Homeಅನುವಾದಿತ ಲೇಖನಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

ಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

- Advertisement -
- Advertisement -

ಕಾಡು ಮತ್ತು ಮನುಷ್ಯನ ನಡುವಿನ ಸಂಘರ್ಷ ತುಂಬಾ ಸುದೀರ್ಘವಾದದ್ದು. ಆರಂಭದಿಂದಲೂ ಮನುಷ್ಯ ಕಾಡು ಪ್ರಾಣಿಗಳ ಆವಾಸಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಲೇ ಮುನ್ನುಗ್ಗುತ್ತಿದ್ದಾನೆ. ಕಾಡನ್ನು ನಾಡು ಮಾಡಿ ಬೃಹತ್‌ ಕಾಂಕ್ರೀಟ್‌ ನಗರಗಳನ್ನು ಕಟ್ಟುತ್ತಿದ್ದಾನೆ. ಆದರೆ ಮನುಷ್ಯನ ಈ ಕಟ್ಟುವಿಕೆ, ನಗರಗಳ ವಿಸ್ತರಿಸುವಿಕೆಗೆ ಕೊನೆಯೆಂಬುದೇನೂ ಇಲ್ಲ. ಕಾಡಿದ್ದ ಜಾಗಗಳಲ್ಲಿ ನಾಡು ಹುಟ್ಟಿಕೊಂಡ ಪರಿಣಾಮವಾಗಿ ಇಂದು ಕಾಡು ಪ್ರಾಣಿಗಳ ಉಪಟಳ ಮನುಷ್ಯನಿಗೆ ಹೆಚ್ಚಾಗಿದೆ. ಆನೆ ಚಿರತೆಗಳು ನಗರಗಳತ್ತ ಆಹಾರ ಹುಡುಕಿ ಬರುವುದು ಸಾಮಾನ್ಯವಾಗಿದೆ. ಒಂದು ಕಾಲದಲ್ಲಿ ಸಮೃದ್ಧ ಕಾಡಿನಿಂದ ಸುತ್ತುವರೆದಿದ್ದ ಬೆಂಗಳೂರು, ಮೈಸೂರು ನಗರಗಳು ಇಂದು ಬಟಾಬಯಲಾಗಿವೆ. ಆದರೆ ಕಾಡು ಪ್ರಾಣಿಗಳು ತಮ್ಮ ಹಳೆಯ ಆವಾಸ ಸ್ಥಾನಗಳನ್ನು ಇನ್ನು ಮರೆತಿಲ್ಲ. ಆಗಾಗ ನಗರಗಳಿಗೆ ಭೇಟಿಕೊಟ್ಟು ತಮ್ಮ ಆಹಾರಗಳನ್ನು ಹುಡುಕುತ್ತವೆ. ಹೀಗಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಆಗಾಗ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುತ್ತವೆ. ಕಾಡು ಪ್ರಾಣಿಗಳು ನಗರಕ್ಕೆ ಬರುವುದನ್ನು ಸಹಿಸದ ಮನುಷ್ಯ ಅವುಗಳನ್ನು ಹೇಗಾದರೂ ಮಾಡಿ ಕೊಲ್ಲಲು ಪ್ರಯತ್ನಿಸುತ್ತಾನೆ. ವಿದ್ಯುತ್‌ ಬೇಲಿಗಳನ್ನು ಹಾಕಿ ಆನೆಗಳನ್ನು ಸಾಯಿಸಲು ಯತ್ನಿಸುತ್ತಾನೆ. ವಿಷ ಹಾಕಿ ಚಿರತೆಗಳನ್ನು ಕೊಲ್ಲುತ್ತಾನೆ. ಜಿಂಕೆಗಳನ್ನು ಭೇಟೆಯಾಡುತ್ತಾನೆ.

