Homeಕರ್ನಾಟಕಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಇನ್ನಿಲ್ಲ

- Advertisement -
- Advertisement -

ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (82) ಸೋಮವಾರ ಬೆಳಿಗ್ಗೆ ಹೈದರಾಬಾದ್‌ನ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು.

ಕೆ.ವಿ. ತಿರುಮಲೇಶ್ ಕನ್ನಡದ ನವ್ಯಸಾಹಿತ್ಯದ ಸಂದರ್ಭದಲ್ಲಿ ಬರೆಯಲು ತೊಡಗಿದವರು. ಸುಮಾರು ಐದು ದಶಕಗಳ ಕಾಲ ಕವಿತೆ, ಕತೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಇವರ ಎರಡು ಜನಪ್ರಿಯ ಕೃತಿಗಳು. ಇವರ 20 ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಎಂಬುವು ಮುಖ್ಯ ಕವನ ಸಂಕಲನಗಳು. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು.ಮಾಲ್ಟ ಲೌರಿಡ್ಜ್ ಬ್ರಿಗ್ಗನ ಟಿಪ್ಪಣಿ ಪುಸ್ತಕ ಇವರ ಅನುವಾದಿತ ಕೃತಿ.ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಕರ್ನಾಟಕ ಸಾಹಿತ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಂಜನ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಇವರಿಗೆ ಸಂದಿವೆ. ಹೈದರಾಬಾದಿನ ಸಿ.ಐ.ಇ.ಎಫ್.ಎಲ್. (ಈಗ ಇ.ಎಫ್.ಎಲ್.ಯು.) ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞಾನದ ಪ್ರೊಫಸರರಾಗಿ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡದ ವಾಕ್ಯರಚನೆಯ ಕುರಿತು ಮತ್ತು ಕರ್ಮಣೀ ಪ್ರಯೋಗದ ನಿಯೋಗಗಳ ಕುರಿತು ಕ್ರಮಬದ್ಧವಾದ, ಸೂಕ್ಷ್ಮ ಒಳನೋಟಗಳನ್ನೊಳಗೊಂಡ ಭಾಷಾವೈಜ್ಞಾನಿಕ ಅಧ್ಯಯನ ಅವರ ಪಿ.ಎಚ್ ಡಿ. ಪ್ರಬಂಧ. ಬೇಂದ್ರೆಯವರ ಶೈಲಿಯ ಬಗ್ಗೆಯೂ ಮತ್ತಿತರ ಭಾಷಾಸಂಬಂಧಿ ವಿಷಯಗಳನ್ನು ಕುರಿತೂ ಹಲವಾರು ಲೇಖನಗಳನ್ನೂ, ಒಂದು ಲೇಖನ ಸಂಗ್ರಹವನ್ನೂ ಪ್ರಕಟಿಸಿದ್ದಾರೆ. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಅತ್ಯುತ್ತಮವಾದುದ್ದನ್ನೇ ಬರೆದರು. ಕನ್ನಡ ಭಾಷೆ ಮತ್ತು ವ್ಯಾಕರಣದ ಮೇಲೆ ಬಹಳ ಆಳವಾದ ಹಿಡಿತವನ್ನು ಹೊಂದಿದ್ದರು.

ಕೆ.ವಿ.ತಿರುಮಲೇಶ್ ಅವರ ಕುರಿತು ಸಾಹಿತಿ, ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬುಕ್‌ನಲ್ಲಿ ಬರೆದಿರುವ ಸಾಲುಗಳು– ಭಾಷೆಯ ಕುರಿತಾಗಿ ಅತ್ಯಂತ ಸೂಕ್ಷ್ಮವಾಗಿ ಮತ್ತು ನವಿರಾಗಿ ಯೋಚಿಸಿ ಬರೆಯುತ್ತಿದ್ದ ಕೆಲವೇ ಕೆಲವರಲ್ಲಿ ಕೆ.ವಿ.ತಿರುಮಲೇಶ್ ಕೂಡಾ ಒಬ್ಬರು. ಅವರು ಕವಿ, ಕತೆಗಾರ, ಅನುವಾದಕ, ಭಾಷಾ ವಿಜ್ಞಾನಿ, ಮತ್ತು ವಿಮರ್ಶಕ. ಅವರು ಕಾಸರಗೋಡಿನಲ್ಲಿದ್ದಾಗ ನಮಗೆಲ್ಲ ಬಹಳ ಹತ್ತಿರದವರಾಗಿದ್ದರು.

