Homeಅನುವಾದಿತ ಲೇಖನಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

ಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

- Advertisement -
- Advertisement -

ಕಾಡು ಮತ್ತು ಮನುಷ್ಯನ ನಡುವಿನ ಸಂಘರ್ಷ ತುಂಬಾ ಸುದೀರ್ಘವಾದದ್ದು. ಆರಂಭದಿಂದಲೂ ಮನುಷ್ಯ ಕಾಡು ಪ್ರಾಣಿಗಳ ಆವಾಸಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಲೇ ಮುನ್ನುಗ್ಗುತ್ತಿದ್ದಾನೆ. ಕಾಡನ್ನು ನಾಡು ಮಾಡಿ ಬೃಹತ್‌ ಕಾಂಕ್ರೀಟ್‌ ನಗರಗಳನ್ನು ಕಟ್ಟುತ್ತಿದ್ದಾನೆ. ಆದರೆ ಮನುಷ್ಯನ ಈ ಕಟ್ಟುವಿಕೆ, ನಗರಗಳ ವಿಸ್ತರಿಸುವಿಕೆಗೆ ಕೊನೆಯೆಂಬುದೇನೂ ಇಲ್ಲ. ಕಾಡಿದ್ದ ಜಾಗಗಳಲ್ಲಿ ನಾಡು ಹುಟ್ಟಿಕೊಂಡ ಪರಿಣಾಮವಾಗಿ ಇಂದು ಕಾಡು ಪ್ರಾಣಿಗಳ ಉಪಟಳ ಮನುಷ್ಯನಿಗೆ ಹೆಚ್ಚಾಗಿದೆ. ಆನೆ ಚಿರತೆಗಳು ನಗರಗಳತ್ತ ಆಹಾರ ಹುಡುಕಿ ಬರುವುದು ಸಾಮಾನ್ಯವಾಗಿದೆ. ಒಂದು ಕಾಲದಲ್ಲಿ ಸಮೃದ್ಧ ಕಾಡಿನಿಂದ ಸುತ್ತುವರೆದಿದ್ದ ಬೆಂಗಳೂರು, ಮೈಸೂರು ನಗರಗಳು ಇಂದು ಬಟಾಬಯಲಾಗಿವೆ. ಆದರೆ ಕಾಡು ಪ್ರಾಣಿಗಳು ತಮ್ಮ ಹಳೆಯ ಆವಾಸ ಸ್ಥಾನಗಳನ್ನು ಇನ್ನು ಮರೆತಿಲ್ಲ. ಆಗಾಗ ನಗರಗಳಿಗೆ ಭೇಟಿಕೊಟ್ಟು ತಮ್ಮ ಆಹಾರಗಳನ್ನು ಹುಡುಕುತ್ತವೆ. ಹೀಗಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಆಗಾಗ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುತ್ತವೆ. ಕಾಡು ಪ್ರಾಣಿಗಳು ನಗರಕ್ಕೆ ಬರುವುದನ್ನು ಸಹಿಸದ ಮನುಷ್ಯ ಅವುಗಳನ್ನು ಹೇಗಾದರೂ ಮಾಡಿ ಕೊಲ್ಲಲು ಪ್ರಯತ್ನಿಸುತ್ತಾನೆ. ವಿದ್ಯುತ್‌ ಬೇಲಿಗಳನ್ನು ಹಾಕಿ ಆನೆಗಳನ್ನು ಸಾಯಿಸಲು ಯತ್ನಿಸುತ್ತಾನೆ. ವಿಷ ಹಾಕಿ ಚಿರತೆಗಳನ್ನು ಕೊಲ್ಲುತ್ತಾನೆ. ಜಿಂಕೆಗಳನ್ನು ಭೇಟೆಯಾಡುತ್ತಾನೆ.