ಹೀಗೆ ಮನುಷ್ಯ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಮೈಸೂರಿನಲ್ಲಿ ತಾರಕಕ್ಕೆ ಹೋಗಿದೆ. ಹಿಂದೆ ವಿದ್ಯುತ್‌ ಬೇಲಿಯ ಮೂಲಕ ಮತ್ತು ವಿಷ ಉಣಿಸುವ ಮೂಲಕ ಅನೇಕ ಆನೆಗಳನ್ನು ಸಾಯಿಸಲಾಗಿತ್ತು. ಈಗ ಮತ್ತೆ ಅಂತಹುದೇ ವರದಿ ಬೆಳಕಿಗೆ ಬಂದಿದೆ. ಈ ಸಾರಿ ಜನರ ಕ್ರೌರ್ಯಕ್ಕೆ ಬಲಿಯಾಗಿರುವುದು ಚಿರತೆಗಳು. ಮೈಸೂರಿನ ನಂಜನಗೂಡು ಮತ್ತು ಹೆಚ್‌.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಕಳೆದ 20 ದಿನಗಳಲ್ಲಿ 6 ಚಿರತೆಗಳನ್ನು ವಿಷವಿಟ್ಟು ಕೊಲ್ಲಲಾಗಿರುವ ಘಟನೆಗಳು ನಡೆದಿವೆ. ಈ ಘಟನೆಯು ಪರಿಸರ ಪ್ರಿಯಯನ್ನು ಕೆರಳಿಸಿದೆ. ಚಿರತೆಗಳನ್ನು ಸಾಯಿಸುತ್ತಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಅನೇಕರು ಅರಣ್ಯ ಇಲಾಖೆಯ ಮೇಲೆ ಒತ್ತಡ ತರುತ್ತಿದ್ದಾರೆ.

ಇನ್ನು ಓದಿ : ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

2009 ರಲ್ಲಿ ಇದೇ ರೀತಿ ಉಲ್ಲಹಳ್ಳಿ ಕಾಲುವೆಯ ಎಡದಂಡೆಯ ಮೇಲೆ ಏಕಾ ಏಕಿ ನಾಲ್ಕು ಆನೆಗಳ ಮೃತದೇಹ ಕಂಡುಬಂದಿತ್ತು. ಆಗ ಸೈನೆಡ್‌ ಮೂಲಕ ಆನೆಗಳನ್ನು ಕೊಂದಿರುವುದು ತನಿಖೆ ವೇಳೆ ತಿಳಿದುಬಂದಿತ್ತು. ಅಂದು ಕರ್ನಾಟಕ ಹೈಕೋರ್ಟ್‌ ಸಮಿತಿಯೊಂದನ್ನು ನೇಮಿಸಿ ತನಿಖೆ ನಡೆರಸುವಂತೆ ಅರಣ್ಯ ಇಲಾಖೆಗೆ ಆದೇಶಿಸಿತ್ತು. ಆದರೆ 10 ವರ್ಷಗಳ ನಂತರವೂ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವ ಕಾರ್ಯ ನಡೆದಿಲ್ಲ.

ಚಿರತೆಗಳ ಶವದ ಜೊತೆ ಅರ್ಧ ತಿಂದ ನಾಯಿಯ ಮೃತದೇಹ ಕಂಡುಬಂದಿದೆ. ನಾಯಿಗಳಿಗೆ ವಿಷವುಣಿಸಿ ಅವನ್ನು ಚಿರತೆಗೆ ಬಲಿ ಕೊಟ್ಟಿರುವುದು ಮೇಲ್ನೋಟಕ್ಕೆ ತಿಳಿದುಬರುವ ಸಂಗತಿ.  ಅರಣ್ಯ ಇಲಾಖೆ ನಾಯಿಯ ಮೃತದೇಹ ಹಾಗೂ ಚಿರತೆಯ ಮೃತದೇಹ ಎರಡನ್ನೂ ಬೆಂಗಳೂರಿನ ಎನಿಮಲ್‌ ಹೆಲ್ತ್‌ ಎಂಡ್‌ ವೆಟರ್ನರಿ ಬಯೋಲಾಜಿಕಲ್‌ ಇನ್ಸ್‌ಟಿಟ್ಯೂಗೆ ಕಳುಹಿಸಿದೆ. ಬೆಂಗಳೂರು ಬಿಟ್ಟರೆ ಮತ್ತೆ ಹತ್ತಿರದಲ್ಲೆಲ್ಲೂ ಸದ್ಯ ಪ್ರಾಣಿಗಳ ದೇಹವನ್ನು ಪರೀಕ್ಷಿಸುವ ವಿಧಿ ವಿಜ್ಞಾನ ಪ್ರಯೋಗಾಯಲಯವಿಲ್ಲದಿರುವುದು ಇನ್ನೊಂದು ಸಮಸ್ಯೆಯಾಗಿದೆ.

