Homeಅಂಕಣಗಳುಪ್ರಜಾಪ್ರಭುತ್ವ ವಿರೋಧಿ ಬ್ರೆಜಿಲ್ ಗಲಭೆಗಳಿಗೆ ಕಾರಣವಾದ ತೀವ್ರ ಧ್ರುವೀಕರಣ; ಜಗತ್ತಿಗೆ ಎಚ್ಚರಿಕೆಯ ಗಂಟೆ!

ಪ್ರಜಾಪ್ರಭುತ್ವ ವಿರೋಧಿ ಬ್ರೆಜಿಲ್ ಗಲಭೆಗಳಿಗೆ ಕಾರಣವಾದ ತೀವ್ರ ಧ್ರುವೀಕರಣ; ಜಗತ್ತಿಗೆ ಎಚ್ಚರಿಕೆಯ ಗಂಟೆ!

- Advertisement -
- Advertisement -

ಯುಎಸ್‌ಎನಲ್ಲಿ ಅಧ್ಯಕ್ಷೀಯ ಚುನಾವಣೆ ಸೋತ ತೀವ್ರ ಬಲಪಂಥೀಯ ಮುಖಂಡ-ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಫಲಿತಾಂಶವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದ. ಇದು ಆತನ ಬೆಂಬಲಿಗ ಬಹುಸಂಖ್ಯಾತರನ್ನು ಎಷ್ಟು ಪ್ರಭಾವಿಸಿತ್ತೆಂದರೆ, ಇಡೀ ಚುನಾವಣೆಯನ್ನು ಟ್ರಂಪ್‌ನಿಂದ ಕಸಿಯಲಾಗಿದೆ ಎಂಬ ವಾದವನ್ನು ಸ್ವಲ್ಪವೂ ವಿವೇಚನೆಯಿಲ್ಲದೆ ಒಪ್ಪಿಕೊಂಡುಬಿಟ್ಟಿದ್ದರು. ಇದರ ಪರಿಣಾಮ ಜನವರಿ 6, 2021ರಂದು ಮತ ಎಣಿಕೆ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ವಾಶಿಂಗ್ಟನ್‌ನ ಕ್ಯಾಪಿಟೊಲ್ ಭವನದ ಮೇಲೆ ನಡೆಸಿದ ದಾಳಿ. ಮಾರಕಾಸ್ತ್ರಗಳನ್ನು ಹಿಡಿದು ನಡೆಸಿದ ದಾಳಿ ಕೆಲ ಸಮಯದ ಮಟ್ಟಿಗೆ ಭಯಭೀತಿಯನ್ನು ಸೃಷ್ಟಿಸಿತ್ತು. ನಾಲ್ಕಾರು ಜನ ಮೃತಪಟ್ಟರೆ ನೂರಾರು ಜನ ಗಾಯಗೊಂಡರು. ಆ ಗಲಭೆಯನ್ನು ಶಮನ ಮಾಡಲಾಯಿತಾದರೂ, ಪ್ರಜಾಪ್ರಭುತ್ವದ ಬಗೆಗಿನ ನಂಬಿಕೆಯನ್ನು ಬುಡಮೇಲು ಮಾಡಲು ಬಿತ್ತಿರುವ ಸುಳ್ಳಿನ ನರೆಟಿವ್‌ಗೆ ಉಪಶಮನವೇನು? ಇದು ಈಗ ಬ್ರೆಜಿಲ್‌ನಲ್ಲಿ ಮರುಕಳಿಸಿದ್ದು, ಜಗತ್ತಿನಾದ್ಯಂತ ಸುಳ್ಳುಗಳ ಅಡಿಪಾಯದ ಮೇಲೆ ನಡೆದಿರುವ ಧ್ರುವೀಕರಣದ ದುರಂತವನ್ನು ಸೂಚಿಸುತ್ತಿದೆ. ನಾಗರಿಕ ಕದನ ಯಾವ ಸಮಯದಲ್ಲಾದರೂ ಸ್ಫೋಟಿಸಬಹುದಾದ ಅಪಾಯವನ್ನು ಜಗತ್ತಿನ ಹಲವು ದೇಶಗಳು ತಮ್ಮ ಒಡಲಲ್ಲಿ ಇಟ್ಟುಕೊಂಡು ಬೇಯುತ್ತಿವೆ!

