Homeಚಳವಳಿಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

ಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

- Advertisement -
- Advertisement -

ವೈದ್ಯಕೀಯ ಜಾಮೀನಿನ ಮೇಲಿರುವ ಕವಿ ಹೋರಾಟಗಾರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆರೋಪಿಯಾಗಿರುವ ವರವರ ರಾವ್ ಅವರ ಜಾಮೀನು ಅವಧಿಯನ್ನು ಶುಕ್ರವಾರ ಫೆಬ್ರವರಿ 5 ರವರೆಗೆ ಬಾಂಬೆ ಹೈಕೋರ್ಟ್ ವಿಸ್ತರಿಸಿದೆ.

ಕಳೆದ ವರ್ಷ ಫೆಬ್ರವರಿ 22 ರಂದು  ಬಾಂಬೆ ಹೈಕೋರ್ಟ್ಎಂಟು ತಿಂಗಳ ಕಾಲ ವೈದ್ಯಕೀಯ ಜಾಮೀನು ಮಂಜೂರು ಮಾಡಿತ್ತು. ಬಳಿಕ ಅದನ್ನು 2022ರ ಜನವರಿ 7 ರವರೆಗೆ ವಿಸ್ತರಿಸಲು ಅನುಮತಿ ನೀಡಲಾಗಿತ್ತು.

ಶುಕ್ರವಾರ, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್ ಶಿಂಧೆ ಮತ್ತು ಎನ್.ಆರ್ ಬೋರ್ಕರ್ ಅವರ ವಿಭಾಗೀಯ ಪೀಠ, ಒಂದು ವಾರದವರೆಗೆ ಮಾತ್ರ ಜಾಮೀನು ವಿಸ್ತರಿಬೇಕು ಎಂಬ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮನವಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

“ಮೂರನೇ ಅಲೆಯು 50 ರಿಂದ 60 ದಿನಗಳವರೆಗೆ ಇರಬಲ್ಲದು ಎಂದು ತಜ್ಞರು ಹೇಳುತ್ತಾರೆ. ಫ್ರಂಟ್ ಲೈನ್ ವರ್ಕರ್ಸ್ ಮತ್ತು ಪೊಲೀಸ್ ಸಿಬ್ಬಂದಿ ಕೋವಿಡ್‌ ಸೊಂಕಿಗೆ ಒಳಗಾಗುತ್ತಿದ್ದಾರೆ. ಅಂಕಿಅಂಶಗಳು ಮೊದಲ ಅಥವಾ ಎರಡನೆಯ ಅಲೆಯಲ್ಲಿ ಇದ್ದಂತೆ ಇಲ್ಲ. ಹೀಗಿರುವಾಗ ಅವರನ್ನು (ವರವರ ರಾವ್) ಜೈಲಿಗೆ ಕಳುಹಿಸಲು ಸಾಧ್ಯವೇ..? ನಮಗೆ ಸ್ವಲ್ಪ ಉಸಿರಾಡಲು ಬಿಡಿ” ಎಂದು ನ್ಯಾಯಮೂರ್ತಿ ಶಿಂಧೆ ಮೌಖಿಕವಾಗಿಯೇ ತನಿಖಾ ಸಂಸ್ಥೆಯನ್ನು ಟೀಕಿಸಿದ್ದಾರೆ.

ನ್ಯಾಯಮೂರ್ತಿಗಳಾದ ಶಿಂಧೆ ಮತ್ತು ಬೋರ್ಕರ್ ಅವರ ಪೀಠವು, ರಾವ್ ಅವರು ಸಲ್ಲಿಸಿದ ಹೊಸ ಅರ್ಜಿಗಳು ಸೇರಿದಂತೆ ಎಲ್ಲಾ ವಿವಾದಗಳನ್ನು ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 4 ರಂದು ಪರಿಗಣಿಸುವುದಾಗಿ ಹೇಳಿದೆ. ಜೊತೆಗೆ ವರವರ ರಾವ್ ಅವರ ಜಾಮೀನನ್ನು ಫೆಬ್ರವರಿ 5 ರವರೆಗೆ ವಿಸ್ತರಿಸಿದೆ.

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ಎಲ್ಗರ್ ಪರಿಷತ್ ಸಮಾವೇಶ ನಡೆದಿತ್ತು. ಈ ಸಮಾವೇಶದ ಮರುದಿನ ಪಶ್ಚಿಮ ಮಹಾರಾಷ್ಟ್ರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ಭುಗಿಲೆದ್ದಿತ್ತು. ಸಮಾವೇಶದಲ್ಲಿ ಇವರು ಉದ್ರೇಕಕಾರಿ ಭಾಷಣ ಮಾಡಿದ್ದಾರೆ, ಇದರಿಂದಾಗಿ ಹಿಂಸಾಚಾರ ಸಂಭವಿಸಿದೆ ಎಂದು ಆರೋಪಿಸಿ ಅವರನ್ನು ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...