Homeಅಂಕಣಗಳುನೂರರ ನೋಟ; ದೊಡ್ಡರಂಗೇಗೌಡರು ಆತ್ಮಾವಲೋಕನ ಮಾಡಿಕೊಳ್ಳಲಿ

ನೂರರ ನೋಟ; ದೊಡ್ಡರಂಗೇಗೌಡರು ಆತ್ಮಾವಲೋಕನ ಮಾಡಿಕೊಳ್ಳಲಿ

- Advertisement -
- Advertisement -

ಅಮೆರಿಕದಲ್ಲಿ ಒಂದು ಮಾತಿದೆ Get On, Get Honour, Get Honest ಎಂದು.

ಮೊದಲು Get On ಆಗಿ, ದೊಡ್ಡರಂಗೇಗೌಡರು ಸಾಹಿತಿ ಎನಿಸಿದರು. ಸಿನಿಮಾ ಹಾಡು ಬರೆಯುವುದರಲ್ಲೂ ಹೆಸರು ಮಾಡಿದರು.

ಮುಂದಿನ ಹೆಜ್ಜೆ Get Honour. ಬಿಜೆಪಿಯ ಮೇಲ್ಮನೆ ಸದಸ್ಯರಾದರು. ಸರ್ಕಾರದ ಪುಸ್ತಕಕೊಳ್ಳುವ ಸಮಿತಿಯ ಅಧ್ಯಕ್ಷರು ಆದರು. ಅನಾಯಾಸವಾಗಿ, ಬಿಜೆಪಿಯ ಸಹಕಾರದಿಂದ ಪದ್ಮಶ್ರೀ ಪ್ರಶಸ್ತಿಯೂ ದೊರೆಯಿತು.

ಇಷ್ಟೆಲ್ಲ ಗೌರವಗಳನ್ನು ಬಿಜೆಪಿ ಸರ್ಕಾರ ದೊಡ್ಡರಂಗೇಗೌಡರಿಗೆ ಬಳುವಳಿಯಾಗಿ ಕೊಟ್ಟಿರುವಾಗ ಅವರು ಬಿಜೆಪಿಗೆ ಪ್ರತ್ಯುಪಕಾರ ಮಾಡಿ ಸಾಲ ತೀರಿಸಬೇಡವೇ? ಕೃತಜ್ಞತೆ ಸಲ್ಲಿಸಬೇಡವೇ? ಈಗ ಅವರು Honest ಆಗುವ ಪ್ರಯತ್ನದಲ್ಲಿದ್ದಾರೆ. ಯಾರಿಗೆ Honest ಆಗುವುದು? ಬಿಜೆಪಿಗಲ್ಲದೆ ಬೇರೆ ಯಾರಿಗೆ Honest ಆಗುವುದು?

ಆದರೆ ಅವರು ಅದಕ್ಕಾಗಿ ಮೊದಲು ಆಯ್ಕೆಮಾಡಿದ್ದು ಹಿಂದಿ ಭಾಷೆಯನ್ನು ರಾಷ್ಟ್ರಭಾಷೆಯಾಗಿ ಒಪ್ಪಿಕೊಳ್ಳುವ ವಿಚಾರ ಪ್ರಸ್ತಾಪಿಸುವ ಮುಖಾಂತರ. ಕನ್ನಡಿಗರು ಹೆಮ್ಮೆ ಪಡಬಹುದಾದ, ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ಕನ್ನಡ ಸಾಹಿತ್ಯ ಪರಿಷತ್ತು ಅವರಿಗೆ ದಯಪಾಲಿಸಿತು. ಆ ಸುದ್ದಿ ತಿಳಿದ ಒಡನೆ ದೊಡ್ಡರಂಗೇಗೌಡರು ಮೊದಲಿಗೆ ಆಡಿದ ಮಾತು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಯನ್ನು ಸಮರ್ಥಿಸುವ ಮೂಲಕ ಕರ್ನಾಟಕ ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಏಕೆ ಒಪ್ಪಿಕೊಳ್ಳಬಾರದು ಎನ್ನುವ ರೀತಿಯಲ್ಲಿ ಪ್ರಶ್ನಿಸಿದರು. ಅವರೇ ಹೇಳಿರುವಂತೆ ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಚಲಾವಣೆಯಲ್ಲಿಲ್ಲ.

