Homeಅಂಕಣಗಳುಪ್ರಜಾಪ್ರಭುತ್ವ ವಿರೋಧಿ ಬ್ರೆಜಿಲ್ ಗಲಭೆಗಳಿಗೆ ಕಾರಣವಾದ ತೀವ್ರ ಧ್ರುವೀಕರಣ; ಜಗತ್ತಿಗೆ ಎಚ್ಚರಿಕೆಯ ಗಂಟೆ!

ಪ್ರಜಾಪ್ರಭುತ್ವ ವಿರೋಧಿ ಬ್ರೆಜಿಲ್ ಗಲಭೆಗಳಿಗೆ ಕಾರಣವಾದ ತೀವ್ರ ಧ್ರುವೀಕರಣ; ಜಗತ್ತಿಗೆ ಎಚ್ಚರಿಕೆಯ ಗಂಟೆ!

- Advertisement -
- Advertisement -

ಯುಎಸ್‌ಎನಲ್ಲಿ ಅಧ್ಯಕ್ಷೀಯ ಚುನಾವಣೆ ಸೋತ ತೀವ್ರ ಬಲಪಂಥೀಯ ಮುಖಂಡ-ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಫಲಿತಾಂಶವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದ. ಇದು ಆತನ ಬೆಂಬಲಿಗ ಬಹುಸಂಖ್ಯಾತರನ್ನು ಎಷ್ಟು ಪ್ರಭಾವಿಸಿತ್ತೆಂದರೆ, ಇಡೀ ಚುನಾವಣೆಯನ್ನು ಟ್ರಂಪ್‌ನಿಂದ ಕಸಿಯಲಾಗಿದೆ ಎಂಬ ವಾದವನ್ನು ಸ್ವಲ್ಪವೂ ವಿವೇಚನೆಯಿಲ್ಲದೆ ಒಪ್ಪಿಕೊಂಡುಬಿಟ್ಟಿದ್ದರು. ಇದರ ಪರಿಣಾಮ ಜನವರಿ 6, 2021ರಂದು ಮತ ಎಣಿಕೆ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ವಾಶಿಂಗ್ಟನ್‌ನ ಕ್ಯಾಪಿಟೊಲ್ ಭವನದ ಮೇಲೆ ನಡೆಸಿದ ದಾಳಿ. ಮಾರಕಾಸ್ತ್ರಗಳನ್ನು ಹಿಡಿದು ನಡೆಸಿದ ದಾಳಿ ಕೆಲ ಸಮಯದ ಮಟ್ಟಿಗೆ ಭಯಭೀತಿಯನ್ನು ಸೃಷ್ಟಿಸಿತ್ತು. ನಾಲ್ಕಾರು ಜನ ಮೃತಪಟ್ಟರೆ ನೂರಾರು ಜನ ಗಾಯಗೊಂಡರು. ಆ ಗಲಭೆಯನ್ನು ಶಮನ ಮಾಡಲಾಯಿತಾದರೂ, ಪ್ರಜಾಪ್ರಭುತ್ವದ ಬಗೆಗಿನ ನಂಬಿಕೆಯನ್ನು ಬುಡಮೇಲು ಮಾಡಲು ಬಿತ್ತಿರುವ ಸುಳ್ಳಿನ ನರೆಟಿವ್‌ಗೆ ಉಪಶಮನವೇನು? ಇದು ಈಗ ಬ್ರೆಜಿಲ್‌ನಲ್ಲಿ ಮರುಕಳಿಸಿದ್ದು, ಜಗತ್ತಿನಾದ್ಯಂತ ಸುಳ್ಳುಗಳ ಅಡಿಪಾಯದ ಮೇಲೆ ನಡೆದಿರುವ ಧ್ರುವೀಕರಣದ ದುರಂತವನ್ನು ಸೂಚಿಸುತ್ತಿದೆ. ನಾಗರಿಕ ಕದನ ಯಾವ ಸಮಯದಲ್ಲಾದರೂ ಸ್ಫೋಟಿಸಬಹುದಾದ ಅಪಾಯವನ್ನು ಜಗತ್ತಿನ ಹಲವು ದೇಶಗಳು ತಮ್ಮ ಒಡಲಲ್ಲಿ ಇಟ್ಟುಕೊಂಡು ಬೇಯುತ್ತಿವೆ!

