Homeಕರ್ನಾಟಕಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

- Advertisement -
- Advertisement -

ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (82) ಸೋಮವಾರ ಬೆಳಿಗ್ಗೆ ಹೈದರಾಬಾದ್‌ನ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು.

ಕೆ.ವಿ. ತಿರುಮಲೇಶ್ ಕನ್ನಡದ ನವ್ಯಸಾಹಿತ್ಯದ ಸಂದರ್ಭದಲ್ಲಿ ಬರೆಯಲು ತೊಡಗಿದವರು. ಸುಮಾರು ಐದು ದಶಕಗಳ ಕಾಲ ಕವಿತೆ, ಕತೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಇವರ ಎರಡು ಜನಪ್ರಿಯ ಕೃತಿಗಳು. ಇವರ 20 ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಎಂಬುವು ಮುಖ್ಯ ಕವನ ಸಂಕಲನಗಳು. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು.ಮಾಲ್ಟ ಲೌರಿಡ್ಜ್ ಬ್ರಿಗ್ಗನ ಟಿಪ್ಪಣಿ ಪುಸ್ತಕ ಇವರ ಅನುವಾದಿತ ಕೃತಿ.ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಕರ್ನಾಟಕ ಸಾಹಿತ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಂಜನ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಇವರಿಗೆ ಸಂದಿವೆ. ಹೈದರಾಬಾದಿನ ಸಿ.ಐ.ಇ.ಎಫ್.ಎಲ್. (ಈಗ ಇ.ಎಫ್.ಎಲ್.ಯು.) ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞಾನದ ಪ್ರೊಫಸರರಾಗಿ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡದ ವಾಕ್ಯರಚನೆಯ ಕುರಿತು ಮತ್ತು ಕರ್ಮಣೀ ಪ್ರಯೋಗದ ನಿಯೋಗಗಳ ಕುರಿತು ಕ್ರಮಬದ್ಧವಾದ, ಸೂಕ್ಷ್ಮ ಒಳನೋಟಗಳನ್ನೊಳಗೊಂಡ ಭಾಷಾವೈಜ್ಞಾನಿಕ ಅಧ್ಯಯನ ಅವರ ಪಿ.ಎಚ್ ಡಿ. ಪ್ರಬಂಧ. ಬೇಂದ್ರೆಯವರ ಶೈಲಿಯ ಬಗ್ಗೆಯೂ ಮತ್ತಿತರ ಭಾಷಾಸಂಬಂಧಿ ವಿಷಯಗಳನ್ನು ಕುರಿತೂ ಹಲವಾರು ಲೇಖನಗಳನ್ನೂ, ಒಂದು ಲೇಖನ ಸಂಗ್ರಹವನ್ನೂ ಪ್ರಕಟಿಸಿದ್ದಾರೆ. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಅತ್ಯುತ್ತಮವಾದುದ್ದನ್ನೇ ಬರೆದರು. ಕನ್ನಡ ಭಾಷೆ ಮತ್ತು ವ್ಯಾಕರಣದ ಮೇಲೆ ಬಹಳ ಆಳವಾದ ಹಿಡಿತವನ್ನು ಹೊಂದಿದ್ದರು.

ಕೆ.ವಿ.ತಿರುಮಲೇಶ್ ಅವರ ಕುರಿತು ಸಾಹಿತಿ, ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬುಕ್‌ನಲ್ಲಿ ಬರೆದಿರುವ ಸಾಲುಗಳು– ಭಾಷೆಯ ಕುರಿತಾಗಿ ಅತ್ಯಂತ ಸೂಕ್ಷ್ಮವಾಗಿ ಮತ್ತು ನವಿರಾಗಿ ಯೋಚಿಸಿ ಬರೆಯುತ್ತಿದ್ದ ಕೆಲವೇ ಕೆಲವರಲ್ಲಿ ಕೆ.ವಿ.ತಿರುಮಲೇಶ್ ಕೂಡಾ ಒಬ್ಬರು. ಅವರು ಕವಿ, ಕತೆಗಾರ, ಅನುವಾದಕ, ಭಾಷಾ ವಿಜ್ಞಾನಿ, ಮತ್ತು ವಿಮರ್ಶಕ. ಅವರು ಕಾಸರಗೋಡಿನಲ್ಲಿದ್ದಾಗ ನಮಗೆಲ್ಲ ಬಹಳ ಹತ್ತಿರದವರಾಗಿದ್ದರು.

