Homeಕರ್ನಾಟಕದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

ದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

- Advertisement -
- Advertisement -

ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಆನಂದ ಅವರು ಮೇ 20ರಂದು ನಿಧನ ಹೊಂದಿದ್ದಾರೆ.

44ರ ಹರೆಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾಗಿದ್ದಾರೆ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಇವರು ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ವಿಸಾಜಿ ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದರು.
ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ಲಕ್ಕೂರು ಆನಂದ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಲಭಿಸಿದೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, ‘ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ’ ಅರ್ಪಿಸಿದ್ದಾರೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕ ವಿಕ್ರಮ್‌ ವಿಸಾಜಿ ಘಟನೆ ಬಗ್ಗೆ ದುಃಖವನ್ನು ವ್ಯಕ್ತಪಡಿಸಿ ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ಲಕ್ಕೂರು ಆನಂದ ಅವರು ಗುಲ್ಬರ್ಗ ವಿವಿಯಲ್ಲಿ ಡಾ. ವಿಜಯ್‌ ಕುಮಾರ್‌ ಅವರ ಅಧೀನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು. ನಾವು ಘಟನಾ ಸ್ಥಳಕ್ಕೆ ತೆರಳಿದ್ದೆವು, ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ. ಅವರು ಉತ್ತಮ ಕವಿ, ಉತ್ತಮ ಅನುವಾದಕ ಮತ್ತು ಅಮೋಘ ಪ್ರತಿಭೆಯನ್ನು ಹೊಂದಿದ್ದರು. ತೆಲಗು ಕವಿ ಚಲಂ ಅವರ ಪತ್ರಗಳನ್ನು ಉತ್ತಮವಾಗಿ ಅನುವಾದ ಮಾಡಿದ್ದರು, ಬಹಳ ಆತ್ಮೀಯರಾಗಿದ್ದರು, ಅವರ ಅಗಲಿಕೆಯಿಂದ ಅಪಾರ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...