸಂಜ್ಞೇ ಪರಿಗಣಿಸಿ ಸಮನ್ಸ್ ಜಾರಿಗೊಳಿಸಿದ್ದ ವಿಚಾರಣಾ ನ್ಯಾಯಾಲಯ ಕ್ರಮ ಪ್ರಶ್ನಿಸಿ ಯಡಿಯೂರಪ್ಪ, ವೈ.ಎಂ ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಸಲ್ಲಿಸಿದ್ದ ಎರಡು ಪ್ರತ್ಯೇಕ ರಿಟ್‌ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಇದಕ್ಕೂ ಮುನ್ನ ಫೆಬ್ರವರಿ 7ರಂದು ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಸಿಐಡಿ ಮಾಡಿರುವ ತನಿಖೆ ಮತ್ತು ಅಂತಿಮ ವರದಿ ಹಾಗೆಯೇ ಉಳಿಯಲಿದೆ ಎಂದಿತ್ತು. ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿತ್ತು.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಹೊಸದಾಗಿ ಸಂಜ್ಞೇ ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್‌ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ನಂತರ ಪ್ರಕರಣ ಸಿಐಡಿಗೆ ತನಿಖೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...