Homeಅಂಕಣಗಳುನೂರರ ನೋಟ; ದೊಡ್ಡರಂಗೇಗೌಡರು ಆತ್ಮಾವಲೋಕನ ಮಾಡಿಕೊಳ್ಳಲಿ

ನೂರರ ನೋಟ; ದೊಡ್ಡರಂಗೇಗೌಡರು ಆತ್ಮಾವಲೋಕನ ಮಾಡಿಕೊಳ್ಳಲಿ

- Advertisement -
- Advertisement -

ಅಮೆರಿಕದಲ್ಲಿ ಒಂದು ಮಾತಿದೆ Get On, Get Honour, Get Honest ಎಂದು.

ಮೊದಲು Get On ಆಗಿ, ದೊಡ್ಡರಂಗೇಗೌಡರು ಸಾಹಿತಿ ಎನಿಸಿದರು. ಸಿನಿಮಾ ಹಾಡು ಬರೆಯುವುದರಲ್ಲೂ ಹೆಸರು ಮಾಡಿದರು.

ಮುಂದಿನ ಹೆಜ್ಜೆ Get Honour. ಬಿಜೆಪಿಯ ಮೇಲ್ಮನೆ ಸದಸ್ಯರಾದರು. ಸರ್ಕಾರದ ಪುಸ್ತಕಕೊಳ್ಳುವ ಸಮಿತಿಯ ಅಧ್ಯಕ್ಷರು ಆದರು. ಅನಾಯಾಸವಾಗಿ, ಬಿಜೆಪಿಯ ಸಹಕಾರದಿಂದ ಪದ್ಮಶ್ರೀ ಪ್ರಶಸ್ತಿಯೂ ದೊರೆಯಿತು.

ಇಷ್ಟೆಲ್ಲ ಗೌರವಗಳನ್ನು ಬಿಜೆಪಿ ಸರ್ಕಾರ ದೊಡ್ಡರಂಗೇಗೌಡರಿಗೆ ಬಳುವಳಿಯಾಗಿ ಕೊಟ್ಟಿರುವಾಗ ಅವರು ಬಿಜೆಪಿಗೆ ಪ್ರತ್ಯುಪಕಾರ ಮಾಡಿ ಸಾಲ ತೀರಿಸಬೇಡವೇ? ಕೃತಜ್ಞತೆ ಸಲ್ಲಿಸಬೇಡವೇ? ಈಗ ಅವರು Honest ಆಗುವ ಪ್ರಯತ್ನದಲ್ಲಿದ್ದಾರೆ. ಯಾರಿಗೆ Honest ಆಗುವುದು? ಬಿಜೆಪಿಗಲ್ಲದೆ ಬೇರೆ ಯಾರಿಗೆ Honest ಆಗುವುದು?

ಆದರೆ ಅವರು ಅದಕ್ಕಾಗಿ ಮೊದಲು ಆಯ್ಕೆಮಾಡಿದ್ದು ಹಿಂದಿ ಭಾಷೆಯನ್ನು ರಾಷ್ಟ್ರಭಾಷೆಯಾಗಿ ಒಪ್ಪಿಕೊಳ್ಳುವ ವಿಚಾರ ಪ್ರಸ್ತಾಪಿಸುವ ಮುಖಾಂತರ. ಕನ್ನಡಿಗರು ಹೆಮ್ಮೆ ಪಡಬಹುದಾದ, ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ಕನ್ನಡ ಸಾಹಿತ್ಯ ಪರಿಷತ್ತು ಅವರಿಗೆ ದಯಪಾಲಿಸಿತು. ಆ ಸುದ್ದಿ ತಿಳಿದ ಒಡನೆ ದೊಡ್ಡರಂಗೇಗೌಡರು ಮೊದಲಿಗೆ ಆಡಿದ ಮಾತು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಯನ್ನು ಸಮರ್ಥಿಸುವ ಮೂಲಕ ಕರ್ನಾಟಕ ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಏಕೆ ಒಪ್ಪಿಕೊಳ್ಳಬಾರದು ಎನ್ನುವ ರೀತಿಯಲ್ಲಿ ಪ್ರಶ್ನಿಸಿದರು. ಅವರೇ ಹೇಳಿರುವಂತೆ ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಚಲಾವಣೆಯಲ್ಲಿಲ್ಲ.

