Homeಅನುವಾದಿತ ಲೇಖನಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

ಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

- Advertisement -
- Advertisement -

ಕಾಡು ಮತ್ತು ಮನುಷ್ಯನ ನಡುವಿನ ಸಂಘರ್ಷ ತುಂಬಾ ಸುದೀರ್ಘವಾದದ್ದು. ಆರಂಭದಿಂದಲೂ ಮನುಷ್ಯ ಕಾಡು ಪ್ರಾಣಿಗಳ ಆವಾಸಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಲೇ ಮುನ್ನುಗ್ಗುತ್ತಿದ್ದಾನೆ. ಕಾಡನ್ನು ನಾಡು ಮಾಡಿ ಬೃಹತ್‌ ಕಾಂಕ್ರೀಟ್‌ ನಗರಗಳನ್ನು ಕಟ್ಟುತ್ತಿದ್ದಾನೆ. ಆದರೆ ಮನುಷ್ಯನ ಈ ಕಟ್ಟುವಿಕೆ, ನಗರಗಳ ವಿಸ್ತರಿಸುವಿಕೆಗೆ ಕೊನೆಯೆಂಬುದೇನೂ ಇಲ್ಲ. ಕಾಡಿದ್ದ ಜಾಗಗಳಲ್ಲಿ ನಾಡು ಹುಟ್ಟಿಕೊಂಡ ಪರಿಣಾಮವಾಗಿ ಇಂದು ಕಾಡು ಪ್ರಾಣಿಗಳ ಉಪಟಳ ಮನುಷ್ಯನಿಗೆ ಹೆಚ್ಚಾಗಿದೆ. ಆನೆ ಚಿರತೆಗಳು ನಗರಗಳತ್ತ ಆಹಾರ ಹುಡುಕಿ ಬರುವುದು ಸಾಮಾನ್ಯವಾಗಿದೆ. ಒಂದು ಕಾಲದಲ್ಲಿ ಸಮೃದ್ಧ ಕಾಡಿನಿಂದ ಸುತ್ತುವರೆದಿದ್ದ ಬೆಂಗಳೂರು, ಮೈಸೂರು ನಗರಗಳು ಇಂದು ಬಟಾಬಯಲಾಗಿವೆ. ಆದರೆ ಕಾಡು ಪ್ರಾಣಿಗಳು ತಮ್ಮ ಹಳೆಯ ಆವಾಸ ಸ್ಥಾನಗಳನ್ನು ಇನ್ನು ಮರೆತಿಲ್ಲ. ಆಗಾಗ ನಗರಗಳಿಗೆ ಭೇಟಿಕೊಟ್ಟು ತಮ್ಮ ಆಹಾರಗಳನ್ನು ಹುಡುಕುತ್ತವೆ. ಹೀಗಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಆಗಾಗ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುತ್ತವೆ. ಕಾಡು ಪ್ರಾಣಿಗಳು ನಗರಕ್ಕೆ ಬರುವುದನ್ನು ಸಹಿಸದ ಮನುಷ್ಯ ಅವುಗಳನ್ನು ಹೇಗಾದರೂ ಮಾಡಿ ಕೊಲ್ಲಲು ಪ್ರಯತ್ನಿಸುತ್ತಾನೆ. ವಿದ್ಯುತ್‌ ಬೇಲಿಗಳನ್ನು ಹಾಕಿ ಆನೆಗಳನ್ನು ಸಾಯಿಸಲು ಯತ್ನಿಸುತ್ತಾನೆ. ವಿಷ ಹಾಕಿ ಚಿರತೆಗಳನ್ನು ಕೊಲ್ಲುತ್ತಾನೆ. ಜಿಂಕೆಗಳನ್ನು ಭೇಟೆಯಾಡುತ್ತಾನೆ.

