Homeಮುಖಪುಟಪೋಕ್ಸೋ ಅಪರಾಧಿಯಿಂದ ಮತ್ತೊಂದು ಕೃತ್ಯ | ಅಪ್ರಾಪ್ತೆಯ ಅತ್ಯಾಚಾರ ಮಾಡಿ, ಶವವನ್ನು ಬಾವಿಗೆ ಎಸೆದ ದುಷ್ಕರ್ಮಿ

ಪೋಕ್ಸೋ ಅಪರಾಧಿಯಿಂದ ಮತ್ತೊಂದು ಕೃತ್ಯ | ಅಪ್ರಾಪ್ತೆಯ ಅತ್ಯಾಚಾರ ಮಾಡಿ, ಶವವನ್ನು ಬಾವಿಗೆ ಎಸೆದ ದುಷ್ಕರ್ಮಿ

- Advertisement -
- Advertisement -

ತಮಿಳುನಾಡಿನ ಥೇಣಿಯಲ್ಲಿ 2014 ರ ಪೋಕ್ಸೋ ಪ್ರಕರಣದಲ್ಲಿ ಅಕಾಲಿಕವಾಗಿ ಬಿಡುಗಡೆಗೊಂಡ 32 ವರ್ಷದ ವ್ಯಕ್ತಿಯನ್ನು ಶಿವಗಂಗಾ ತಾಲೂಕು ಪೊಲೀಸರು ಶನಿವಾರ ಮಧುರೈನ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದಲ್ಲಿ ಬಂಧಿಸಿದ್ದಾರೆ. ಆರೋಪಿಯು ಬಾಲಕಿಯ ಶವವನ್ನು ಶಿವಗಂಗೆಯ ಒಂದು ಬಾವಿಯಲ್ಲಿ ಎಸೆದಿದ್ದಾಗಿ ಆರೋಪಿಸಲಾಗಿದೆ. ಪೋಕ್ಸೋ ಅಪರಾಧಿಯಿಂದ

ಆರೋಪಿಯನ್ನು ಶಿವಗಂಗೆಯ ಕಟ್ಟಾನಿಕುಲಂನ ಜಿ ಸತೀಶ್‌ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಪತ್ನಿ ಹೆರಿಗೆಗಾಗಿ ದಾಖಲಾಗಿದ್ದ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ (ಜಿಆರ್‌ಎಚ್) ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದ. ಇದರ ನಂತರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯ 2014ರ ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆ ಕಾರಣಕ್ಕೆ ಶಿಕ್ಷೆಗೆ ಗುರಿಯಾಗಿದ್ದನು. ಆದ್ಧರಿಂದ ಈ ಬಾರಿ ಲೈಂಗಿಕ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡುವುದರಿಂದ ತಪ್ಪಿಸಿಕೊಳ್ಳಲು ಆರೋಪಿ ಸತೀಶ್ ಕುಮಾರ್ ಬಾಲಕಿಯನ್ನು ಕೊಲೆ ಮಾಡಿದ್ದಾಗಿ ಪೊಲೀಸರು ಹೇಳಿದ್ದಾರೆ. ಪೋಕ್ಸೋ ಅಪರಾಧಿಯಿಂದ

ಗುರುವಾರ ಬೆಳಗ್ಗೆ ಶಿವಗಂಗಾ ಸಮೀಪದ ಕಲ್ಕುಲಂ ಎಂಬಲ್ಲಿ ಬಾವಿಯೊಳಗೆ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದ್ದು, ಆಗ ಘಟನೆ ಬೆಳಕಿಗೆ ಬಂದಿದೆ. 2014ರ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಮುಗಿಯುವ ಮುನ್ನವೇ ಪೋಕ್ಸೋ ಅಪರಾಧಿಯನ್ನು ಬಿಡುಗಡೆ ಮಾಡಲಾಗಿತ್ತು ವರದಿಯಾಗಿದೆ.

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಬಾಲಕಿಯ ಮೃತದೇಹವನ್ನು ಹೊರತೆಗೆದಿದ್ದರು. ಮೃತ ಬಾಲಕಿಯ ಒಂದು ಕೈ ಮುರಿದಿದ್ದು, ಅದನ್ನು ಶಿವಗಂಗೈ GMCH ಗೆ ಕಳುಹಿಸಿದ್ದಾರೆ. ನಂತರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಮಧುರೈ ನಗರ ವ್ಯಾಪ್ತಿಯಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರ ವಿಶೇಷ ತಂಡವು, ಇತ್ತೀಚೆಗೆ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಎರಡನೇ ಮಗಳ ಶವ ಇದು ಎಂದು ಪತ್ತೆ ಮಾಡಿದೆ. ಆರೋಪಿಯು ಬುಧವಾರ ಬಾಲಕಿಯನ್ನು ಅಪರಾಧ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ.

ಪೊಲೀಸರು ಇದೀಗ ಪ್ರಕರಣವನ್ನು ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಎಂದು ಬದಲಾಯಿಸಿದ್ದಾರೆ.

2014ರ ಪ್ರಕರಣದಲ್ಲಿ ತೇಣಿಯ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸತೀಶ್‌ಕುಮಾರ್‌ಗೆ 11 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಘಟನೆಯಲ್ಲಿ ಹುಡುಗಿಯ ಹೇಳಿಕೆಯು ನಿರ್ಣಾಯಕ ಸಾಕ್ಷ್ಯವಾಗಿ ಕಾರ್ಯನಿರ್ವಹಿಸಿತ್ತು. ಆದರೆ ಎಂಟು ವರ್ಷಗಳ ನಂತರ ಸತೀಶ್‌ಕುಮಾರ್‌ಗೆ ಅವಧಿಪೂರ್ವ ಬಿಡುಗಡೆ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ: ‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...