Homeಕರ್ನಾಟಕಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

- Advertisement -
- Advertisement -

ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (82) ಸೋಮವಾರ ಬೆಳಿಗ್ಗೆ ಹೈದರಾಬಾದ್‌ನ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು.

ಕೆ.ವಿ. ತಿರುಮಲೇಶ್ ಕನ್ನಡದ ನವ್ಯಸಾಹಿತ್ಯದ ಸಂದರ್ಭದಲ್ಲಿ ಬರೆಯಲು ತೊಡಗಿದವರು. ಸುಮಾರು ಐದು ದಶಕಗಳ ಕಾಲ ಕವಿತೆ, ಕತೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಇವರ ಎರಡು ಜನಪ್ರಿಯ ಕೃತಿಗಳು. ಇವರ 20 ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಎಂಬುವು ಮುಖ್ಯ ಕವನ ಸಂಕಲನಗಳು. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು.ಮಾಲ್ಟ ಲೌರಿಡ್ಜ್ ಬ್ರಿಗ್ಗನ ಟಿಪ್ಪಣಿ ಪುಸ್ತಕ ಇವರ ಅನುವಾದಿತ ಕೃತಿ.ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಕರ್ನಾಟಕ ಸಾಹಿತ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಂಜನ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಇವರಿಗೆ ಸಂದಿವೆ. ಹೈದರಾಬಾದಿನ ಸಿ.ಐ.ಇ.ಎಫ್.ಎಲ್. (ಈಗ ಇ.ಎಫ್.ಎಲ್.ಯು.) ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞಾನದ ಪ್ರೊಫಸರರಾಗಿ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡದ ವಾಕ್ಯರಚನೆಯ ಕುರಿತು ಮತ್ತು ಕರ್ಮಣೀ ಪ್ರಯೋಗದ ನಿಯೋಗಗಳ ಕುರಿತು ಕ್ರಮಬದ್ಧವಾದ, ಸೂಕ್ಷ್ಮ ಒಳನೋಟಗಳನ್ನೊಳಗೊಂಡ ಭಾಷಾವೈಜ್ಞಾನಿಕ ಅಧ್ಯಯನ ಅವರ ಪಿ.ಎಚ್ ಡಿ. ಪ್ರಬಂಧ. ಬೇಂದ್ರೆಯವರ ಶೈಲಿಯ ಬಗ್ಗೆಯೂ ಮತ್ತಿತರ ಭಾಷಾಸಂಬಂಧಿ ವಿಷಯಗಳನ್ನು ಕುರಿತೂ ಹಲವಾರು ಲೇಖನಗಳನ್ನೂ, ಒಂದು ಲೇಖನ ಸಂಗ್ರಹವನ್ನೂ ಪ್ರಕಟಿಸಿದ್ದಾರೆ. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಅತ್ಯುತ್ತಮವಾದುದ್ದನ್ನೇ ಬರೆದರು. ಕನ್ನಡ ಭಾಷೆ ಮತ್ತು ವ್ಯಾಕರಣದ ಮೇಲೆ ಬಹಳ ಆಳವಾದ ಹಿಡಿತವನ್ನು ಹೊಂದಿದ್ದರು.

ಕೆ.ವಿ.ತಿರುಮಲೇಶ್ ಅವರ ಕುರಿತು ಸಾಹಿತಿ, ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬುಕ್‌ನಲ್ಲಿ ಬರೆದಿರುವ ಸಾಲುಗಳು– ಭಾಷೆಯ ಕುರಿತಾಗಿ ಅತ್ಯಂತ ಸೂಕ್ಷ್ಮವಾಗಿ ಮತ್ತು ನವಿರಾಗಿ ಯೋಚಿಸಿ ಬರೆಯುತ್ತಿದ್ದ ಕೆಲವೇ ಕೆಲವರಲ್ಲಿ ಕೆ.ವಿ.ತಿರುಮಲೇಶ್ ಕೂಡಾ ಒಬ್ಬರು. ಅವರು ಕವಿ, ಕತೆಗಾರ, ಅನುವಾದಕ, ಭಾಷಾ ವಿಜ್ಞಾನಿ, ಮತ್ತು ವಿಮರ್ಶಕ. ಅವರು ಕಾಸರಗೋಡಿನಲ್ಲಿದ್ದಾಗ ನಮಗೆಲ್ಲ ಬಹಳ ಹತ್ತಿರದವರಾಗಿದ್ದರು.