ಬಲಪಂಥೀಯ ರಾಜಕಾರಣದ ಹುನ್ನಾರಕ್ಕೆ ಗುರಿಯಾಗಿ, ಜೈಲುವಾಸ ಅನುಭವಿಸಿ, ಆರೋಪಮುಕ್ತನಾಗಿ ಹೊರಬಂದಿದ್ದ ಯೂನಿಯನ್ ಲೀಡರ್ ಮತ್ತು ಎಡ ಪಕ್ಷವಾದ ವರ್ಕರ್ಸ್ ಪಾರ್ಟಿಯ ’ಲುಲಾ’ ಡಿ ಸಿಲ್ವಾ ಬ್ರೆಜಿಲ್‌ನಲ್ಲಿ ಅಕ್ಟೋಬರ್ 30ರಂದು ನಡೆದ ಅಧ್ಯಕ್ಷೀಯ ಚುನಾವಣೆಗಳಲ್ಲಿ ಗೆಲುವು ಸಾಧಿಸಿದರು. ಆದರೆ ತೀವ್ರ ಬಲಪಂಥೀಯ ನಾಯಕ ಮತ್ತು ಟ್ರಂಪ್ ಗೆಳೆಯ ಅಂದು ಅಧ್ಯಕ್ಷನಾಗಿದ್ದ ಬೊಲ್ಸೊನಾರೊ ಚುನಾವಣೆಯನ್ನು ಫಿಕ್ಸ್ ಮಾಡಲಾಗಿದೆ ಮತ್ತು ಲೂಲಾ ಗೆದ್ದರೆ ಆ ಗೆಲುವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸುತ್ತಲೇ ಚುನಾವಣೆಯುದ್ದಕ್ಕೂ ಪ್ರಚಾರ ಮಾಡಿಕೊಂಡುಬಂದಿದ್ದರು. ಸೋತ ನಂತರ ಪ್ರಭುತ್ವದ ಉಳಿದ ಸಂಸ್ಥೆಗಳು ತಮ್ಮ ಬೆಂಬಲಕ್ಕೆ ನಿಲ್ಲಲು ನಿರಾಕರಿಸಿದ ಕಾರಣ ತಮ್ಮ ವರಸೆಯನ್ನು ಸ್ವಲ್ಪಸ್ವಲ್ಪ ಬದಲಾಯಿಸುತ್ತಾ ಬಂದರು. ಆದರೆ ತನ್ನ ಬೆಂಬಲಿಗರಲ್ಲಿ ಬಿತ್ತಿದ್ದ ಪ್ರಜಾಪ್ರಭುತ್ವ ವಿರೋಧಿ ಫ್ಯಾಸಿಸ್ಟ್ ಚಿಂತನೆಗಳು ದೊಡ್ಡಮಟ್ಟದಲ್ಲಿ ಪಸರಿಸಿಯಾಗಿತ್ತು. ಲೂಲಾ ಅಧ್ಯಕ್ಷ ಪದವಿ ಸ್ವೀಕರಿಸುವುದಕ್ಕೆ ಮುಂಚಿತವಾಗಲೇ ಬೊಲ್ಸೊನಾರೊ ಯುಎಸ್‌ಎಗೆ ತೆರಳಿದ್ದರು. ಜನವರಿ 1, 2023ರಂದು ಲೂಲಾ ಪ್ರಮಾಣ ವಚನ ಸ್ವೀಕರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ಸಂಪುಟಕ್ಕೆ ಸೇರಿಸಿಕೊಂಡದ್ದು ಸೇರಿದಂತೆ, ಅಮೆಜಾನ್ ಕಾಡಿನ ಉಳಿವಿಗೆ ಹೋರಾಡಿದ್ದ ಕಾರ್ಯಕರ್ತೆಯನ್ನೂ ಸಂಪುಟಕ್ಕೆ ಸೇರಿಸಿಕೊಂಡಿದ್ದು ಧನಾತ್ಮಕ ಚರ್ಚೆಗೆ ಕಾರಣವಾಗಿತ್ತು. ಬೊಲ್ಸೊನಾರೊ ತಮ್ಮ ನಡುವೆ ಇರದಿದ್ದರೂ ಆತ ಬಿತ್ತಿದ ವಿಷಚಿಂತನೆ ಮಾತ್ರ ಬೆಂಬಲಿಗರ ತಲೆಯಿಂದ ಪರಾರಿಯಾಗಿರಲಿಲ್ಲ. ಜನವರಿ 8ನೇ ತಾರೀಕು ಬ್ರೆಜಿಲ್ ಪ್ರಜಾಪ್ರಭುತ್ವದ ಆಧಾರಸ್ಥಂಭಗಳೆಂದು ಕರೆಯಲಾಗುವ ರಾಜಧಾನಿ ಬ್ರೆಸಿಲಿಯಾದ ಕಾಂಗ್ರೆಸ್, ಸುಪ್ರೀಂ ಕೋರ್ಟ್ ಮತ್ತು ಅಧ್ಯಕ್ಷರ ಪ್ಯಾಲೆಸ್ ಮೇಲೆ ಬೊಲ್ಸೊನಾರೊ ಬೆಂಬಲಿಗರು ದಾಳಿ ನಡೆಸಿದರು. ನಂತರ ಈ ಗಲಭೆ ಅಥವಾ ದಂಗೆಯ ಪ್ರಯತ್ನವನ್ನು ತಹಬದಿಗೆ ತರಲಾಯಿತು. ಈಗ ಕಾಂಗ್ರೆಸ್ ಭವನದಲ್ಲಿ ಗ್ರೆನೇಡ್ ಮತ್ತಿತರ ಮಾರಾಕಾಸ್ತ್ರಗಳು ಸಿಕ್ಕಿರುವ ವರದಿಗಳಿವೆ. ಸುಮಾರು 1500ಕ್ಕೂ ಹಚ್ಚು ಜನರನ್ನು ಡೀಟೇನ್ ಮಾಡಲಾಗಿದ್ದು, ಸಾವಿರಾರು ಜನರ ಮೇಲೆ ಆರೋಪ ಹೊರಿಸುವ ಸಾಧ್ಯತೆಯಿದೆ. ಇಷ್ಟಾಗಿಯೂ ಜನರಲ್ಲಿ ಬಿತ್ತಲಾಗಿರುವ ಫ್ಯಾಸಿಸ್ಟ್ ವಿಷವನ್ನು ನಿವಾರಿಸದಂತೇನೂ ಆಗುವುದಿಲ್ಲ. ಅದು ಮುಂದೊಂದು ದಿನ ಬೇರೊಂದು ರೂಪದಲ್ಲಿ ಆಸ್ಫೋಟಿಸಲು ಕಾಯುತ್ತಲೇ ಇರುತ್ತದೆ.

ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ನಡೆದ ಘಟನೆಗಳು ಭಾರತದಲ್ಲಿ ಘಟಿಸಲು ಸಾಧ್ಯವಿಲ್ಲ ಎನ್ನುವಂತಿಲ್ಲ. 2014ರ ನಂತರ ನಿರಂತರವಾಗಿ ನಡೆಯುತ್ತಿರುವ ಪೋಲರೈಸೇಷನ್ ಪ್ರಾಜೆಕ್ಟ್ ಭಾರತೀಯರನ್ನು ಧಾರ್ಮಿಕ ನೆಲೆಯಲ್ಲಿ ಒಡೆಯಲು ಪ್ರಯತ್ನಿಸುತ್ತಲೇ ಇದೆ. ಇಂದು ಸಂಘ ಪರಿವಾರ ಬಿತ್ತುತ್ತಿರುವ ವಿಷ ಬೀಜಗಳು ಟ್ರಂಪ್ ಮತ್ತು ಬೊಲ್ಸೊನಾರೊ ತಮ್ಮ ಬೆಂಬಲಿಗರಲ್ಲಿ ಬಿತ್ತಿದ ವಿಷಕ್ಕಿಂತಲೂ ಭಿನ್ನವಾಗೇನೂ ಇಲ್ಲ. ಇದು ತನ್ನ ರಾಜಕೀಯಕ್ಕೆ ಹಲವು ಬಾರಿ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಇದನ್ನು ಉತ್ತೇಜಿಸುತ್ತಿದೆ. ಹಿಂದೆ ಹತ್ತುಹಲವು ಬಾರಿ ಇದರ ಬಗ್ಗೆ ಬರೆದಿದ್ದರೂ, ಹಿಂದೆಂದೂ ಕಾಣದಂತಹ ಗೋಡ್ಸೆ ಭಜನೆ, ಆತನ ದ್ವೇಷದ ಸಿದ್ಧಾಂತ ದಿನೇದಿನೇ ಪಸರಿಸುತ್ತಲೇ ಇದೆ. ಇದನ್ನು ಮುಸ್ಲಿಂ ದ್ವೇಷವಾಗಿ ಸಾಕಾರ ಮಾಡಿ ಬಲಪಂಥೀಯ ಪಕ್ಷಗಳು ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿವೆ. ಇಂತಹ ದ್ವೇಷದ ಸಿದ್ಧಾಂತವನ್ನು ಒಡೆಯಲು ಪ್ರಜ್ಞಾವಂತ ನಾಗರಿಕರು ಸಂವಿಧಾನ, ಅಂಬೇಡ್ಕರ್, ಪೆರಿಯಾರ್, ಕುವೆಂಪುರವರಂತಹ ವಿಚಾರಧಾರೆಗಳನ್ನು ಮುಂದುಮಾಡುತ್ತಿದ್ದಾರೆ.