 

ಈ ಪ್ರಕರಣಗಳಲ್ಲಿ ತಪ್ಪಿತಸ್ಥರನ್ನು, ಪ್ರಾಣಿ ಹಂತಕರನ್ನು ಬಂಧಿಸದೇ ಇರುವುದರಿಂದ ವನ್ಯ ಪ್ರಾಣಿಗಳನ್ನು ಸಾಯಿಸುವ ಘಟನೆ ಮರುಕಳಿಸುತ್ತಿದೆ. ಅರಣ್ಯ ಇಲಾಖೆ ತನಿಖೆಯನ್ನು ನಡೆಸಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಹಾಗಾಗಿ ಜನರು ಇನ್ನು ಧೈರ್ಯದಿಂದ ವನ್ಯ ಪ್ರಾಣಿಗಳನ್ನು ಸಾಯಿಸಲು ಮುಂದಾಗುತ್ತಿದ್ದಾರೆ ಎಂದು ಪ್ರಾಣಿ ತಜ್ಞ ಡಾ ನಾಗರಾಜ್‌ ತಿಳಿಸುತ್ತಾರೆ. ನಾಗರಾಜ್‌ ಹಿಂದೆ ಅರಣ್ಯ ಇಲಾಖೆಯ ಜೊತೆ ಅನೇಕ ಕಡೆ ಆನೆ ಸೆರೆಹಿಡಿಯುವ ಕೆಲಸದಲ್ಲೂ ಭಗವಹಿಸಿದ್ದಾರೆ. ನಾವು ಹತ್ತಿರದ ಕೃಷಿಕರನ್ನೋ ಅಥವಾ ಹಳ್ಳಿಗರನ್ನು ಚಿರತೆ ಹಂತಕರೆಂದು ಹೇಳಲು ಸಾಧ್ಯವಿಲ್ಲ. ಬೇರೆ ಎಲ್ಲಿಂದಲೋ ವಿಷವುಣಿಸಿದ ನಾಯಿಯಯನ್ನು ಚಿರತೆ ಭೇಟೆಯಾಡಿ ಇಲ್ಲಿಗೆ ಎಳೆದುಕೊಂಡಿರಬಹುದು. ಹಾಗೇ ಯಾರಾದರೂ ಕಿಡಿಗೇಡಿಗಳು ಕೃಷಿಕರಿಗೆ ತೊಂದರೆ ಕೊಡಲು ಹೀಗೆ ಚಿರತೆಯನ್ನು ಸಾಯಿಸಿರಬಹುದು. ತನಿಖೆಯಾಗದೇ ಯಾವುದನ್ನೂ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕಿದೆ ಎಂದು ಡಾ. ನಾಗರಾಜ್‌ ಚಿರತೆಗಳ ಸಾವಿನ ವಿಚಾರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಹಳ್ಳಿಗರು ಚಿರತೆಯಿಂದ ತಮ್ಮ ಆಡು, ಕುರಿ, ಹಸು ಮೇಯಿಸಲು ಹೆದರಿಕೆಯಾಗುತ್ತಿದೆ. ನಮ್ಮ ಜಾನುವಾರುಗಳನ್ನು ಚಿರತೆ ಹಿಡಿದುಕೊಂಡು ಹೋಗುತ್ತಿದೆ. ನಮಗೆ ಯಾವುದೇ ಪರಿಹಾರ ಬಂದಿಲ್ಲ ಎಂದು ರೈತರು ಚಿರತೆಗಳ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಕಬಿನಿ ಎಡ ಕಾಲುವೆಯ ಮೇಲೆ ನನ್ನ ಆಡಿನ ಹಿಂಡನ್ನು ಮೇಯಿಸುತ್ತಿರುವಾಗ ಚಿರತೆಯೊಂದು ನನ್ನ ಕುರಿಗಳ ಮೇಲೆ ದಾಳಿ ಮಾಡಿತು. ನಾನು ತಕ್ಷಣ ಕಿರುಚಿಕೊಂಡಿದ್ದಕ್ಕೆ ಹಾಗೇ ಕುರಿಗಳನ್ನು ಬಿಟ್ಟು ಓಡಿತು ಎಂದು ಮಾಡನಹಳ್ಳಿಯ ಗೋವಿಂದ್‌ ನಾಯ್ಕ್‌ ಎಂಬ ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕಾಡು ಹಂದಿ ಮತ್ತು ನವಿಲಿನ ಕಾಟದಿಂದ ನಮ್ಮ ಹೂವಿನ ತೋಟಗಳು ನಾಶವಾಗುತ್ತಿವೆ. ತರಕಾರಿ ತೋಟಗಳಿಗೂ ಕಾಡುಪ್ರಾಣಿಯ ಕಾಟ ತಪ್ಪುತ್ತಿಲ್ಲ ಎಂದು ಗೊಲ್ಲೂರಿನ ಪ್ರಭುದೇವ ಎಂಬ ರೈತರು ವನ್ಯ ಮೃಗಗಳಿಂದಾಗುವ ತಮ್ಮ ಕಷ್ಟಗಳನ್ನು ತೋಡಿಕೊಳ್ಳುತ್ತಾರೆ. ಲಾಕ್‌ ಡೌನ್‌ ಕಾರಣದಿಂದ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇರುವುದರಿಂದ ಕಾಡು ಪ್ರಾಣಿಗಳು ಮನುಷ್ಯರ ವಸತಿ ಪ್ರದೇಶಕ್ಕೆ ನುಗ್ಗುತ್ತಿವೆ ಎಂದು ಪ್ರಾಣಿ ಶಾಸ್ತ್ರಜ್ಞರು ಅಭಿಪ್ರಾಯ ಪಡುತ್ತಾರೆ.