ಹೀಗೆ ಮನುಷ್ಯ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಮೈಸೂರಿನಲ್ಲಿ ತಾರಕಕ್ಕೆ ಹೋಗಿದೆ. ಹಿಂದೆ ವಿದ್ಯುತ್‌ ಬೇಲಿಯ ಮೂಲಕ ಮತ್ತು ವಿಷ ಉಣಿಸುವ ಮೂಲಕ ಅನೇಕ ಆನೆಗಳನ್ನು ಸಾಯಿಸಲಾಗಿತ್ತು. ಈಗ ಮತ್ತೆ ಅಂತಹುದೇ ವರದಿ ಬೆಳಕಿಗೆ ಬಂದಿದೆ. ಈ ಸಾರಿ ಜನರ ಕ್ರೌರ್ಯಕ್ಕೆ ಬಲಿಯಾಗಿರುವುದು ಚಿರತೆಗಳು. ಮೈಸೂರಿನ ನಂಜನಗೂಡು ಮತ್ತು ಹೆಚ್‌.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಕಳೆದ 20 ದಿನಗಳಲ್ಲಿ 6 ಚಿರತೆಗಳನ್ನು ವಿಷವಿಟ್ಟು ಕೊಲ್ಲಲಾಗಿರುವ ಘಟನೆಗಳು ನಡೆದಿವೆ. ಈ ಘಟನೆಯು ಪರಿಸರ ಪ್ರಿಯಯನ್ನು ಕೆರಳಿಸಿದೆ. ಚಿರತೆಗಳನ್ನು ಸಾಯಿಸುತ್ತಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಅನೇಕರು ಅರಣ್ಯ ಇಲಾಖೆಯ ಮೇಲೆ ಒತ್ತಡ ತರುತ್ತಿದ್ದಾರೆ.

ಇನ್ನು ಓದಿ : ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

2009 ರಲ್ಲಿ ಇದೇ ರೀತಿ ಉಲ್ಲಹಳ್ಳಿ ಕಾಲುವೆಯ ಎಡದಂಡೆಯ ಮೇಲೆ ಏಕಾ ಏಕಿ ನಾಲ್ಕು ಆನೆಗಳ ಮೃತದೇಹ ಕಂಡುಬಂದಿತ್ತು. ಆಗ ಸೈನೆಡ್‌ ಮೂಲಕ ಆನೆಗಳನ್ನು ಕೊಂದಿರುವುದು ತನಿಖೆ ವೇಳೆ ತಿಳಿದುಬಂದಿತ್ತು. ಅಂದು ಕರ್ನಾಟಕ ಹೈಕೋರ್ಟ್‌ ಸಮಿತಿಯೊಂದನ್ನು ನೇಮಿಸಿ ತನಿಖೆ ನಡೆರಸುವಂತೆ ಅರಣ್ಯ ಇಲಾಖೆಗೆ ಆದೇಶಿಸಿತ್ತು. ಆದರೆ 10 ವರ್ಷಗಳ ನಂತರವೂ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವ ಕಾರ್ಯ ನಡೆದಿಲ್ಲ.

ಚಿರತೆಗಳ ಶವದ ಜೊತೆ ಅರ್ಧ ತಿಂದ ನಾಯಿಯ ಮೃತದೇಹ ಕಂಡುಬಂದಿದೆ. ನಾಯಿಗಳಿಗೆ ವಿಷವುಣಿಸಿ ಅವನ್ನು ಚಿರತೆಗೆ ಬಲಿ ಕೊಟ್ಟಿರುವುದು ಮೇಲ್ನೋಟಕ್ಕೆ ತಿಳಿದುಬರುವ ಸಂಗತಿ.  ಅರಣ್ಯ ಇಲಾಖೆ ನಾಯಿಯ ಮೃತದೇಹ ಹಾಗೂ ಚಿರತೆಯ ಮೃತದೇಹ ಎರಡನ್ನೂ ಬೆಂಗಳೂರಿನ ಎನಿಮಲ್‌ ಹೆಲ್ತ್‌ ಎಂಡ್‌ ವೆಟರ್ನರಿ ಬಯೋಲಾಜಿಕಲ್‌ ಇನ್ಸ್‌ಟಿಟ್ಯೂಗೆ ಕಳುಹಿಸಿದೆ. ಬೆಂಗಳೂರು ಬಿಟ್ಟರೆ ಮತ್ತೆ ಹತ್ತಿರದಲ್ಲೆಲ್ಲೂ ಸದ್ಯ ಪ್ರಾಣಿಗಳ ದೇಹವನ್ನು ಪರೀಕ್ಷಿಸುವ ವಿಧಿ ವಿಜ್ಞಾನ ಪ್ರಯೋಗಾಯಲಯವಿಲ್ಲದಿರುವುದು ಇನ್ನೊಂದು ಸಮಸ್ಯೆಯಾಗಿದೆ.

 

ಈ ಪ್ರಕರಣಗಳಲ್ಲಿ ತಪ್ಪಿತಸ್ಥರನ್ನು, ಪ್ರಾಣಿ ಹಂತಕರನ್ನು ಬಂಧಿಸದೇ ಇರುವುದರಿಂದ ವನ್ಯ ಪ್ರಾಣಿಗಳನ್ನು ಸಾಯಿಸುವ ಘಟನೆ ಮರುಕಳಿಸುತ್ತಿದೆ. ಅರಣ್ಯ ಇಲಾಖೆ ತನಿಖೆಯನ್ನು ನಡೆಸಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಹಾಗಾಗಿ ಜನರು ಇನ್ನು ಧೈರ್ಯದಿಂದ ವನ್ಯ ಪ್ರಾಣಿಗಳನ್ನು ಸಾಯಿಸಲು ಮುಂದಾಗುತ್ತಿದ್ದಾರೆ ಎಂದು ಪ್ರಾಣಿ ತಜ್ಞ ಡಾ ನಾಗರಾಜ್‌ ತಿಳಿಸುತ್ತಾರೆ. ನಾಗರಾಜ್‌ ಹಿಂದೆ ಅರಣ್ಯ ಇಲಾಖೆಯ ಜೊತೆ ಅನೇಕ ಕಡೆ ಆನೆ ಸೆರೆಹಿಡಿಯುವ ಕೆಲಸದಲ್ಲೂ ಭಗವಹಿಸಿದ್ದಾರೆ. ನಾವು ಹತ್ತಿರದ ಕೃಷಿಕರನ್ನೋ ಅಥವಾ ಹಳ್ಳಿಗರನ್ನು ಚಿರತೆ ಹಂತಕರೆಂದು ಹೇಳಲು ಸಾಧ್ಯವಿಲ್ಲ. ಬೇರೆ ಎಲ್ಲಿಂದಲೋ ವಿಷವುಣಿಸಿದ ನಾಯಿಯಯನ್ನು ಚಿರತೆ ಭೇಟೆಯಾಡಿ ಇಲ್ಲಿಗೆ ಎಳೆದುಕೊಂಡಿರಬಹುದು. ಹಾಗೇ ಯಾರಾದರೂ ಕಿಡಿಗೇಡಿಗಳು ಕೃಷಿಕರಿಗೆ ತೊಂದರೆ ಕೊಡಲು ಹೀಗೆ ಚಿರತೆಯನ್ನು ಸಾಯಿಸಿರಬಹುದು. ತನಿಖೆಯಾಗದೇ ಯಾವುದನ್ನೂ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕಿದೆ ಎಂದು ಡಾ. ನಾಗರಾಜ್‌ ಚಿರತೆಗಳ ಸಾವಿನ ವಿಚಾರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಹಳ್ಳಿಗರು ಚಿರತೆಯಿಂದ ತಮ್ಮ ಆಡು, ಕುರಿ, ಹಸು ಮೇಯಿಸಲು ಹೆದರಿಕೆಯಾಗುತ್ತಿದೆ. ನಮ್ಮ ಜಾನುವಾರುಗಳನ್ನು ಚಿರತೆ ಹಿಡಿದುಕೊಂಡು ಹೋಗುತ್ತಿದೆ. ನಮಗೆ ಯಾವುದೇ ಪರಿಹಾರ ಬಂದಿಲ್ಲ ಎಂದು ರೈತರು ಚಿರತೆಗಳ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಕಬಿನಿ ಎಡ ಕಾಲುವೆಯ ಮೇಲೆ ನನ್ನ ಆಡಿನ ಹಿಂಡನ್ನು ಮೇಯಿಸುತ್ತಿರುವಾಗ ಚಿರತೆಯೊಂದು ನನ್ನ ಕುರಿಗಳ ಮೇಲೆ ದಾಳಿ ಮಾಡಿತು. ನಾನು ತಕ್ಷಣ ಕಿರುಚಿಕೊಂಡಿದ್ದಕ್ಕೆ ಹಾಗೇ ಕುರಿಗಳನ್ನು ಬಿಟ್ಟು ಓಡಿತು ಎಂದು ಮಾಡನಹಳ್ಳಿಯ ಗೋವಿಂದ್‌ ನಾಯ್ಕ್‌ ಎಂಬ ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕಾಡು ಹಂದಿ ಮತ್ತು ನವಿಲಿನ ಕಾಟದಿಂದ ನಮ್ಮ ಹೂವಿನ ತೋಟಗಳು ನಾಶವಾಗುತ್ತಿವೆ. ತರಕಾರಿ ತೋಟಗಳಿಗೂ ಕಾಡುಪ್ರಾಣಿಯ ಕಾಟ ತಪ್ಪುತ್ತಿಲ್ಲ ಎಂದು ಗೊಲ್ಲೂರಿನ ಪ್ರಭುದೇವ ಎಂಬ ರೈತರು ವನ್ಯ ಮೃಗಗಳಿಂದಾಗುವ ತಮ್ಮ ಕಷ್ಟಗಳನ್ನು ತೋಡಿಕೊಳ್ಳುತ್ತಾರೆ. ಲಾಕ್‌ ಡೌನ್‌ ಕಾರಣದಿಂದ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇರುವುದರಿಂದ ಕಾಡು ಪ್ರಾಣಿಗಳು ಮನುಷ್ಯರ ವಸತಿ ಪ್ರದೇಶಕ್ಕೆ ನುಗ್ಗುತ್ತಿವೆ ಎಂದು ಪ್ರಾಣಿ ಶಾಸ್ತ್ರಜ್ಞರು ಅಭಿಪ್ರಾಯ ಪಡುತ್ತಾರೆ.

