Homeಮುಖಪುಟಪೋಕ್ಸೋ ಕಾಯ್ದೆ ದುರುಪಯೋಗ ಆಗುತ್ತಿದೆ: ಆರೋಪಿ ಬ್ರಿಜ್‌ ಭೂಷಣ್‌ ಹೇಳಿಕೆ

ಪೋಕ್ಸೋ ಕಾಯ್ದೆ ದುರುಪಯೋಗ ಆಗುತ್ತಿದೆ: ಆರೋಪಿ ಬ್ರಿಜ್‌ ಭೂಷಣ್‌ ಹೇಳಿಕೆ

- Advertisement -
- Advertisement -

ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ಲೈಂಗಿಕ ಅಪರಾಧ ತಡೆದು ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ದುರುಪಯೋಗ ಆಗುತ್ತಿದೆ” ಎಂದು ಗುರುವಾರ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ಸಂಸದರೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ‌ಇದರಲ್ಲಿ ಒಂದು ಪ್ರಕರಣವು ಅಪ್ರಾಪ್ತ ಬಾಲಕಿಯೊಬ್ಬರು ಮಾಡಿದ ಆರೋಪಗಳಿಗೆ ಸಂಬಂಧಿಸಿದೆ. ಹೀಗಾಗಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಯಸ್ಕ ದೂರುದಾರರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ.

ಬ್ರಿಜ್‌ ಭೂಷಣ್‌ ಸಿಂಗ್ ಬಂಧನಕ್ಕೆ ಒತ್ತಾಯಿಸಿ ದೇಶದ ಅಗ್ರ ಕುಸ್ತಿಪಟುಗಳು ಏಪ್ರಿಲ್ 23 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥರು ಉತ್ತರ ಪ್ರದೇಶದ ಬಹ್ರೈಚ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಪೋಕ್ಸೋ ಕಾನೂನನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಸಹ ಅದರ ದುರುಪಯೋಗದಿಂದ ಹೊರತಾಗಿಲ್ಲ” ಎಂದಿದ್ದಾರೆ. “ಪೋಕ್ಸೊ ಕಾನೂನನ್ನು ಬದಲಾಯಿಸಲು ಸ್ವಾಮೀಜಿಗಳ ಮುಂದಾಳತ್ವದಲ್ಲಿ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜೂನ್ 5ರಂದು ಅಯೋಧ್ಯೆಯಲ್ಲಿ ಸ್ವಾಮೀಜಿಗಳ ರ್‍ಯಾಲಿಯನ್ನು ಬ್ರಿಜ್‌ ಭೂಷಣ್‌ ಆಯೋಜಿಸಿದ್ದಾರೆ. ಸ್ವಾಮೀಜಿಗಳ ರ್‍ಯಾಲಿಯ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಬ್ರಿಜ್‌ ಭೂಷಣ್‌ ಸಿಂಗ್ ಬಹ್ರೈಚ್‌ನಲ್ಲಿದ್ದರು. ಈ ಕಾರ್ಯಕ್ರಮದಲ್ಲಿ 11 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದ್ದಾರೆ.

ಕುಸ್ತಿಪಟುಗಳು ಮೊದಲು ಜನವರಿಯಲ್ಲಿ ಬೀದಿಗಿಳಿದಿದ್ದರು. ಆದರೆ ಸರ್ಕಾರವು ಆರೋಪಗಳನ್ನು ಪರಿಶೀಲಿಸಲು ಉಸ್ತುವಾರಿ ಸಮಿತಿಯನ್ನು ರಚಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

“ಹೋರಾಟದ ಸಮಯದಲ್ಲಿ ನನಗೆ ಮತ್ತು ಇತರ ಪ್ರತಿಭಟನಾಕಾರರಿಗೆ ಸತ್ಯ ದರ್ಶನವಾಯಿತು” ಎಂದು ಪುನಿಯಾ ಗುರುವಾರ ಹಿಂದೂಸ್ತಾನ್ ಟೈಮ್ಸ್‌ಗೆ ತಿಳಿಸಿದ್ದಾರೆ. “ನಮ್ಮ ಎಲ್ಲಾ ಪದಕಗಳೊಂದಿಗೆ ನಾವು ಕೇಳುತ್ತಿದ್ದೇವೆ ಎಂದು ನಾವು ಭಾವಿಸಿದ್ದೇವೆ. ಆದರೆ ವಾಸ್ತವವು ವಿಭಿನ್ನವಾಗಿದೆ” ಎಂದಿದ್ದಾರೆ ಪೂನಿಯಾ.

“ಪ್ರತಿಭಟನೆ ಇಷ್ಟು ದಿನ ಮುಂದುವರಿಯುತ್ತದೆ ಎಂದು ಊಹಿಸಿರಲಿಲ್ಲ. ನಾವು ಅಂತರರಾಷ್ಟ್ರೀಯ ಕ್ರೀಡಾಪಟುಗಳಾಗಿರುವುದರಿಂದ ಸರ್ಕಾರವು ನಮ್ಮ ಮಾತನ್ನು ಕೇಳುತ್ತದೆ ಎಂದು ನಾವು ಭಾವಿಸಿದ್ದೇವೆ” ಎಂದಿದ್ದಾರೆ. “ಇದು ನಮ್ಮ ವೃತ್ತಿಜೀವನವನ್ನು ಅಪಾಯಕ್ಕೆ ತಳ್ಳುವ ಅಂಶವಾಗಿದೆ” ಎಂದು ವಿಷಾದಿಸಿದ್ದಾರೆ.

“ಈ ದೇಶದಲ್ಲಿ ಎರಡು ರೀತಿಯ ಕಾನೂನುಗಳಿವೆ – ಒಂದು ಸಾಮಾನ್ಯ ಜನರಿಗೆ ಇದ್ದರೆ, ಇನ್ನೊಂದು ಬ್ರಿಜ್‌ ಭೂಷಣ್‌ ಸಿಂಗ್‌ನಂತಹ ಪ್ರಬಲ ವ್ಯಕ್ತಿಗಳಿಗಾಗಿ ಇದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...