ತಿರುಮಲೇಶ್‌ ಹುಟ್ಟಿದ ಸ್ಥಳ ಕಾರಡ್ಕ ( ಸಪ್ಟಂಬರ 12, 1940) . ಇದೇ ಊರಿನಲ್ಲಿ ಹುಟ್ಟಿದ ಇನ್ನೊಬ್ಬ ಕವಿ ವೇಣುಗೋಪಾಲ ಕಾಸರಗೋಡು ಬಹಳ ಬೇಗ ತೀರಿಕೊಂಡರು. ಕಾರಡ್ಕದ ಕಾರಣಿಕ ಪುರುಷರು ಎಂದು ನಾನು ಅವರಿಗೆ ಹೇಳುತ್ತಿದ್ದೆ. ನವ್ಯಸಾಹಿತ್ಯ ಕಾಲದಲ್ಲಿ ಕಾಸರಗೋಡು ಬಹಳ ಕಾರಣಗಳಿಂದ ಸುದ್ದಿಯಲ್ಲಿತ್ತು. ತಿರುಮಲೇಶ್‌, ವೇಣುಗೋಪಾಲ ಕಾಸರಗೋಡು, ಎಂ. ಗಂಗಾಧರ ಭಟ್, ಯು ಮಹೇಶ್ವರಿ, ಲಲಿತಾ ಎಸ್‌ ಎನ್‌ ಭಟ್‌, ಮೊದಲಾದವರು ನವ್ಯ ಕಾಲಘಟ್ಟದ ದೊಡ್ಡ ಹೆಸರುಗಳು. ಇವರೆಲ್ಲ ಒಟ್ಟು ಸೇರಿ ಒಮ್ಮೆ ʼ ಕಯ್ಯಾರರು ಇನ್ನು ಬರೆಯಬೇಕಾಗಿಲ್ಲʼ ಎಂದು ಘೋಷಿಸಿ ದೊಡ್ಡ ಗುಲ್ಲೆಬ್ಬಿಸಿದ್ದರು.
ಮುಂದೆ ತಿರುಮಲೇಶ್‌ ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇರಿ ಅಲ್ಲಿಯೇ ನಿವೃತ್ತರಾದರು. ಹೊರನಾಡ ಕನ್ನಡಿಗರಾದ ನಾವು ಆ ಕಾರಣಕ್ಕೇನೇ ಹಲವು ವಿಷಯಗಳ ಬಗ್ಗೆ ಹರಟುತ್ತಿದ್ದೆವು.
ಕಳೆದ ಸುಮಾರು 50 ವರ್ಷಗಳಿಂದ ತಿರುಮಲೇಶ್‌ ಬರೆಯುತ್ತಲೇ ಇದ್ದರು. ‘ಮುಖವಾಡಗಳು’ ಹಾಗೂ ‘ವಠಾರ’ ಕವನ ಸಂಕಲನಗಳ ಮೂಲಕ ಅವರು ನವ್ಯ ಕಾಲಘಟ್ಟದಲ್ಲಿ ಜನಪ್ರಿಯರಾದರು. ಅಕ್ಷಯ ಕಾವ್ಯ, ಮಹಾಪ್ರಸ್ಥಾನ, ಅವಧ, ಪಾಪಿಯೂ , ಆರೋಪ, ಮುಸುಗು, ಕಳ್ಳಿಗಿಡದ ಹೂವು, ಸಮ್ಮುಖ, ಕಾವ್ಯಕಾರಣ ಇವರ ಇತರ ಮುಖ್ಯ ಕೃತಿಗಳು. ಕಲಿಗುಲ ಮತ್ತು ಟೈಬೀರಿಯಸ್‌ ಅವರಿಗೆ ಹೆಸರು ತಂದುಕೊಟ್ಟ ನಾಟಕಗಳು. ಡಾನ್ ಕ್ವಿಕ್ಸಾಟನ ಸಾಹಸಗಳು ಮತ್ತು ಗಂಟೆ ಗೋಪುರ ಅವರ ಒಳ್ಳೆಯ ಅನುವಾದಗಳು.
ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಮತ್ತು ಅಸ್ತಿತ್ವವಾದ ಇವರ ಮುಖ್ಯ ವಿಮರ್ಶಾ ಕೃತಿಗಳು.
ದೊಡ್ಡ ಲೇಖಕನೊಬ್ಬ ತೀರಿಕೊಂಡಾಗ ಸಹಜವಾಗಿ ಒಂದು ಬಗೆಯ ನಿರ್ವಾತ ಉಂಟಾಗುತ್ತದೆ. ಅದನ್ನು ಯಾರಾದರೂ ತುಂಬಿಸುವವರೆಗೆ ನಾವೆಲ್ಲ ಕಾಯಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...