Homeಮುಖಪುಟಕಾವ್ಯ ಎಂದರೆ ನ್ಯಾಯದ ಭಾಷೆ; ಬಲಪಂಥೀಯರಿಗೆ ಅದು ಅಸಾಧ್ಯ: ಹಿರಿಯ ಸಾಹಿತಿ ಜಾವೇದ್ ಅಖ್ತರ್

ಕಾವ್ಯ ಎಂದರೆ ನ್ಯಾಯದ ಭಾಷೆ; ಬಲಪಂಥೀಯರಿಗೆ ಅದು ಅಸಾಧ್ಯ: ಹಿರಿಯ ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಕಾವ್ಯವನ್ನು “ನ್ಯಾಯದ ಭಾಷೆ” ಮತ್ತು “ಸಮಾಜದ ಧ್ವನಿಪೆಟ್ಟಿಗೆ” ಎಂದು ಬಣ್ಣಿಸಿರುವ ಖ್ಯಾತ ಚಿತ್ರ ಸಾಹಿತಿ, ಗೀತರಚನೆಕಾರ ಜಾವೇದ್ ಅಖ್ತರ್, ಪ್ರಪಂಚದಾದ್ಯಂತ ಇರುವ ಬಲಪಂಥೀಯರು ಯಾವುದೇ ದೊಡ್ಡ ಕವಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಕಾವ್ಯ ಎಂದರೆ ನ್ಯಾಯದ ಭಾಷೆ

ಶುಕ್ರವಾರ ಸಂಜೆ ಮಧ್ಯ ಮುಂಬೈನ ಬೈಕುಲ್ಲಾದಲ್ಲಿರುವ ಅನ್ನಭಾವು ಸಾಥೆ ಸಭಾಂಗಣದಲ್ಲಿ ಸಮಷ್ಟಿ ಕಲೆ ಮತ್ತು ಸಾಹಿತ್ಯ ಉತ್ಸವದ ಸಂದರ್ಭದಲ್ಲಿ ‘ನಾಮ್‌ದೇವ್ ಧಸಾಲ್ ಸಮಷ್ಟಿ ಪ್ರಶಸ್ತಿ’ ಸ್ವೀಕರಿಸಿದ ನಂತರ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಏಪ್ರಿಲ್ 11 ರಂದು ಪ್ರಾರಂಭವಾದ ಎರಡು ದಿನಗಳ ಕಾರ್ಯಕ್ರಮವನ್ನು ಪ್ರಸಿದ್ಧ ಮರಾಠಿ ಕವಿ ಮತ್ತು ದಲಿತ ಹಕ್ಕುಗಳ ಹೋರಾಟಗಾರ ದಿವಂಗತ ನಾಮದೇವ್ ಧಸಾಲ್ ಅವರ ಸ್ಮರಣಾರ್ಥ ಆಯೋಜಿಸಲಾಗಿತ್ತು.

“ಪ್ರಣಯದ ಕಾವ್ಯವನ್ನು ಕೇಳುವ ಜನರಿಗೆ ಕಾವ್ಯವು ಪ್ರೀತಿಯ ಭಾಷೆ ಮಾತ್ರವಲ್ಲ, ಅದು ನ್ಯಾಯದ ಭಾಷೆಯೂ ಎಂದು ತಿಳಿದಿಲ್ಲ. ಕಾವ್ಯದ ಮೌಲ್ಯ ವ್ಯವಸ್ಥೆಯು ಪ್ರಪಂಚದಾದ್ಯಂತ ಸಾಂಸ್ಕೃತಿಕವಾಗಿ ಸರಿಯಾಗಿದೆ. ಮತ್ತು ಪ್ರಪಂಚದ ಇತಿಹಾಸದಲ್ಲಿ, ಬಲಪಂಥೀಯರಿಗೆ ಎಂದಿಗೂ ದೊಡ್ಡ ಕವಿಯನ್ನು ಸೃಷ್ಟಿಸಲು ಸಾಧ್ಯವಾಗದಿರಲು ಇದೇ ಕಾರಣ” ಎಂದು ಅವರು ಹೇಳಿದ್ದಾರೆ.