ಹೀಗೆ ಮನುಷ್ಯ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಮೈಸೂರಿನಲ್ಲಿ ತಾರಕಕ್ಕೆ ಹೋಗಿದೆ. ಹಿಂದೆ ವಿದ್ಯುತ್‌ ಬೇಲಿಯ ಮೂಲಕ ಮತ್ತು ವಿಷ ಉಣಿಸುವ ಮೂಲಕ ಅನೇಕ ಆನೆಗಳನ್ನು ಸಾಯಿಸಲಾಗಿತ್ತು. ಈಗ ಮತ್ತೆ ಅಂತಹುದೇ ವರದಿ ಬೆಳಕಿಗೆ ಬಂದಿದೆ. ಈ ಸಾರಿ ಜನರ ಕ್ರೌರ್ಯಕ್ಕೆ ಬಲಿಯಾಗಿರುವುದು ಚಿರತೆಗಳು. ಮೈಸೂರಿನ ನಂಜನಗೂಡು ಮತ್ತು ಹೆಚ್‌.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಕಳೆದ 20 ದಿನಗಳಲ್ಲಿ 6 ಚಿರತೆಗಳನ್ನು ವಿಷವಿಟ್ಟು ಕೊಲ್ಲಲಾಗಿರುವ ಘಟನೆಗಳು ನಡೆದಿವೆ. ಈ ಘಟನೆಯು ಪರಿಸರ ಪ್ರಿಯಯನ್ನು ಕೆರಳಿಸಿದೆ. ಚಿರತೆಗಳನ್ನು ಸಾಯಿಸುತ್ತಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಅನೇಕರು ಅರಣ್ಯ ಇಲಾಖೆಯ ಮೇಲೆ ಒತ್ತಡ ತರುತ್ತಿದ್ದಾರೆ.

ಇನ್ನು ಓದಿ : ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

2009 ರಲ್ಲಿ ಇದೇ ರೀತಿ ಉಲ್ಲಹಳ್ಳಿ ಕಾಲುವೆಯ ಎಡದಂಡೆಯ ಮೇಲೆ ಏಕಾ ಏಕಿ ನಾಲ್ಕು ಆನೆಗಳ ಮೃತದೇಹ ಕಂಡುಬಂದಿತ್ತು. ಆಗ ಸೈನೆಡ್‌ ಮೂಲಕ ಆನೆಗಳನ್ನು ಕೊಂದಿರುವುದು ತನಿಖೆ ವೇಳೆ ತಿಳಿದುಬಂದಿತ್ತು. ಅಂದು ಕರ್ನಾಟಕ ಹೈಕೋರ್ಟ್‌ ಸಮಿತಿಯೊಂದನ್ನು ನೇಮಿಸಿ ತನಿಖೆ ನಡೆರಸುವಂತೆ ಅರಣ್ಯ ಇಲಾಖೆಗೆ ಆದೇಶಿಸಿತ್ತು. ಆದರೆ 10 ವರ್ಷಗಳ ನಂತರವೂ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವ ಕಾರ್ಯ ನಡೆದಿಲ್ಲ.

ಚಿರತೆಗಳ ಶವದ ಜೊತೆ ಅರ್ಧ ತಿಂದ ನಾಯಿಯ ಮೃತದೇಹ ಕಂಡುಬಂದಿದೆ. ನಾಯಿಗಳಿಗೆ ವಿಷವುಣಿಸಿ ಅವನ್ನು ಚಿರತೆಗೆ ಬಲಿ ಕೊಟ್ಟಿರುವುದು ಮೇಲ್ನೋಟಕ್ಕೆ ತಿಳಿದುಬರುವ ಸಂಗತಿ.  ಅರಣ್ಯ ಇಲಾಖೆ ನಾಯಿಯ ಮೃತದೇಹ ಹಾಗೂ ಚಿರತೆಯ ಮೃತದೇಹ ಎರಡನ್ನೂ ಬೆಂಗಳೂರಿನ ಎನಿಮಲ್‌ ಹೆಲ್ತ್‌ ಎಂಡ್‌ ವೆಟರ್ನರಿ ಬಯೋಲಾಜಿಕಲ್‌ ಇನ್ಸ್‌ಟಿಟ್ಯೂಗೆ ಕಳುಹಿಸಿದೆ. ಬೆಂಗಳೂರು ಬಿಟ್ಟರೆ ಮತ್ತೆ ಹತ್ತಿರದಲ್ಲೆಲ್ಲೂ ಸದ್ಯ ಪ್ರಾಣಿಗಳ ದೇಹವನ್ನು ಪರೀಕ್ಷಿಸುವ ವಿಧಿ ವಿಜ್ಞಾನ ಪ್ರಯೋಗಾಯಲಯವಿಲ್ಲದಿರುವುದು ಇನ್ನೊಂದು ಸಮಸ್ಯೆಯಾಗಿದೆ.