ಈ ವಿದ್ಯಮಾನಕ್ಕೆ ಒಂದು ಮಟ್ಟದಲ್ಲಿ ಕನ್ನಡಿ ಹಿಡಿದಂತಹ ಒಂದು ಅನುಭವವನ್ನು ಹಂಚಿಕೊಳ್ಳುತ್ತೇನೆ. ಜನವರಿ 6ರಿಂದ 8ರ ನಡುವೆ ನಡೆದ ಹಾವೇರಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮುಖ್ಯ ಆಕರ್ಷಣೆಯಾದ ಪುಸ್ತಕ ಮೇಳದಲ್ಲಿ ಈ ಬಾರಿ ಹಿಂದಿನ ಸಮ್ಮೇಳನಗಳಿಗಿಂತಲೂ, ಟೆರರಿಸ್ಟ್ ಗೋಡ್ಸೆ, ಹಿಂದೂ ಸುಪ್ರಿಮಿಸ್ಟ್‌ಗಳಾದ ಸಾವರ್ಕರ್, ಗೋಳ್ವಲ್ಕರ್ ಪುಸ್ತಕಗಳನ್ನು ಕೇಳಿಕೊಂಡು ಬರುವ ಮಂದಿ ಅತಿ ಹೆಚ್ಚಿದ್ದರು. ಹಿಂದೆಲ್ಲಾ ಗೋಡ್ಸೆಯನ್ನು ಆರಾಧಿಸುವ ಅಥವಾ ಗಾಂಧಿ ಕೊಲೆಯನ್ನು ಸಮರ್ಥಿಸುವ ಪುಸ್ತಕಗಳನ್ನು ಕೇಳುವಾಗ ಒಂದು ರೀತಿಯ ಅಂಜಿಕೆಯಿರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಆತನನ್ನು ಸಮರ್ಥಿಸುವುದನ್ನೇ ಧ್ಯೇಯವನ್ನಾಗಿಸುವತ್ತ ಹಲವು ಯುವಕ-ಯುವತಿಯರನ್ನು ಸಂಘ ಪರಿವಾರ ಪ್ರಭಾವಿಸುತ್ತಿರುವುದು ತಿಳಿಯದ ವಿಷಯವೇನಲ್ಲ. ಅದು ಇಂದಿನ ರಾಜಕೀಯ ವಾತಾವರಣದಲ್ಲಿ ಮುಸ್ಲಿಂ ಸಮುದಾಯದ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ದ್ವೇಷವಾಗಿ ಹಾಗೂ ಬ್ರಾಹ್ಮಣ್ಯದ ಶ್ರೇಷ್ಠತೆಯಾಗಿ ಆಕಾರ ಪಡೆದುಕೊಳ್ಳುತ್ತಿದೆ. ಇಂತಹ ದ್ವೇಷವನ್ನು ಕೌಂಟರ್ ಮಾಡಲು, ವಿಚಾರವಾದವನ್ನು ಬಿತ್ತುವ ಅಂಬೇಡ್ಕರ್, ಕುವೆಂಪು, ಪೆರಿಯಾರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅಂತಹವರ ಚಿಂತನೆಗಳ ಪುಸ್ತಕಗಳಿಗೂ ಪುಸ್ತಕ ಮೇಳದಲ್ಲಿ ಅಪಾರ ಬೇಡಿಕೆಯಿತ್ತು. ನಡುವೆ ಸುಳಿವ ಶುದ್ಧ ಸಾಹಿತ್ಯದ ಪ್ರತಿಪಾದಕರ ಪುಸ್ತಕಗಳ ಬಗ್ಗೆ ಒಂದು ರೀತಿಯ ತಿರಸ್ಕಾರ ಮೂಡಿರುವಂತೆ ಭಾಸವಾಯಿತು. ವಿಚಾರಹೀನತೆ-ಸುಳ್ಳು-ಜೀವವಿರೋಧಿ ಹಾಗೂ ವಿಚಾರವಾದ-ಸತ್ಯ-ಜೀವಪರತೆಯ ಚಿಂತನೆಯುಳ್ಳ ಪುಸ್ತಕಗಳ ನಡುವೆ ಸ್ಪರ್ಧೆ ಏರ್ಪಟ್ಟಿರುವುದು ಆ ಮೂರು ದಿನಗಳ ಪುಸ್ತಕ ವ್ಯಾಪಾರದ ಅನುಭವ ಸೂಚಿಸಿತು. (ಇದು ತೀರ ವೈಯಕ್ತಿಕವಾದದ್ದಾದರೂ, ಹಲವು ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರು ಸಹಮತವನ್ನು ವ್ಯಕ್ತಪಡಿಸಿದರು.) ಇದು ಈ ದೇಶದಲ್ಲಿಯೂ ವಿಚಾರಹೀನತೆ ಮತ್ತು ವಿಚಾರವಾದದ ನಡುವೆ ತೀವ್ರ ಮಟ್ಟದಲ್ಲಿ ಆಗಿರುವ-ಆಗುತ್ತಿರುವ ಧ್ರುವೀಕರಣವನ್ನು ಸೂಚಿಸುತ್ತದೆ. ಆದರೆ ಭಾರತದ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ವಿಚಾರಹೀನತೆಗೇ ಹೆಚ್ಚು ಸ್ಪೇಸ್ ದೊರಕುವುದರಿಂದ ಅದು ಹೆಚ್ಚು ಮಿಂಚುತ್ತಿರುವಂತೆ ಮತ್ತು ಬೆಳೆಯುತ್ತಿರುವಂತೆ ಕಾಣಿಸಿಕೊಳ್ಳುತ್ತದೆ. ಪ್ರಭುತ್ವದ ಬೆಂಬಲ ಅದಕ್ಕಿರುವುದರಿಂದ ಅದು ತನ್ನ ಉಗ್ರತ್ವವನ್ನು ಎಗ್ಗಿಲ್ಲದೆ ಪ್ರತಿಪಾದಿಸುತ್ತದೆ. ವಿಚಾರಹೀನತೆಯನ್ನು, ದ್ವೇಷವನ್ನು ತೀವ್ರತೆಗೆ ತೆಗೆದುಕೊಂಡು ಹೋದಷ್ಟೂ, ಯುಎಸ್‌ಎನ ಕ್ಯಾಪಿಟೊಲ್ ಭವನ ಅಥವಾ ಬ್ರೆಜಿಲ್‌ನ ಸಂಸತ್ ಕಟ್ಟಡದಲ್ಲಿ ಆದಂತಹ ಗಲಭೆಗಳ ಸಂಭವನೀಯತೆ ಹೆಚ್ಚುತ್ತಾ ಹೋಗುತ್ತದೆ.

ಈ ನಿಟ್ಟಿನಲ್ಲಿ ವಿಚಾರಹೀನತೆಯ-ಪ್ರಗತಿಹೀನತೆಯ ಕಡೆಗೆ ಎಳೆಯಲಾಗಿರುವವರನ್ನು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ, ಮಾನವೀಯತೆಯನ್ನು ತುಡಿಯುವ, ಬಹುತ್ವವನ್ನು ಗೌರವಿಸುವ ವಿಚಾರಗಳತ್ತ ಕರೆತರುವುದೊಂದೇ ಈಗ ಉಳಿದಿರುವ ದಾರಿ. ಅಂತಹ ದಾರಿಗಳನ್ನು ಒರೆಗೆ ಹಚ್ಚುತ್ತಾ, ಅಗತ್ಯ ಬಿದ್ದಲ್ಲಿ ಕಾರ್ಯಶೈಲಿಯನ್ನು ಬದಲಾಯಿಸಿಕೊಳ್ಳುತ್ತಾ ಮತ್ತೆಮತ್ತೆ ಹೊಸದಾಗಿ ಶೋಧಿಸಿಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...