“ಕಾವ್ಯವು ಸಮಾನತೆಯನ್ನು, ನ್ಯಾಯವನ್ನು ನಂಬುತ್ತದೆ ಮತ್ತು ಈ ಮೌಲ್ಯಗಳನ್ನು ಬೋಧಿಸುವ ಅದೇ ಕಾವ್ಯವನ್ನು ಪ್ರಪಂಚದಾದ್ಯಂತ ಸ್ವೀಕರಿಸಲಾಗಿದೆ. ನ್ಯಾಯದ ಬಗ್ಗೆ ಮಾತನಾಡುವವನೆ ದೊಡ್ಡ ಕವಿ ಮತ್ತು ಇದು ನಾವು ಯಾರ ಹೆಸರಿನಲ್ಲಿ ಇಂದು ಒಟ್ಟುಗೂಡಿದ್ದೇವೆಯೆ ಅವರಯ (ಧಸಾಲ್) ನ್ಯಾಯದ ಬಗ್ಗೆಯೆ ಮಾತನಾಡಿದ್ದಾರೆ” ಎಂದು ಜಾವೇದ್ ಅಖ್ತರ್ ಹೇಳಿದ್ದಾರೆ.

ಮೀನಿಗೆ ಧ್ವನಿ ಪೆಟ್ಟಿಗೆಯಿಲ್ಲ, ಅದು ಕಿರುಚುವುದಿಲ್ಲ ಅಥವಾ ಧ್ವನಿಯನ್ನು ಹೊಂದಿಲ್ಲ. ಆದ್ದರಿಂದ ಅದು ಅನುಭವಿಸುತ್ತಿರುವ ನೋವು ಅಥವಾ ಹಿಂಸೆ ನಿಮಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

“ಕಾವ್ಯವು ಸಮಾಜದ ಧ್ವನಿ ಪೆಟ್ಟಿಗೆಯಾಗಿದ್ದು, ಮಹಾತ್ಮ ಫುಲೆ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಧ್ವನಿಯಿಲ್ಲದವರ ಧ್ವನಿ ಪೆಟ್ಟಿಗೆಗಳನ್ನು ಒದಗಿಸಿದರು… ಸಾಮಾಜಿಕ ನ್ಯಾಯದ ಇಡೀ ಚಳುವಳಿ ನಮ್ಮದಾಗಿದ್ದು, ಅದು ಮಹಾರಾಷ್ಟ್ರದಲ್ಲಿ ಹುಟ್ಟಿತು” ಎಂದು ಅವರು ಹೇಳಿದ್ದಾರೆ.

ಧಸಾಲ್ ಅವರು 20 ನೇ ಶತಮಾನದ ಕವಿಯಲ್ಲ, ಅವರು ಸಾವಿರಾರು ವರ್ಷಗಳ ಹಿಂದೆ ಜನಿಸಿದರು ಎಂದು ಜಾವೇದ್ ಹೇಳಿದರು. “ಅಗ್ನಿಪರ್ವತದ ಲಾವಾ ಒಂದೇ ದಿನದಲ್ಲಿ ಹೊರಬರುವುದಿಲ್ಲ. ಅದು ರೂಪುಗೊಳ್ಳಲು ವರ್ಷಗಳೇ ಬೇಕಾಗುತ್ತದೆ. ಅದು ಒಂದು ದಿನ ಪರ್ವತವನ್ನು ಒಡೆದು, ಆ ಮೂಲಕ ಸ್ಫೋಟದೊಂದಿಗೆ ಹೊರಬರುತ್ತದೆ” ಎಂದು ಹೇಳಿದ ಅವರು, ಧಸಾಲ್ ಅವರನ್ನು ಜ್ವಾಲಾಮುಖಿಗೆ ಹೋಲಿಸಿದ್ದಾರೆ.

ಭಾಷಣದ ನಂತರ, ಜಾವೇದ್ ಅಖ್ತರ್ ಅವರು ಧಸಾಲ್ ಅವರ ‘ರಕ್ತತ್ ಪೆಟ್ಲೆಲ್ಯಾ ಅಗನಿತ್ ಸೂರ್ಯನ್ನೋ’ ಕವಿತೆಯ ಉರ್ದು ಅನುವಾದವನ್ನು ಸಹ ಓದಿದರು. ಕಾವ್ಯ ಎಂದರೆ ನ್ಯಾಯದ ಭಾಷೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  200 ವರ್ಷದಿಂದ ವಾಸಿಸುವ ಮುಸ್ಲಿಂ ಕುಟುಂಬದ ಹತ್ತಿರ ಆಗಮಿಸಿದ ಬುಲ್ಡೋಜರ್ ಗಳು!

200 ವರ್ಷದಿಂದ ವಾಸಿಸುವ ಮುಸ್ಲಿಂ ಕುಟುಂಬದ ಹತ್ತಿರ ಆಗಮಿಸಿದ ಬುಲ್ಡೋಜರ್ ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...