ಉತ್ತರ ಭಾರತದ ರಾಜ್ಯಗಳು ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಒಪ್ಪಿರುವ ಮಾತ್ರಕ್ಕೆ, ನಾವು, ಹಿಂದಿಯ ಗಂಧವೇ ಇಲ್ಲದ ದಕ್ಷಿಣ ಭಾರತದ ಜನ ಇದನ್ನು ಯಾಕೆ ಒಪ್ಪಬೇಕು ಎಂದು ಜನರು ಕೇಳಲಾರಂಭಿಸಿದರು. ದೊಡ್ಡರಂಗೇಗೌಡರ ಬಾಯಿ ಕಟ್ಟಿಹೋಯ್ತು. ಸಮ್ಮೇಳನದ ಸಮಯದಲ್ಲಿ ಕನ್ನಡಿಗರು ಒಕ್ಕೊರಲಿನಿಂದ ಸಮ್ಮೇಳಾನಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂಬ ಮತ್ತು ಬೆವರಿಳಿಸುತ್ತಾರೆಂಬ ಭಯ ದೊಡ್ಡರಂಗೇಗೌಡರನ್ನು ಕಾಡಲು ಆರಂಭವಾಯಿತು. ಸರ್ಕಾರಕ್ಕೂ ಈ ಭಯ ತಾಕಿ ಸಮ್ಮೇಳನವನ್ನೇ ಮುಂದಕ್ಕೆ ಹಾಕುವ ತೀರ್ಮಾನ ಕೈಗೊಂಡಿತು. ಸಂಬಂಧಪಟ್ಟ ಮಂತ್ರಿಗಳು ಸಮ್ಮೇಳನವನ್ನು ಮುಂದಕ್ಕೆ ಹಾಕಿರುವ ಸುದ್ದಿ ಪ್ರಕಟಿಸಿದರು.

ಈ ಮಧ್ಯೆ ದೊಡ್ಡರಂಗೇಗೌಡರು, ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದೂ ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆ ನಂತರ ಇನ್ನೊಂದು ಸಂದರ್ಭದಲ್ಲಿ ತಮ್ಮ ನಿಲುವನ್ನು ಬದಲಾಯಿಸಿರುವುದಾಗಿ ಹೇಳಿದರು. ಬಹುಶಃ ಸಮ್ಮೇಳನದಲ್ಲಿ ಎಲ್ಲ ಕನ್ನಡಿಗರ ಒಕ್ಕೊರಲಿನ ಪ್ರಕೋಪಕ್ಕೆ ಒಳಗಾಗಬಹುದು ಎಂಬ ಹೆದರಿಕೆ ಅವರನ್ನು ಕಾಡಿರಬಹುದು.

ಸಮ್ಮೇಳನ ಮುಂದಕ್ಕೆ ಹೋಯಿತು. ತಮಗೆ ಮೋದಿ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿದ್ದು ದೊಡ್ಡರಂಗೇಗೌಡರಿಗೆ ಮತ್ತೆ ಜ್ಞಾಪಕಕ್ಕೆ ಬಂದಿರಬೇಕು. ಬಿಜೆಪಿಗೆ ಕೃತಜ್ಞತೆ ಸಲ್ಲಿಸುವುದನ್ನು ಮರೆಯಬಾರದು ಎಂದುಕೊಂಡು, ಹಿಂದುತ್ವ ಪ್ರತಿಪಾದಕರ Hidden Agendaವನ್ನು ಒಂದೊಂದಾಗಿ ಸಮರ್ಥಿಸುವುದು ತಮ್ಮ ಕರ್ತವ್ಯ ಎಂದುಕೊಂಡು ಈಗ ಸಂವಿಧಾನವನ್ನು ಬದಲಿಸುವ ಪ್ರಸ್ತಾಪ ಮಾಡಿದ್ದಾರೆ. ಸಂವಿಧಾನದಲ್ಲಿ ಅಥವಾ ರಾಜ್ಯಾಂಗದಲ್ಲಿ ಏನೇನು ಬದಲಾವಣೆ ತರಬೇಕು ಎಂಬುದನ್ನು ವಿವರಿಸುವ ಧೈರ್ಯ ಅವರು ಮಾಡಲಿಲ್ಲ. ಮುಗುಮ್ಮಾಗಿ ಸಂವಿಧಾನದಲ್ಲಿ ಬದಲಾವಣೆಗೆ ತರಬೇಕು ಎಂದು ಸಾಹಿತ್ಯ ಸಮ್ಮೇಳನ ಒಂದರಲ್ಲಿ ಪ್ರಸ್ತಾಪಿಸಿದ್ದಾರೆ. ಈ ಮಾತಿಗೂ ಸಾಕಷ್ಟು ಪ್ರತಿಭಟನೆ ವ್ಯಕ್ತವಾಗಿದೆ. ಹಾವೇರಿ ಸಮ್ಮೇಳನ ನಡೆಯುವುದೇ ಆದರೆ ಕನ್ನಡಿಗರು ದೊಡ್ಡರಂಗೇಗೌಡರಿಗೆ ಚಾರಿತ್ರಿಕ ಪ್ರತಿಭಟನೆ ತೋರುತ್ತಾರೆ. ಬಿಜೆಪಿಯ ವಕ್ತಾರನಾಗಲು ಬಯಸುವ ನಾನು ಯಾಕಾದರು ಈ ಸಮ್ಮೇಳನಾಧ್ಯಕ್ಷ ಪದವಿಯನ್ನು ಒಪ್ಪಿಕೊಂಡೆ ಎಂದು ಪರಿತಪಿಸುತ್ತಾರೆ.