ಉತ್ತರ ಭಾರತದ ರಾಜ್ಯಗಳು ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಒಪ್ಪಿರುವ ಮಾತ್ರಕ್ಕೆ, ನಾವು, ಹಿಂದಿಯ ಗಂಧವೇ ಇಲ್ಲದ ದಕ್ಷಿಣ ಭಾರತದ ಜನ ಇದನ್ನು ಯಾಕೆ ಒಪ್ಪಬೇಕು ಎಂದು ಜನರು ಕೇಳಲಾರಂಭಿಸಿದರು. ದೊಡ್ಡರಂಗೇಗೌಡರ ಬಾಯಿ ಕಟ್ಟಿಹೋಯ್ತು. ಸಮ್ಮೇಳನದ ಸಮಯದಲ್ಲಿ ಕನ್ನಡಿಗರು ಒಕ್ಕೊರಲಿನಿಂದ ಸಮ್ಮೇಳಾನಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂಬ ಮತ್ತು ಬೆವರಿಳಿಸುತ್ತಾರೆಂಬ ಭಯ ದೊಡ್ಡರಂಗೇಗೌಡರನ್ನು ಕಾಡಲು ಆರಂಭವಾಯಿತು. ಸರ್ಕಾರಕ್ಕೂ ಈ ಭಯ ತಾಕಿ ಸಮ್ಮೇಳನವನ್ನೇ ಮುಂದಕ್ಕೆ ಹಾಕುವ ತೀರ್ಮಾನ ಕೈಗೊಂಡಿತು. ಸಂಬಂಧಪಟ್ಟ ಮಂತ್ರಿಗಳು ಸಮ್ಮೇಳನವನ್ನು ಮುಂದಕ್ಕೆ ಹಾಕಿರುವ ಸುದ್ದಿ ಪ್ರಕಟಿಸಿದರು.

ಈ ಮಧ್ಯೆ ದೊಡ್ಡರಂಗೇಗೌಡರು, ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದೂ ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆ ನಂತರ ಇನ್ನೊಂದು ಸಂದರ್ಭದಲ್ಲಿ ತಮ್ಮ ನಿಲುವನ್ನು ಬದಲಾಯಿಸಿರುವುದಾಗಿ ಹೇಳಿದರು. ಬಹುಶಃ ಸಮ್ಮೇಳನದಲ್ಲಿ ಎಲ್ಲ ಕನ್ನಡಿಗರ ಒಕ್ಕೊರಲಿನ ಪ್ರಕೋಪಕ್ಕೆ ಒಳಗಾಗಬಹುದು ಎಂಬ ಹೆದರಿಕೆ ಅವರನ್ನು ಕಾಡಿರಬಹುದು.

ಸಮ್ಮೇಳನ ಮುಂದಕ್ಕೆ ಹೋಯಿತು. ತಮಗೆ ಮೋದಿ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿದ್ದು ದೊಡ್ಡರಂಗೇಗೌಡರಿಗೆ ಮತ್ತೆ ಜ್ಞಾಪಕಕ್ಕೆ ಬಂದಿರಬೇಕು. ಬಿಜೆಪಿಗೆ ಕೃತಜ್ಞತೆ ಸಲ್ಲಿಸುವುದನ್ನು ಮರೆಯಬಾರದು ಎಂದುಕೊಂಡು, ಹಿಂದುತ್ವ ಪ್ರತಿಪಾದಕರ Hidden Agendaವನ್ನು ಒಂದೊಂದಾಗಿ ಸಮರ್ಥಿಸುವುದು ತಮ್ಮ ಕರ್ತವ್ಯ ಎಂದುಕೊಂಡು ಈಗ ಸಂವಿಧಾನವನ್ನು ಬದಲಿಸುವ ಪ್ರಸ್ತಾಪ ಮಾಡಿದ್ದಾರೆ. ಸಂವಿಧಾನದಲ್ಲಿ ಅಥವಾ ರಾಜ್ಯಾಂಗದಲ್ಲಿ ಏನೇನು ಬದಲಾವಣೆ ತರಬೇಕು ಎಂಬುದನ್ನು ವಿವರಿಸುವ ಧೈರ್ಯ ಅವರು ಮಾಡಲಿಲ್ಲ. ಮುಗುಮ್ಮಾಗಿ ಸಂವಿಧಾನದಲ್ಲಿ ಬದಲಾವಣೆಗೆ ತರಬೇಕು ಎಂದು ಸಾಹಿತ್ಯ ಸಮ್ಮೇಳನ ಒಂದರಲ್ಲಿ ಪ್ರಸ್ತಾಪಿಸಿದ್ದಾರೆ. ಈ ಮಾತಿಗೂ ಸಾಕಷ್ಟು ಪ್ರತಿಭಟನೆ ವ್ಯಕ್ತವಾಗಿದೆ. ಹಾವೇರಿ ಸಮ್ಮೇಳನ ನಡೆಯುವುದೇ ಆದರೆ ಕನ್ನಡಿಗರು ದೊಡ್ಡರಂಗೇಗೌಡರಿಗೆ ಚಾರಿತ್ರಿಕ ಪ್ರತಿಭಟನೆ ತೋರುತ್ತಾರೆ. ಬಿಜೆಪಿಯ ವಕ್ತಾರನಾಗಲು ಬಯಸುವ ನಾನು ಯಾಕಾದರು ಈ ಸಮ್ಮೇಳನಾಧ್ಯಕ್ಷ ಪದವಿಯನ್ನು ಒಪ್ಪಿಕೊಂಡೆ ಎಂದು ಪರಿತಪಿಸುತ್ತಾರೆ.

