Homeಚಳವಳಿಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

ಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

- Advertisement -
- Advertisement -

ವೈದ್ಯಕೀಯ ಜಾಮೀನಿನ ಮೇಲಿರುವ ಕವಿ ಹೋರಾಟಗಾರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆರೋಪಿಯಾಗಿರುವ ವರವರ ರಾವ್ ಅವರ ಜಾಮೀನು ಅವಧಿಯನ್ನು ಶುಕ್ರವಾರ ಫೆಬ್ರವರಿ 5 ರವರೆಗೆ ಬಾಂಬೆ ಹೈಕೋರ್ಟ್ ವಿಸ್ತರಿಸಿದೆ.

ಕಳೆದ ವರ್ಷ ಫೆಬ್ರವರಿ 22 ರಂದು  ಬಾಂಬೆ ಹೈಕೋರ್ಟ್ಎಂಟು ತಿಂಗಳ ಕಾಲ ವೈದ್ಯಕೀಯ ಜಾಮೀನು ಮಂಜೂರು ಮಾಡಿತ್ತು. ಬಳಿಕ ಅದನ್ನು 2022ರ ಜನವರಿ 7 ರವರೆಗೆ ವಿಸ್ತರಿಸಲು ಅನುಮತಿ ನೀಡಲಾಗಿತ್ತು.

ಶುಕ್ರವಾರ, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್ ಶಿಂಧೆ ಮತ್ತು ಎನ್.ಆರ್ ಬೋರ್ಕರ್ ಅವರ ವಿಭಾಗೀಯ ಪೀಠ, ಒಂದು ವಾರದವರೆಗೆ ಮಾತ್ರ ಜಾಮೀನು ವಿಸ್ತರಿಬೇಕು ಎಂಬ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮನವಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

“ಮೂರನೇ ಅಲೆಯು 50 ರಿಂದ 60 ದಿನಗಳವರೆಗೆ ಇರಬಲ್ಲದು ಎಂದು ತಜ್ಞರು ಹೇಳುತ್ತಾರೆ. ಫ್ರಂಟ್ ಲೈನ್ ವರ್ಕರ್ಸ್ ಮತ್ತು ಪೊಲೀಸ್ ಸಿಬ್ಬಂದಿ ಕೋವಿಡ್‌ ಸೊಂಕಿಗೆ ಒಳಗಾಗುತ್ತಿದ್ದಾರೆ. ಅಂಕಿಅಂಶಗಳು ಮೊದಲ ಅಥವಾ ಎರಡನೆಯ ಅಲೆಯಲ್ಲಿ ಇದ್ದಂತೆ ಇಲ್ಲ. ಹೀಗಿರುವಾಗ ಅವರನ್ನು (ವರವರ ರಾವ್) ಜೈಲಿಗೆ ಕಳುಹಿಸಲು ಸಾಧ್ಯವೇ..? ನಮಗೆ ಸ್ವಲ್ಪ ಉಸಿರಾಡಲು ಬಿಡಿ” ಎಂದು ನ್ಯಾಯಮೂರ್ತಿ ಶಿಂಧೆ ಮೌಖಿಕವಾಗಿಯೇ ತನಿಖಾ ಸಂಸ್ಥೆಯನ್ನು ಟೀಕಿಸಿದ್ದಾರೆ.

ನ್ಯಾಯಮೂರ್ತಿಗಳಾದ ಶಿಂಧೆ ಮತ್ತು ಬೋರ್ಕರ್ ಅವರ ಪೀಠವು, ರಾವ್ ಅವರು ಸಲ್ಲಿಸಿದ ಹೊಸ ಅರ್ಜಿಗಳು ಸೇರಿದಂತೆ ಎಲ್ಲಾ ವಿವಾದಗಳನ್ನು ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 4 ರಂದು ಪರಿಗಣಿಸುವುದಾಗಿ ಹೇಳಿದೆ. ಜೊತೆಗೆ ವರವರ ರಾವ್ ಅವರ ಜಾಮೀನನ್ನು ಫೆಬ್ರವರಿ 5 ರವರೆಗೆ ವಿಸ್ತರಿಸಿದೆ.

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ಎಲ್ಗರ್ ಪರಿಷತ್ ಸಮಾವೇಶ ನಡೆದಿತ್ತು. ಈ ಸಮಾವೇಶದ ಮರುದಿನ ಪಶ್ಚಿಮ ಮಹಾರಾಷ್ಟ್ರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ಭುಗಿಲೆದ್ದಿತ್ತು. ಸಮಾವೇಶದಲ್ಲಿ ಇವರು ಉದ್ರೇಕಕಾರಿ ಭಾಷಣ ಮಾಡಿದ್ದಾರೆ, ಇದರಿಂದಾಗಿ ಹಿಂಸಾಚಾರ ಸಂಭವಿಸಿದೆ ಎಂದು ಆರೋಪಿಸಿ ಅವರನ್ನು ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...