Homeಕರ್ನಾಟಕದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

ದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

- Advertisement -
- Advertisement -

ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಆನಂದ ಅವರು ಮೇ 20ರಂದು ನಿಧನ ಹೊಂದಿದ್ದಾರೆ.

44ರ ಹರೆಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾಗಿದ್ದಾರೆ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಇವರು ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ವಿಸಾಜಿ ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದರು.
ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ಲಕ್ಕೂರು ಆನಂದ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಲಭಿಸಿದೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, ‘ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ’ ಅರ್ಪಿಸಿದ್ದಾರೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕ ವಿಕ್ರಮ್‌ ವಿಸಾಜಿ ಘಟನೆ ಬಗ್ಗೆ ದುಃಖವನ್ನು ವ್ಯಕ್ತಪಡಿಸಿ ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ಲಕ್ಕೂರು ಆನಂದ ಅವರು ಗುಲ್ಬರ್ಗ ವಿವಿಯಲ್ಲಿ ಡಾ. ವಿಜಯ್‌ ಕುಮಾರ್‌ ಅವರ ಅಧೀನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು. ನಾವು ಘಟನಾ ಸ್ಥಳಕ್ಕೆ ತೆರಳಿದ್ದೆವು, ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ. ಅವರು ಉತ್ತಮ ಕವಿ, ಉತ್ತಮ ಅನುವಾದಕ ಮತ್ತು ಅಮೋಘ ಪ್ರತಿಭೆಯನ್ನು ಹೊಂದಿದ್ದರು. ತೆಲಗು ಕವಿ ಚಲಂ ಅವರ ಪತ್ರಗಳನ್ನು ಉತ್ತಮವಾಗಿ ಅನುವಾದ ಮಾಡಿದ್ದರು, ಬಹಳ ಆತ್ಮೀಯರಾಗಿದ್ದರು, ಅವರ ಅಗಲಿಕೆಯಿಂದ ಅಪಾರ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...