ತಿರುಮಲೇಶ್‌ ಹುಟ್ಟಿದ ಸ್ಥಳ ಕಾರಡ್ಕ ( ಸಪ್ಟಂಬರ 12, 1940) . ಇದೇ ಊರಿನಲ್ಲಿ ಹುಟ್ಟಿದ ಇನ್ನೊಬ್ಬ ಕವಿ ವೇಣುಗೋಪಾಲ ಕಾಸರಗೋಡು ಬಹಳ ಬೇಗ ತೀರಿಕೊಂಡರು. ಕಾರಡ್ಕದ ಕಾರಣಿಕ ಪುರುಷರು ಎಂದು ನಾನು ಅವರಿಗೆ ಹೇಳುತ್ತಿದ್ದೆ. ನವ್ಯಸಾಹಿತ್ಯ ಕಾಲದಲ್ಲಿ ಕಾಸರಗೋಡು ಬಹಳ ಕಾರಣಗಳಿಂದ ಸುದ್ದಿಯಲ್ಲಿತ್ತು. ತಿರುಮಲೇಶ್‌, ವೇಣುಗೋಪಾಲ ಕಾಸರಗೋಡು, ಎಂ. ಗಂಗಾಧರ ಭಟ್, ಯು ಮಹೇಶ್ವರಿ, ಲಲಿತಾ ಎಸ್‌ ಎನ್‌ ಭಟ್‌, ಮೊದಲಾದವರು ನವ್ಯ ಕಾಲಘಟ್ಟದ ದೊಡ್ಡ ಹೆಸರುಗಳು. ಇವರೆಲ್ಲ ಒಟ್ಟು ಸೇರಿ ಒಮ್ಮೆ ʼ ಕಯ್ಯಾರರು ಇನ್ನು ಬರೆಯಬೇಕಾಗಿಲ್ಲʼ ಎಂದು ಘೋಷಿಸಿ ದೊಡ್ಡ ಗುಲ್ಲೆಬ್ಬಿಸಿದ್ದರು.
ಮುಂದೆ ತಿರುಮಲೇಶ್‌ ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇರಿ ಅಲ್ಲಿಯೇ ನಿವೃತ್ತರಾದರು. ಹೊರನಾಡ ಕನ್ನಡಿಗರಾದ ನಾವು ಆ ಕಾರಣಕ್ಕೇನೇ ಹಲವು ವಿಷಯಗಳ ಬಗ್ಗೆ ಹರಟುತ್ತಿದ್ದೆವು.
ಕಳೆದ ಸುಮಾರು 50 ವರ್ಷಗಳಿಂದ ತಿರುಮಲೇಶ್‌ ಬರೆಯುತ್ತಲೇ ಇದ್ದರು. ‘ಮುಖವಾಡಗಳು’ ಹಾಗೂ ‘ವಠಾರ’ ಕವನ ಸಂಕಲನಗಳ ಮೂಲಕ ಅವರು ನವ್ಯ ಕಾಲಘಟ್ಟದಲ್ಲಿ ಜನಪ್ರಿಯರಾದರು. ಅಕ್ಷಯ ಕಾವ್ಯ, ಮಹಾಪ್ರಸ್ಥಾನ, ಅವಧ, ಪಾಪಿಯೂ , ಆರೋಪ, ಮುಸುಗು, ಕಳ್ಳಿಗಿಡದ ಹೂವು, ಸಮ್ಮುಖ, ಕಾವ್ಯಕಾರಣ ಇವರ ಇತರ ಮುಖ್ಯ ಕೃತಿಗಳು. ಕಲಿಗುಲ ಮತ್ತು ಟೈಬೀರಿಯಸ್‌ ಅವರಿಗೆ ಹೆಸರು ತಂದುಕೊಟ್ಟ ನಾಟಕಗಳು. ಡಾನ್ ಕ್ವಿಕ್ಸಾಟನ ಸಾಹಸಗಳು ಮತ್ತು ಗಂಟೆ ಗೋಪುರ ಅವರ ಒಳ್ಳೆಯ ಅನುವಾದಗಳು.
ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಮತ್ತು ಅಸ್ತಿತ್ವವಾದ ಇವರ ಮುಖ್ಯ ವಿಮರ್ಶಾ ಕೃತಿಗಳು.
ದೊಡ್ಡ ಲೇಖಕನೊಬ್ಬ ತೀರಿಕೊಂಡಾಗ ಸಹಜವಾಗಿ ಒಂದು ಬಗೆಯ ನಿರ್ವಾತ ಉಂಟಾಗುತ್ತದೆ. ಅದನ್ನು ಯಾರಾದರೂ ತುಂಬಿಸುವವರೆಗೆ ನಾವೆಲ್ಲ ಕಾಯಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...