ಬೆಂಗಳೂರಿನ ಹೆಬ್ಬಾಳದ ವೆಟರ್ನರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಪ್ರಾಣಿತಜ್ಞ ಡಾ. ಪ್ರಯಾಗ್‌ ಹೆಚ್‌.ಎಸ್‌ ಅವರ ಪ್ರಕಾರ, “ಚಿರತೆಗಳು ರಾತ್ರಿ ಹೊತ್ತಿನಲ್ಲಿ ಹಳ್ಳಿಗಳ ಕಡೆಗೆ ಬರುತ್ತವೆ. ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತುಕೊಳ್ಳುತ್ತವೆ. ಚಿರತೆಗಳನ್ನು ಕಂಡು ಜನರು ಗಾಬರಿಯಾಗುತ್ತಾರೆ. ಅದೇ ಭಯದಿಂದ ಚಿರತೆಗಳಿಗೆ ವಿಷ ಉಣಿಸುವಂತಹ ಕೆಲಸಕ್ಕೆ ಮುಂದಾಗುತ್ತಾರೆ. ಮುನುಷ್ಯ ಕಾಡು ಪ್ರಾಣಿಗಳ ಕುರಿತು ಹೆಚ್ಚು ತಿಳಿದುಕೊಳ್ಳಬೇಕು. ಅವುಗಳ ವರ್ತನೆಯನ್ನು ಅರ್ಥಮಾಡಿಕೊಳ್ಳಬೇಕು. ಅರಣ್ಯ ಇಲಾಖೆ ಸುತ್ತ ಮುತ್ತದ ಹಳ್ಳಿಗಳಲ್ಲಿ ವನ್ಯಪ್ರಾಣಿ ಸಂರಕ್ಷಣೆ ಕುರಿತು ಅರಿವು ಮೂಡಿಸಬೇಕು. ಆಗ ಜನರು ಕಾಡು ಪ್ರಾಣಿಗಳನ್ನು ತಮ್ಮ ಶತ್ರುಗಳ ರೀತಿ ನೋಡುವುದು ಕಡಿಮೆಯಾಗುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಚಿರತೆಯ ದೇಹದ ಮರಣೋತ್ತರ ಪರೀಕ್ಷೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಆ ವರದಿ ಬಂದ ಮೇಲೆ ಘಟನೆ ಕುರಿತು ಸ್ಪಷ್ಟ ಮಾಹಿತಿ ಸಿಗಲಿದೆ. ಸದ್ಯ 5 ಜನ ಶಂಕಿತರ ಮೇಲೆ ಕಣ್ಣಿಟ್ಟಿದ್ದೇವೆ. ಅವರ ವಿಚಾರಣೆಯನ್ನು ನಡೆಸುತ್ತಿದ್ದೇವೆ. ಪ್ರಕರಣವನ್ನು ಬೇಧೀಸುವಂತಹ ಮಾಹಿತಿಗಳು ನಮಗೆ ದೊರೆತಿದೆ ಎಂದು ಡಿಸಿಎಫ್‌ ಪ್ರಶಾಂತ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ವನ್ಯಪ್ರಾಣಿ ಮತ್ತು ಮನುಷ್ಯನ ಸಂಘರ್ಷಗಳು ಪದೇ ಪದೇ ಮೈಸೂರು ಸುತ್ತ ಮುತ್ತ ವರದಿಯಾಗುತ್ತಿವೆ. ನಾಗರಹೊಳೆ, ಬಂಡಿಪುರ ಎರಡು ರಾಷ್ಟ್ರೀಯ ಉದ್ಯಾನಗಳಿಂದ ಸುತ್ತು ವರಿದಿರುವ ಮೈಸೂರಿನಲ್ಲಿ ಆದಷ್ಟು ವನ್ಯಮೃಗಗಳ ಹತ್ಯೆ ನಿಲ್ಲಬೇಕಿದೆ.

ಮೂಲ : ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ : ರಾಜೇಶ್‌ ಹೆಬ್ಬಾರ್‌ 


ಇದನ್ನೂ ಓದಿ : ಗುಜರಾತ್ ಪರಿಸ್ಥಿತಿ ಈಗ ಬದಲಾಗಲಿದೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...