ಬೆಂಗಳೂರಿನ ಹೆಬ್ಬಾಳದ ವೆಟರ್ನರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಪ್ರಾಣಿತಜ್ಞ ಡಾ. ಪ್ರಯಾಗ್‌ ಹೆಚ್‌.ಎಸ್‌ ಅವರ ಪ್ರಕಾರ, “ಚಿರತೆಗಳು ರಾತ್ರಿ ಹೊತ್ತಿನಲ್ಲಿ ಹಳ್ಳಿಗಳ ಕಡೆಗೆ ಬರುತ್ತವೆ. ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತುಕೊಳ್ಳುತ್ತವೆ. ಚಿರತೆಗಳನ್ನು ಕಂಡು ಜನರು ಗಾಬರಿಯಾಗುತ್ತಾರೆ. ಅದೇ ಭಯದಿಂದ ಚಿರತೆಗಳಿಗೆ ವಿಷ ಉಣಿಸುವಂತಹ ಕೆಲಸಕ್ಕೆ ಮುಂದಾಗುತ್ತಾರೆ. ಮುನುಷ್ಯ ಕಾಡು ಪ್ರಾಣಿಗಳ ಕುರಿತು ಹೆಚ್ಚು ತಿಳಿದುಕೊಳ್ಳಬೇಕು. ಅವುಗಳ ವರ್ತನೆಯನ್ನು ಅರ್ಥಮಾಡಿಕೊಳ್ಳಬೇಕು. ಅರಣ್ಯ ಇಲಾಖೆ ಸುತ್ತ ಮುತ್ತದ ಹಳ್ಳಿಗಳಲ್ಲಿ ವನ್ಯಪ್ರಾಣಿ ಸಂರಕ್ಷಣೆ ಕುರಿತು ಅರಿವು ಮೂಡಿಸಬೇಕು. ಆಗ ಜನರು ಕಾಡು ಪ್ರಾಣಿಗಳನ್ನು ತಮ್ಮ ಶತ್ರುಗಳ ರೀತಿ ನೋಡುವುದು ಕಡಿಮೆಯಾಗುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಚಿರತೆಯ ದೇಹದ ಮರಣೋತ್ತರ ಪರೀಕ್ಷೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಆ ವರದಿ ಬಂದ ಮೇಲೆ ಘಟನೆ ಕುರಿತು ಸ್ಪಷ್ಟ ಮಾಹಿತಿ ಸಿಗಲಿದೆ. ಸದ್ಯ 5 ಜನ ಶಂಕಿತರ ಮೇಲೆ ಕಣ್ಣಿಟ್ಟಿದ್ದೇವೆ. ಅವರ ವಿಚಾರಣೆಯನ್ನು ನಡೆಸುತ್ತಿದ್ದೇವೆ. ಪ್ರಕರಣವನ್ನು ಬೇಧೀಸುವಂತಹ ಮಾಹಿತಿಗಳು ನಮಗೆ ದೊರೆತಿದೆ ಎಂದು ಡಿಸಿಎಫ್‌ ಪ್ರಶಾಂತ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ವನ್ಯಪ್ರಾಣಿ ಮತ್ತು ಮನುಷ್ಯನ ಸಂಘರ್ಷಗಳು ಪದೇ ಪದೇ ಮೈಸೂರು ಸುತ್ತ ಮುತ್ತ ವರದಿಯಾಗುತ್ತಿವೆ. ನಾಗರಹೊಳೆ, ಬಂಡಿಪುರ ಎರಡು ರಾಷ್ಟ್ರೀಯ ಉದ್ಯಾನಗಳಿಂದ ಸುತ್ತು ವರಿದಿರುವ ಮೈಸೂರಿನಲ್ಲಿ ಆದಷ್ಟು ವನ್ಯಮೃಗಗಳ ಹತ್ಯೆ ನಿಲ್ಲಬೇಕಿದೆ.

ಮೂಲ : ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ : ರಾಜೇಶ್‌ ಹೆಬ್ಬಾರ್‌ 


ಇದನ್ನೂ ಓದಿ : ಗುಜರಾತ್ ಪರಿಸ್ಥಿತಿ ಈಗ ಬದಲಾಗಲಿದೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...