 

ಈ ಪ್ರಕರಣಗಳಲ್ಲಿ ತಪ್ಪಿತಸ್ಥರನ್ನು, ಪ್ರಾಣಿ ಹಂತಕರನ್ನು ಬಂಧಿಸದೇ ಇರುವುದರಿಂದ ವನ್ಯ ಪ್ರಾಣಿಗಳನ್ನು ಸಾಯಿಸುವ ಘಟನೆ ಮರುಕಳಿಸುತ್ತಿದೆ. ಅರಣ್ಯ ಇಲಾಖೆ ತನಿಖೆಯನ್ನು ನಡೆಸಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಹಾಗಾಗಿ ಜನರು ಇನ್ನು ಧೈರ್ಯದಿಂದ ವನ್ಯ ಪ್ರಾಣಿಗಳನ್ನು ಸಾಯಿಸಲು ಮುಂದಾಗುತ್ತಿದ್ದಾರೆ ಎಂದು ಪ್ರಾಣಿ ತಜ್ಞ ಡಾ ನಾಗರಾಜ್‌ ತಿಳಿಸುತ್ತಾರೆ. ನಾಗರಾಜ್‌ ಹಿಂದೆ ಅರಣ್ಯ ಇಲಾಖೆಯ ಜೊತೆ ಅನೇಕ ಕಡೆ ಆನೆ ಸೆರೆಹಿಡಿಯುವ ಕೆಲಸದಲ್ಲೂ ಭಗವಹಿಸಿದ್ದಾರೆ. ನಾವು ಹತ್ತಿರದ ಕೃಷಿಕರನ್ನೋ ಅಥವಾ ಹಳ್ಳಿಗರನ್ನು ಚಿರತೆ ಹಂತಕರೆಂದು ಹೇಳಲು ಸಾಧ್ಯವಿಲ್ಲ. ಬೇರೆ ಎಲ್ಲಿಂದಲೋ ವಿಷವುಣಿಸಿದ ನಾಯಿಯಯನ್ನು ಚಿರತೆ ಭೇಟೆಯಾಡಿ ಇಲ್ಲಿಗೆ ಎಳೆದುಕೊಂಡಿರಬಹುದು. ಹಾಗೇ ಯಾರಾದರೂ ಕಿಡಿಗೇಡಿಗಳು ಕೃಷಿಕರಿಗೆ ತೊಂದರೆ ಕೊಡಲು ಹೀಗೆ ಚಿರತೆಯನ್ನು ಸಾಯಿಸಿರಬಹುದು. ತನಿಖೆಯಾಗದೇ ಯಾವುದನ್ನೂ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕಿದೆ ಎಂದು ಡಾ. ನಾಗರಾಜ್‌ ಚಿರತೆಗಳ ಸಾವಿನ ವಿಚಾರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಹಳ್ಳಿಗರು ಚಿರತೆಯಿಂದ ತಮ್ಮ ಆಡು, ಕುರಿ, ಹಸು ಮೇಯಿಸಲು ಹೆದರಿಕೆಯಾಗುತ್ತಿದೆ. ನಮ್ಮ ಜಾನುವಾರುಗಳನ್ನು ಚಿರತೆ ಹಿಡಿದುಕೊಂಡು ಹೋಗುತ್ತಿದೆ. ನಮಗೆ ಯಾವುದೇ ಪರಿಹಾರ ಬಂದಿಲ್ಲ ಎಂದು ರೈತರು ಚಿರತೆಗಳ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಕಬಿನಿ ಎಡ ಕಾಲುವೆಯ ಮೇಲೆ ನನ್ನ ಆಡಿನ ಹಿಂಡನ್ನು ಮೇಯಿಸುತ್ತಿರುವಾಗ ಚಿರತೆಯೊಂದು ನನ್ನ ಕುರಿಗಳ ಮೇಲೆ ದಾಳಿ ಮಾಡಿತು. ನಾನು ತಕ್ಷಣ ಕಿರುಚಿಕೊಂಡಿದ್ದಕ್ಕೆ ಹಾಗೇ ಕುರಿಗಳನ್ನು ಬಿಟ್ಟು ಓಡಿತು ಎಂದು ಮಾಡನಹಳ್ಳಿಯ ಗೋವಿಂದ್‌ ನಾಯ್ಕ್‌ ಎಂಬ ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕಾಡು ಹಂದಿ ಮತ್ತು ನವಿಲಿನ ಕಾಟದಿಂದ ನಮ್ಮ ಹೂವಿನ ತೋಟಗಳು ನಾಶವಾಗುತ್ತಿವೆ. ತರಕಾರಿ ತೋಟಗಳಿಗೂ ಕಾಡುಪ್ರಾಣಿಯ ಕಾಟ ತಪ್ಪುತ್ತಿಲ್ಲ ಎಂದು ಗೊಲ್ಲೂರಿನ ಪ್ರಭುದೇವ ಎಂಬ ರೈತರು ವನ್ಯ ಮೃಗಗಳಿಂದಾಗುವ ತಮ್ಮ ಕಷ್ಟಗಳನ್ನು ತೋಡಿಕೊಳ್ಳುತ್ತಾರೆ. ಲಾಕ್‌ ಡೌನ್‌ ಕಾರಣದಿಂದ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇರುವುದರಿಂದ ಕಾಡು ಪ್ರಾಣಿಗಳು ಮನುಷ್ಯರ ವಸತಿ ಪ್ರದೇಶಕ್ಕೆ ನುಗ್ಗುತ್ತಿವೆ ಎಂದು ಪ್ರಾಣಿ ಶಾಸ್ತ್ರಜ್ಞರು ಅಭಿಪ್ರಾಯ ಪಡುತ್ತಾರೆ.