ತಿರುಮಲೇಶ್‌ ಹುಟ್ಟಿದ ಸ್ಥಳ ಕಾರಡ್ಕ ( ಸಪ್ಟಂಬರ 12, 1940) . ಇದೇ ಊರಿನಲ್ಲಿ ಹುಟ್ಟಿದ ಇನ್ನೊಬ್ಬ ಕವಿ ವೇಣುಗೋಪಾಲ ಕಾಸರಗೋಡು ಬಹಳ ಬೇಗ ತೀರಿಕೊಂಡರು. ಕಾರಡ್ಕದ ಕಾರಣಿಕ ಪುರುಷರು ಎಂದು ನಾನು ಅವರಿಗೆ ಹೇಳುತ್ತಿದ್ದೆ. ನವ್ಯಸಾಹಿತ್ಯ ಕಾಲದಲ್ಲಿ ಕಾಸರಗೋಡು ಬಹಳ ಕಾರಣಗಳಿಂದ ಸುದ್ದಿಯಲ್ಲಿತ್ತು. ತಿರುಮಲೇಶ್‌, ವೇಣುಗೋಪಾಲ ಕಾಸರಗೋಡು, ಎಂ. ಗಂಗಾಧರ ಭಟ್, ಯು ಮಹೇಶ್ವರಿ, ಲಲಿತಾ ಎಸ್‌ ಎನ್‌ ಭಟ್‌, ಮೊದಲಾದವರು ನವ್ಯ ಕಾಲಘಟ್ಟದ ದೊಡ್ಡ ಹೆಸರುಗಳು. ಇವರೆಲ್ಲ ಒಟ್ಟು ಸೇರಿ ಒಮ್ಮೆ ʼ ಕಯ್ಯಾರರು ಇನ್ನು ಬರೆಯಬೇಕಾಗಿಲ್ಲʼ ಎಂದು ಘೋಷಿಸಿ ದೊಡ್ಡ ಗುಲ್ಲೆಬ್ಬಿಸಿದ್ದರು.
ಮುಂದೆ ತಿರುಮಲೇಶ್‌ ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇರಿ ಅಲ್ಲಿಯೇ ನಿವೃತ್ತರಾದರು. ಹೊರನಾಡ ಕನ್ನಡಿಗರಾದ ನಾವು ಆ ಕಾರಣಕ್ಕೇನೇ ಹಲವು ವಿಷಯಗಳ ಬಗ್ಗೆ ಹರಟುತ್ತಿದ್ದೆವು.
ಕಳೆದ ಸುಮಾರು 50 ವರ್ಷಗಳಿಂದ ತಿರುಮಲೇಶ್‌ ಬರೆಯುತ್ತಲೇ ಇದ್ದರು. ‘ಮುಖವಾಡಗಳು’ ಹಾಗೂ ‘ವಠಾರ’ ಕವನ ಸಂಕಲನಗಳ ಮೂಲಕ ಅವರು ನವ್ಯ ಕಾಲಘಟ್ಟದಲ್ಲಿ ಜನಪ್ರಿಯರಾದರು. ಅಕ್ಷಯ ಕಾವ್ಯ, ಮಹಾಪ್ರಸ್ಥಾನ, ಅವಧ, ಪಾಪಿಯೂ , ಆರೋಪ, ಮುಸುಗು, ಕಳ್ಳಿಗಿಡದ ಹೂವು, ಸಮ್ಮುಖ, ಕಾವ್ಯಕಾರಣ ಇವರ ಇತರ ಮುಖ್ಯ ಕೃತಿಗಳು. ಕಲಿಗುಲ ಮತ್ತು ಟೈಬೀರಿಯಸ್‌ ಅವರಿಗೆ ಹೆಸರು ತಂದುಕೊಟ್ಟ ನಾಟಕಗಳು. ಡಾನ್ ಕ್ವಿಕ್ಸಾಟನ ಸಾಹಸಗಳು ಮತ್ತು ಗಂಟೆ ಗೋಪುರ ಅವರ ಒಳ್ಳೆಯ ಅನುವಾದಗಳು.
ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಮತ್ತು ಅಸ್ತಿತ್ವವಾದ ಇವರ ಮುಖ್ಯ ವಿಮರ್ಶಾ ಕೃತಿಗಳು.
ದೊಡ್ಡ ಲೇಖಕನೊಬ್ಬ ತೀರಿಕೊಂಡಾಗ ಸಹಜವಾಗಿ ಒಂದು ಬಗೆಯ ನಿರ್ವಾತ ಉಂಟಾಗುತ್ತದೆ. ಅದನ್ನು ಯಾರಾದರೂ ತುಂಬಿಸುವವರೆಗೆ ನಾವೆಲ್ಲ ಕಾಯಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...