ಬಲಪಂಥೀಯ ರಾಜಕಾರಣದ ಹುನ್ನಾರಕ್ಕೆ ಗುರಿಯಾಗಿ, ಜೈಲುವಾಸ ಅನುಭವಿಸಿ, ಆರೋಪಮುಕ್ತನಾಗಿ ಹೊರಬಂದಿದ್ದ ಯೂನಿಯನ್ ಲೀಡರ್ ಮತ್ತು ಎಡ ಪಕ್ಷವಾದ ವರ್ಕರ್ಸ್ ಪಾರ್ಟಿಯ ’ಲುಲಾ’ ಡಿ ಸಿಲ್ವಾ ಬ್ರೆಜಿಲ್‌ನಲ್ಲಿ ಅಕ್ಟೋಬರ್ 30ರಂದು ನಡೆದ ಅಧ್ಯಕ್ಷೀಯ ಚುನಾವಣೆಗಳಲ್ಲಿ ಗೆಲುವು ಸಾಧಿಸಿದರು. ಆದರೆ ತೀವ್ರ ಬಲಪಂಥೀಯ ನಾಯಕ ಮತ್ತು ಟ್ರಂಪ್ ಗೆಳೆಯ ಅಂದು ಅಧ್ಯಕ್ಷನಾಗಿದ್ದ ಬೊಲ್ಸೊನಾರೊ ಚುನಾವಣೆಯನ್ನು ಫಿಕ್ಸ್ ಮಾಡಲಾಗಿದೆ ಮತ್ತು ಲೂಲಾ ಗೆದ್ದರೆ ಆ ಗೆಲುವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸುತ್ತಲೇ ಚುನಾವಣೆಯುದ್ದಕ್ಕೂ ಪ್ರಚಾರ ಮಾಡಿಕೊಂಡುಬಂದಿದ್ದರು. ಸೋತ ನಂತರ ಪ್ರಭುತ್ವದ ಉಳಿದ ಸಂಸ್ಥೆಗಳು ತಮ್ಮ ಬೆಂಬಲಕ್ಕೆ ನಿಲ್ಲಲು ನಿರಾಕರಿಸಿದ ಕಾರಣ ತಮ್ಮ ವರಸೆಯನ್ನು ಸ್ವಲ್ಪಸ್ವಲ್ಪ ಬದಲಾಯಿಸುತ್ತಾ ಬಂದರು. ಆದರೆ ತನ್ನ ಬೆಂಬಲಿಗರಲ್ಲಿ ಬಿತ್ತಿದ್ದ ಪ್ರಜಾಪ್ರಭುತ್ವ ವಿರೋಧಿ ಫ್ಯಾಸಿಸ್ಟ್ ಚಿಂತನೆಗಳು ದೊಡ್ಡಮಟ್ಟದಲ್ಲಿ ಪಸರಿಸಿಯಾಗಿತ್ತು. ಲೂಲಾ ಅಧ್ಯಕ್ಷ ಪದವಿ ಸ್ವೀಕರಿಸುವುದಕ್ಕೆ ಮುಂಚಿತವಾಗಲೇ ಬೊಲ್ಸೊನಾರೊ ಯುಎಸ್‌ಎಗೆ ತೆರಳಿದ್ದರು. ಜನವರಿ 1, 2023ರಂದು ಲೂಲಾ ಪ್ರಮಾಣ ವಚನ ಸ್ವೀಕರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ಸಂಪುಟಕ್ಕೆ ಸೇರಿಸಿಕೊಂಡದ್ದು ಸೇರಿದಂತೆ, ಅಮೆಜಾನ್ ಕಾಡಿನ ಉಳಿವಿಗೆ ಹೋರಾಡಿದ್ದ ಕಾರ್ಯಕರ್ತೆಯನ್ನೂ ಸಂಪುಟಕ್ಕೆ ಸೇರಿಸಿಕೊಂಡಿದ್ದು ಧನಾತ್ಮಕ ಚರ್ಚೆಗೆ ಕಾರಣವಾಗಿತ್ತು. ಬೊಲ್ಸೊನಾರೊ ತಮ್ಮ ನಡುವೆ ಇರದಿದ್ದರೂ ಆತ ಬಿತ್ತಿದ ವಿಷಚಿಂತನೆ ಮಾತ್ರ ಬೆಂಬಲಿಗರ ತಲೆಯಿಂದ ಪರಾರಿಯಾಗಿರಲಿಲ್ಲ. ಜನವರಿ 8ನೇ ತಾರೀಕು ಬ್ರೆಜಿಲ್ ಪ್ರಜಾಪ್ರಭುತ್ವದ ಆಧಾರಸ್ಥಂಭಗಳೆಂದು ಕರೆಯಲಾಗುವ ರಾಜಧಾನಿ ಬ್ರೆಸಿಲಿಯಾದ ಕಾಂಗ್ರೆಸ್, ಸುಪ್ರೀಂ ಕೋರ್ಟ್ ಮತ್ತು ಅಧ್ಯಕ್ಷರ ಪ್ಯಾಲೆಸ್ ಮೇಲೆ ಬೊಲ್ಸೊನಾರೊ ಬೆಂಬಲಿಗರು ದಾಳಿ ನಡೆಸಿದರು. ನಂತರ ಈ ಗಲಭೆ ಅಥವಾ ದಂಗೆಯ ಪ್ರಯತ್ನವನ್ನು ತಹಬದಿಗೆ ತರಲಾಯಿತು. ಈಗ ಕಾಂಗ್ರೆಸ್ ಭವನದಲ್ಲಿ ಗ್ರೆನೇಡ್ ಮತ್ತಿತರ ಮಾರಾಕಾಸ್ತ್ರಗಳು ಸಿಕ್ಕಿರುವ ವರದಿಗಳಿವೆ. ಸುಮಾರು 1500ಕ್ಕೂ ಹಚ್ಚು ಜನರನ್ನು ಡೀಟೇನ್ ಮಾಡಲಾಗಿದ್ದು, ಸಾವಿರಾರು ಜನರ ಮೇಲೆ ಆರೋಪ ಹೊರಿಸುವ ಸಾಧ್ಯತೆಯಿದೆ. ಇಷ್ಟಾಗಿಯೂ ಜನರಲ್ಲಿ ಬಿತ್ತಲಾಗಿರುವ ಫ್ಯಾಸಿಸ್ಟ್ ವಿಷವನ್ನು ನಿವಾರಿಸದಂತೇನೂ ಆಗುವುದಿಲ್ಲ. ಅದು ಮುಂದೊಂದು ದಿನ ಬೇರೊಂದು ರೂಪದಲ್ಲಿ ಆಸ್ಫೋಟಿಸಲು ಕಾಯುತ್ತಲೇ ಇರುತ್ತದೆ.

ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ನಡೆದ ಘಟನೆಗಳು ಭಾರತದಲ್ಲಿ ಘಟಿಸಲು ಸಾಧ್ಯವಿಲ್ಲ ಎನ್ನುವಂತಿಲ್ಲ. 2014ರ ನಂತರ ನಿರಂತರವಾಗಿ ನಡೆಯುತ್ತಿರುವ ಪೋಲರೈಸೇಷನ್ ಪ್ರಾಜೆಕ್ಟ್ ಭಾರತೀಯರನ್ನು ಧಾರ್ಮಿಕ ನೆಲೆಯಲ್ಲಿ ಒಡೆಯಲು ಪ್ರಯತ್ನಿಸುತ್ತಲೇ ಇದೆ. ಇಂದು ಸಂಘ ಪರಿವಾರ ಬಿತ್ತುತ್ತಿರುವ ವಿಷ ಬೀಜಗಳು ಟ್ರಂಪ್ ಮತ್ತು ಬೊಲ್ಸೊನಾರೊ ತಮ್ಮ ಬೆಂಬಲಿಗರಲ್ಲಿ ಬಿತ್ತಿದ ವಿಷಕ್ಕಿಂತಲೂ ಭಿನ್ನವಾಗೇನೂ ಇಲ್ಲ. ಇದು ತನ್ನ ರಾಜಕೀಯಕ್ಕೆ ಹಲವು ಬಾರಿ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಇದನ್ನು ಉತ್ತೇಜಿಸುತ್ತಿದೆ. ಹಿಂದೆ ಹತ್ತುಹಲವು ಬಾರಿ ಇದರ ಬಗ್ಗೆ ಬರೆದಿದ್ದರೂ, ಹಿಂದೆಂದೂ ಕಾಣದಂತಹ ಗೋಡ್ಸೆ ಭಜನೆ, ಆತನ ದ್ವೇಷದ ಸಿದ್ಧಾಂತ ದಿನೇದಿನೇ ಪಸರಿಸುತ್ತಲೇ ಇದೆ. ಇದನ್ನು ಮುಸ್ಲಿಂ ದ್ವೇಷವಾಗಿ ಸಾಕಾರ ಮಾಡಿ ಬಲಪಂಥೀಯ ಪಕ್ಷಗಳು ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿವೆ. ಇಂತಹ ದ್ವೇಷದ ಸಿದ್ಧಾಂತವನ್ನು ಒಡೆಯಲು ಪ್ರಜ್ಞಾವಂತ ನಾಗರಿಕರು ಸಂವಿಧಾನ, ಅಂಬೇಡ್ಕರ್, ಪೆರಿಯಾರ್, ಕುವೆಂಪುರವರಂತಹ ವಿಚಾರಧಾರೆಗಳನ್ನು ಮುಂದುಮಾಡುತ್ತಿದ್ದಾರೆ.

