ಕಾದಿದ್ದೇನೆ

- Advertisement -
- Advertisement -

ಎಷ್ಟೆಂದು ಬಿಚ್ಚಿಡಲಿ ನನ್ನೊಳಗನ್ನು?
ಹೇಗೆ ನಿರೂಪಿಸಲಿ ನನ್ನ ನಂಬಿಕೆಯನ್ನು
ಒಂದೊಂದೇ ವಸ್ತ್ರ ಕಳಚಿ ಬೆತ್ತಲಾಗಿಸಿ
ದೇಹದ ಇಂಚಿಂಚನ್ನೂ ಭೂತಗನ್ನಡಿಯಲ್ಲಿ
ಉಗುರು, ಹಲ್ಲಿನ ಗುರುತಿಗಾಗಿ ತಡಕಾಡುವಾಗ
ನಾನು ಹೆಣ್ಣಾದ ನೋವು ಎದೆಯ ಗೀರನ್ನು ಆಳವಾಗಿಸಿದೆ

ಹೆಣ್ಣೆಂಬ ಆಕಾರವೇ ಜೊಲ್ಲು ಸುರಿಸುವಂತಿರುವಾಗ
ಮಧ್ಯರಾತ್ರಿಯ ಉಬ್ಬುತಗ್ಗುಗಳ ಕನವರಿಕೆಯಲ್ಲಿ
ದಕ್ಕಿಸಿಕೊಂಡ ಸುಖ, ಸುಖವೆನಿಸದೇ
ಮರ್ಮಾಂಗಕ್ಕೆ ಸಲಾಕೆ ನುಗ್ಗಿಸಿ ಪಡುವ
ತೃಪ್ತಿಯ ಅಟ್ಟಹಾಸದ ಕೆಕೆ ಯಲ್ಲಿ
ಹೆಣ್ಣೆಂಬ ಶಬ್ಧ ನನ್ನ ಮೈಗೂ ಅಂಟಿ ತಲ್ಲಣಿಸುವಂತೆ ಮಾಡಿದೆ

ಹೊರ ಪ್ರಪಂಚದ ಮಾತು ಬೇಡ
ಮನೆಯೊಳಗಣ ಜಗತ್ತೂ ಕ್ರೌರ್ಯದ ಉತ್ತುಂಗದಲ್ಲಿ
ವಿಜೃಂಭಿಸಿ ಭೀಷಣವಾಗಿ ನಗುತ್ತ
ದಿನ ತುಂಬದೆ ಹುಟ್ಟಿದ ಹಸುಳೆಯ ಬಾಯೊಳಗೆ
ಅಳ್ಳೆಯ ತುಂಬ ಕಳ್ಳಿಯ ಹಾಲೆರೆದು ನೀಲಿಗಟ್ಟಿದಾಗ
ಅಯ್ಯೋ, ನಾನು ಹುಟ್ಟಿದ್ದೂ ಹೆಣ್ಣಾಗಿಯೇ….

ಬಸಿರು ಸಂಕಟದ ಯಮಯಾತನೆಯ ಮಾತು ಬಿಡಿ
ಸೋರುವ ರಕ್ತವ ಕಾಣದಂತೆ ಪ್ಯಾಡ್‍ಗಳಲ್ಲೇ ಇಂಗಿಸಿ
ಮುಟ್ಟಿನ ಬೆನ್ನು, ಹೊಟ್ಟೆಯ ನೋವಲ್ಲೂ ಬಗ್ಗಿ
ಮುಟ್ಟಿದರೂ ನೋಯುವ ತುಂಬಿದ ಮೊಲೆಗಳ ಬಾಯಿಗಿಟ್ಟು
ಚಪ್ಪರಿಸುವ ಪರಿ ನೋಡಲಾಗದಿದ್ದರೂ
ಹಸ್ತ, ಬಾಯಿ, ಮುಖ ಮೈಥುನಕ್ಕೆ ಸಿದ್ಧಳಾಗುವವವಳ ಕಂಡಾಗ
ಎದೆ ಝಲ್ಲೆಂದು ಬೆದರುತ್ತದೆ ನಾನು ಹೆಣ್ಣಾದ ಸಂಕಟಕ್ಕೆ

ಅಲ್ಲೆಲ್ಲೋ ಹಿಂಬಾಲಿಸಿದವನಿಗೆ ಚಪ್ಪಲಿಯೇಟು ನೀಡಿದ
ಮೈ ಮುಟ್ಟಿದಾತನಿಗೆ ಮರಣಮೃದಂಗವಾಡಿಸಿದ
ದುರಾಚಾರಕ್ಕೆರಗಿದವನ ಶಿಶ್ನ ಕತ್ತರಿಸಿದ
ಮನೆಯ ನಾಲ್ಕು ಗೋಡೆಯ ಒಳಗೂ
ಬಲವಂತವ ಧಿಕ್ಕರಿಸಿ ಕೋರ್ಟಿನ ಕಟಕಟೆ ಹತ್ತಿದ ಸುದ್ದಿ
ಗಾಳಿಯೊಂದಿಗೆ ಅಲೆಅಲೆಯಾಗಿ ತೇಲಿ ಬಂದಿದೆ
ನನ್ನೊಳಗಲ್ಲೂ ಹೆಣ್ಣೆಂಬ ಅಹಂ ನಿಧಾನವಾಗಿ
ತಲೆ ಎತ್ತುವಂತೆ ಮಾಡುವ ಗಳಿಗೆಗಾಗಿ ಕಾದಿದ್ದೇನೆ

– ಶ್ರೀದೇವಿ ಕೆರೆಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...