ದೊಡ್ಡರಂಗೇಗೌಡರು ಇನ್ನು ಮುಂದೆ ಕನ್ನಡಿಗರ ಹಿತವನ್ನು ಕಾಪಾಡುವವರಲ್ಲ. ಅವರು ಬಿಜೆಪಿಯ ಬಾಯಿ ಹರುಕ ಶಾಸಕರಂತೆ ತಾವೂ ಒಬ್ಬ ವಕ್ತಾರರಾಗಿ ಪರಿವರ್ತನೆಗೊಳ್ಳುವವರು ಎಂಬುದನ್ನು ಸಾಬೀತುಮಾಡಿದ್ದಾರೆ.
ಮನುಷ್ಯ ಎಷ್ಟೇ ಬುದ್ಧಿವಂತನಾಗಿರಲಿ, ಬದ್ಧತೆಯನ್ನುಳ್ಳವನಾಗಿರಲಿ ಸರ್ಕಾರ ನೀಡುವ ಬಿರುದು ಬಾವಲಿ ಸ್ಥಾನಮಾನಗಳಿಗೆ ಮನ ಸೋತರೆ ಎಷ್ಟು ಕ್ರೂರನಾಗಬಲ್ಲ, ದಾಸನಾಗಬಲ್ಲ ಎಂಬುದಕ್ಕೆ ಜ್ವಲಂತ ಉದಾಹರಣೆ ದೊಡ್ಡರಂಗೇಗೌಡರು.

ದೊಡ್ಡರಂಗೇಗೌಡರನ್ನು ಅನೇಕ ವರ್ಷಗಳಿಂದ ಬಲ್ಲವನು ನಾನು. ಅವರನ್ನು ಕಂಡರೆ ನನಗೆ ತುಂಬ ಗೌರವ, ಮೆಚ್ಚುಗೆ. ಅವರಿಗೆ ತಮ್ಮ ಹೆಸರು ಬೆಳಗಬೇಕು ಎಂಬ ಆಸೆ ಇತ್ತು. ಅದನ್ನೂ ನಾನು ಬಲ್ಲೆ. ಆದರೆ ಅವರು For a pot of Porridgeಗೋಸ್ಕರ ತಮ್ಮ soulಅನ್ನೇ ಮಾರಿಕೊಳ್ಳುವವರು ಎಂದು ನಾನು ಭಾವಿಸಿರಲಿಲ್ಲ. ಕನ್ನಡಿಗರೆಲ್ಲರ ಹೃನ್ಮನಗಳನ್ನು ಗೆದ್ದಿದ್ದ ಅವರಿಗೆ ಪದ್ಮಭೂಷಣ ಎಂಬ ಚಿನ್ನದ ಉರುಳು ಜನರ ಮನ್ನಣೆಗಿಂತ ಹೆಚ್ಚಾಯಿತೇ? What a fall my Countrymen!

ಕನ್ನಡದ ಜನತೆಗೆಲ್ಲರಿಗೂ ಬೇಕಾಗಿದ್ದ ಅವರು ಈಗ ಹಿಂದುತ್ವ ಪ್ರತಿಪಾದಕರ ಸಣ್ಣ ಪಂಗಡದ ಅಡಿಯಾಳಾದರೇಕೆ ಎಂಬುದು ನನ್ನನ್ನು ಬಾಧಿಸುವ ಪ್ರಶ್ನೆ.


ಇದನ್ನೂ ಓದಿ: “ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...