ಈ ವಿದ್ಯಮಾನಕ್ಕೆ ಒಂದು ಮಟ್ಟದಲ್ಲಿ ಕನ್ನಡಿ ಹಿಡಿದಂತಹ ಒಂದು ಅನುಭವವನ್ನು ಹಂಚಿಕೊಳ್ಳುತ್ತೇನೆ. ಜನವರಿ 6ರಿಂದ 8ರ ನಡುವೆ ನಡೆದ ಹಾವೇರಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮುಖ್ಯ ಆಕರ್ಷಣೆಯಾದ ಪುಸ್ತಕ ಮೇಳದಲ್ಲಿ ಈ ಬಾರಿ ಹಿಂದಿನ ಸಮ್ಮೇಳನಗಳಿಗಿಂತಲೂ, ಟೆರರಿಸ್ಟ್ ಗೋಡ್ಸೆ, ಹಿಂದೂ ಸುಪ್ರಿಮಿಸ್ಟ್‌ಗಳಾದ ಸಾವರ್ಕರ್, ಗೋಳ್ವಲ್ಕರ್ ಪುಸ್ತಕಗಳನ್ನು ಕೇಳಿಕೊಂಡು ಬರುವ ಮಂದಿ ಅತಿ ಹೆಚ್ಚಿದ್ದರು. ಹಿಂದೆಲ್ಲಾ ಗೋಡ್ಸೆಯನ್ನು ಆರಾಧಿಸುವ ಅಥವಾ ಗಾಂಧಿ ಕೊಲೆಯನ್ನು ಸಮರ್ಥಿಸುವ ಪುಸ್ತಕಗಳನ್ನು ಕೇಳುವಾಗ ಒಂದು ರೀತಿಯ ಅಂಜಿಕೆಯಿರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಆತನನ್ನು ಸಮರ್ಥಿಸುವುದನ್ನೇ ಧ್ಯೇಯವನ್ನಾಗಿಸುವತ್ತ ಹಲವು ಯುವಕ-ಯುವತಿಯರನ್ನು ಸಂಘ ಪರಿವಾರ ಪ್ರಭಾವಿಸುತ್ತಿರುವುದು ತಿಳಿಯದ ವಿಷಯವೇನಲ್ಲ. ಅದು ಇಂದಿನ ರಾಜಕೀಯ ವಾತಾವರಣದಲ್ಲಿ ಮುಸ್ಲಿಂ ಸಮುದಾಯದ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ದ್ವೇಷವಾಗಿ ಹಾಗೂ ಬ್ರಾಹ್ಮಣ್ಯದ ಶ್ರೇಷ್ಠತೆಯಾಗಿ ಆಕಾರ ಪಡೆದುಕೊಳ್ಳುತ್ತಿದೆ. ಇಂತಹ ದ್ವೇಷವನ್ನು ಕೌಂಟರ್ ಮಾಡಲು, ವಿಚಾರವಾದವನ್ನು ಬಿತ್ತುವ ಅಂಬೇಡ್ಕರ್, ಕುವೆಂಪು, ಪೆರಿಯಾರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅಂತಹವರ ಚಿಂತನೆಗಳ ಪುಸ್ತಕಗಳಿಗೂ ಪುಸ್ತಕ ಮೇಳದಲ್ಲಿ ಅಪಾರ ಬೇಡಿಕೆಯಿತ್ತು. ನಡುವೆ ಸುಳಿವ ಶುದ್ಧ ಸಾಹಿತ್ಯದ ಪ್ರತಿಪಾದಕರ ಪುಸ್ತಕಗಳ ಬಗ್ಗೆ ಒಂದು ರೀತಿಯ ತಿರಸ್ಕಾರ ಮೂಡಿರುವಂತೆ ಭಾಸವಾಯಿತು. ವಿಚಾರಹೀನತೆ-ಸುಳ್ಳು-ಜೀವವಿರೋಧಿ ಹಾಗೂ ವಿಚಾರವಾದ-ಸತ್ಯ-ಜೀವಪರತೆಯ ಚಿಂತನೆಯುಳ್ಳ ಪುಸ್ತಕಗಳ ನಡುವೆ ಸ್ಪರ್ಧೆ ಏರ್ಪಟ್ಟಿರುವುದು ಆ ಮೂರು ದಿನಗಳ ಪುಸ್ತಕ ವ್ಯಾಪಾರದ ಅನುಭವ ಸೂಚಿಸಿತು. (ಇದು ತೀರ ವೈಯಕ್ತಿಕವಾದದ್ದಾದರೂ, ಹಲವು ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರು ಸಹಮತವನ್ನು ವ್ಯಕ್ತಪಡಿಸಿದರು.) ಇದು ಈ ದೇಶದಲ್ಲಿಯೂ ವಿಚಾರಹೀನತೆ ಮತ್ತು ವಿಚಾರವಾದದ ನಡುವೆ ತೀವ್ರ ಮಟ್ಟದಲ್ಲಿ ಆಗಿರುವ-ಆಗುತ್ತಿರುವ ಧ್ರುವೀಕರಣವನ್ನು ಸೂಚಿಸುತ್ತದೆ. ಆದರೆ ಭಾರತದ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ವಿಚಾರಹೀನತೆಗೇ ಹೆಚ್ಚು ಸ್ಪೇಸ್ ದೊರಕುವುದರಿಂದ ಅದು ಹೆಚ್ಚು ಮಿಂಚುತ್ತಿರುವಂತೆ ಮತ್ತು ಬೆಳೆಯುತ್ತಿರುವಂತೆ ಕಾಣಿಸಿಕೊಳ್ಳುತ್ತದೆ. ಪ್ರಭುತ್ವದ ಬೆಂಬಲ ಅದಕ್ಕಿರುವುದರಿಂದ ಅದು ತನ್ನ ಉಗ್ರತ್ವವನ್ನು ಎಗ್ಗಿಲ್ಲದೆ ಪ್ರತಿಪಾದಿಸುತ್ತದೆ. ವಿಚಾರಹೀನತೆಯನ್ನು, ದ್ವೇಷವನ್ನು ತೀವ್ರತೆಗೆ ತೆಗೆದುಕೊಂಡು ಹೋದಷ್ಟೂ, ಯುಎಸ್‌ಎನ ಕ್ಯಾಪಿಟೊಲ್ ಭವನ ಅಥವಾ ಬ್ರೆಜಿಲ್‌ನ ಸಂಸತ್ ಕಟ್ಟಡದಲ್ಲಿ ಆದಂತಹ ಗಲಭೆಗಳ ಸಂಭವನೀಯತೆ ಹೆಚ್ಚುತ್ತಾ ಹೋಗುತ್ತದೆ.

ಈ ನಿಟ್ಟಿನಲ್ಲಿ ವಿಚಾರಹೀನತೆಯ-ಪ್ರಗತಿಹೀನತೆಯ ಕಡೆಗೆ ಎಳೆಯಲಾಗಿರುವವರನ್ನು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ, ಮಾನವೀಯತೆಯನ್ನು ತುಡಿಯುವ, ಬಹುತ್ವವನ್ನು ಗೌರವಿಸುವ ವಿಚಾರಗಳತ್ತ ಕರೆತರುವುದೊಂದೇ ಈಗ ಉಳಿದಿರುವ ದಾರಿ. ಅಂತಹ ದಾರಿಗಳನ್ನು ಒರೆಗೆ ಹಚ್ಚುತ್ತಾ, ಅಗತ್ಯ ಬಿದ್ದಲ್ಲಿ ಕಾರ್ಯಶೈಲಿಯನ್ನು ಬದಲಾಯಿಸಿಕೊಳ್ಳುತ್ತಾ ಮತ್ತೆಮತ್ತೆ ಹೊಸದಾಗಿ ಶೋಧಿಸಿಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...