ದೊಡ್ಡರಂಗೇಗೌಡರು ಇನ್ನು ಮುಂದೆ ಕನ್ನಡಿಗರ ಹಿತವನ್ನು ಕಾಪಾಡುವವರಲ್ಲ. ಅವರು ಬಿಜೆಪಿಯ ಬಾಯಿ ಹರುಕ ಶಾಸಕರಂತೆ ತಾವೂ ಒಬ್ಬ ವಕ್ತಾರರಾಗಿ ಪರಿವರ್ತನೆಗೊಳ್ಳುವವರು ಎಂಬುದನ್ನು ಸಾಬೀತುಮಾಡಿದ್ದಾರೆ.
ಮನುಷ್ಯ ಎಷ್ಟೇ ಬುದ್ಧಿವಂತನಾಗಿರಲಿ, ಬದ್ಧತೆಯನ್ನುಳ್ಳವನಾಗಿರಲಿ ಸರ್ಕಾರ ನೀಡುವ ಬಿರುದು ಬಾವಲಿ ಸ್ಥಾನಮಾನಗಳಿಗೆ ಮನ ಸೋತರೆ ಎಷ್ಟು ಕ್ರೂರನಾಗಬಲ್ಲ, ದಾಸನಾಗಬಲ್ಲ ಎಂಬುದಕ್ಕೆ ಜ್ವಲಂತ ಉದಾಹರಣೆ ದೊಡ್ಡರಂಗೇಗೌಡರು.

ದೊಡ್ಡರಂಗೇಗೌಡರನ್ನು ಅನೇಕ ವರ್ಷಗಳಿಂದ ಬಲ್ಲವನು ನಾನು. ಅವರನ್ನು ಕಂಡರೆ ನನಗೆ ತುಂಬ ಗೌರವ, ಮೆಚ್ಚುಗೆ. ಅವರಿಗೆ ತಮ್ಮ ಹೆಸರು ಬೆಳಗಬೇಕು ಎಂಬ ಆಸೆ ಇತ್ತು. ಅದನ್ನೂ ನಾನು ಬಲ್ಲೆ. ಆದರೆ ಅವರು For a pot of Porridgeಗೋಸ್ಕರ ತಮ್ಮ soulಅನ್ನೇ ಮಾರಿಕೊಳ್ಳುವವರು ಎಂದು ನಾನು ಭಾವಿಸಿರಲಿಲ್ಲ. ಕನ್ನಡಿಗರೆಲ್ಲರ ಹೃನ್ಮನಗಳನ್ನು ಗೆದ್ದಿದ್ದ ಅವರಿಗೆ ಪದ್ಮಭೂಷಣ ಎಂಬ ಚಿನ್ನದ ಉರುಳು ಜನರ ಮನ್ನಣೆಗಿಂತ ಹೆಚ್ಚಾಯಿತೇ? What a fall my Countrymen!

ಕನ್ನಡದ ಜನತೆಗೆಲ್ಲರಿಗೂ ಬೇಕಾಗಿದ್ದ ಅವರು ಈಗ ಹಿಂದುತ್ವ ಪ್ರತಿಪಾದಕರ ಸಣ್ಣ ಪಂಗಡದ ಅಡಿಯಾಳಾದರೇಕೆ ಎಂಬುದು ನನ್ನನ್ನು ಬಾಧಿಸುವ ಪ್ರಶ್ನೆ.


ಇದನ್ನೂ ಓದಿ: “ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...