ಬೆಂಗಳೂರಿನ ಹೆಬ್ಬಾಳದ ವೆಟರ್ನರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಪ್ರಾಣಿತಜ್ಞ ಡಾ. ಪ್ರಯಾಗ್‌ ಹೆಚ್‌.ಎಸ್‌ ಅವರ ಪ್ರಕಾರ, “ಚಿರತೆಗಳು ರಾತ್ರಿ ಹೊತ್ತಿನಲ್ಲಿ ಹಳ್ಳಿಗಳ ಕಡೆಗೆ ಬರುತ್ತವೆ. ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತುಕೊಳ್ಳುತ್ತವೆ. ಚಿರತೆಗಳನ್ನು ಕಂಡು ಜನರು ಗಾಬರಿಯಾಗುತ್ತಾರೆ. ಅದೇ ಭಯದಿಂದ ಚಿರತೆಗಳಿಗೆ ವಿಷ ಉಣಿಸುವಂತಹ ಕೆಲಸಕ್ಕೆ ಮುಂದಾಗುತ್ತಾರೆ. ಮುನುಷ್ಯ ಕಾಡು ಪ್ರಾಣಿಗಳ ಕುರಿತು ಹೆಚ್ಚು ತಿಳಿದುಕೊಳ್ಳಬೇಕು. ಅವುಗಳ ವರ್ತನೆಯನ್ನು ಅರ್ಥಮಾಡಿಕೊಳ್ಳಬೇಕು. ಅರಣ್ಯ ಇಲಾಖೆ ಸುತ್ತ ಮುತ್ತದ ಹಳ್ಳಿಗಳಲ್ಲಿ ವನ್ಯಪ್ರಾಣಿ ಸಂರಕ್ಷಣೆ ಕುರಿತು ಅರಿವು ಮೂಡಿಸಬೇಕು. ಆಗ ಜನರು ಕಾಡು ಪ್ರಾಣಿಗಳನ್ನು ತಮ್ಮ ಶತ್ರುಗಳ ರೀತಿ ನೋಡುವುದು ಕಡಿಮೆಯಾಗುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಚಿರತೆಯ ದೇಹದ ಮರಣೋತ್ತರ ಪರೀಕ್ಷೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಆ ವರದಿ ಬಂದ ಮೇಲೆ ಘಟನೆ ಕುರಿತು ಸ್ಪಷ್ಟ ಮಾಹಿತಿ ಸಿಗಲಿದೆ. ಸದ್ಯ 5 ಜನ ಶಂಕಿತರ ಮೇಲೆ ಕಣ್ಣಿಟ್ಟಿದ್ದೇವೆ. ಅವರ ವಿಚಾರಣೆಯನ್ನು ನಡೆಸುತ್ತಿದ್ದೇವೆ. ಪ್ರಕರಣವನ್ನು ಬೇಧೀಸುವಂತಹ ಮಾಹಿತಿಗಳು ನಮಗೆ ದೊರೆತಿದೆ ಎಂದು ಡಿಸಿಎಫ್‌ ಪ್ರಶಾಂತ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ವನ್ಯಪ್ರಾಣಿ ಮತ್ತು ಮನುಷ್ಯನ ಸಂಘರ್ಷಗಳು ಪದೇ ಪದೇ ಮೈಸೂರು ಸುತ್ತ ಮುತ್ತ ವರದಿಯಾಗುತ್ತಿವೆ. ನಾಗರಹೊಳೆ, ಬಂಡಿಪುರ ಎರಡು ರಾಷ್ಟ್ರೀಯ ಉದ್ಯಾನಗಳಿಂದ ಸುತ್ತು ವರಿದಿರುವ ಮೈಸೂರಿನಲ್ಲಿ ಆದಷ್ಟು ವನ್ಯಮೃಗಗಳ ಹತ್ಯೆ ನಿಲ್ಲಬೇಕಿದೆ.

ಮೂಲ : ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ : ರಾಜೇಶ್‌ ಹೆಬ್ಬಾರ್‌ 


ಇದನ್ನೂ ಓದಿ : ಗುಜರಾತ್ ಪರಿಸ್ಥಿತಿ ಈಗ ಬದಲಾಗಲಿದೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...