Homeನ್ಯಾಯ ಪಥಸಾಮಾಜಿಕ ಬದುಕಿಗೆ ವಿಷ ಕಲೆಸುತ್ತಿರುವ ದೇಶದ ಮಾಧ್ಯಮಗಳು: ಡಿ.ಉಮಾಪತಿ

ಸಾಮಾಜಿಕ ಬದುಕಿಗೆ ವಿಷ ಕಲೆಸುತ್ತಿರುವ ದೇಶದ ಮಾಧ್ಯಮಗಳು: ಡಿ.ಉಮಾಪತಿ

ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗೆಳ ಅಸಲು ಕರ್ತವ್ಯ

- Advertisement -
- Advertisement -

‘ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು’ ಎಂದು ಮೂರು ದಶಕಗಳ ಕಾಲ ಆರೆಸ್ಸೆಸ್ ಮುಖ್ಯಸ್ಥರಾಗಿದ್ದ ಮಾಧವರಾವ್ ಸದಾಶಿವರಾವ್ ಗೋಲ್ವಾಲ್ಕರ್ ಹೇಳಿದ್ದರು. We or Our Nationhood Defined (1939) ಕೃತಿಯಲ್ಲಿ ರಾಷ್ಟ್ರೀಯತೆ ಕುರಿತ ಅವರ ವಿಚಾರದ ಸವಿವರ ಪ್ರಸ್ತಾಪವಿದೆ.

“ಹಿಂದುಸ್ತಾನದ ಪರಕೀಯ ಜನಾಂಗಗಳು ಹಿಂದು ಸಂಸ್ಕೃತಿ ಮತ್ತು ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಹಿಂದು ಧರ್ಮವನ್ನು ಭಕ್ತಿಗೌರವದಿಂದ ಕಾಣಬೇಕು, ಹಿಂದೂ ಜನಾಂಗ ಮತ್ತು ಸಂಸ್ಕೃತಿಯನ್ನು ವೈಭವೀಕರಿಸುವುದರ ವಿನಾ ಬೇರೆ ಯಾವ ವಿಚಾರವನ್ನೂ ನೆಚ್ಚಕೂಡದು. ಪ್ರತ್ಯೇಕ ಅಸ್ತಿತ್ವವನ್ನು ಬಿಟ್ಟುಕೊಟ್ಟು ಹಿಂದು ಜನಾಂಗದೊಳಕ್ಕೆ ವಿಲೀನಗೊಳ್ಳಬೇಕು. ಇಲ್ಲವಾದರೆ ಹಿಂದು ರಾಷ್ಟ್ರಕ್ಕೆ ಸಂಪೂರ್ಣ ಅಧೀನವಾಗಿ ನಾಗರಿಕ ಹಕ್ಕುಗಳನ್ನು ಕೂಡ ಕೇಳದಂತೆ ಈ ದೇಶದಲ್ಲಿ ಜೀವಿಸಬೇಕು. ನಮ್ಮದು ಪ್ರಾಚೀನ ರಾಷ್ಟ್ರ. ತಮ್ಮ ದೇಶದಲ್ಲಿ ನೆಲೆಸಲು ಬಂದ ಪರಕೀಯ ಜನಾಂಗಗಳನ್ನು ಪ್ರಾಚೀನ ದೇಶಗಳು ಹೇಗೆ ನಡೆಸಿಕೊಳ್ಳುತ್ತವೆಯೋ ಅದೇರೀತಿ ನಡೆಸಿಕೊಳ್ಳೋಣ” ಎಂಬುದು ರಾಹುಲ ಸಾಂಕೃತ್ಯಾಯನ ಅವರ ಪ್ರತಿಪಾದನೆಯಾಗಿತ್ತು.

ಸಮಾನ ಪವಿತ್ರಭೂಮಿ ಎಂಬುದು ಬಹಳ ಸಂದರ್ಭಗಳಲ್ಲಿ ಮಾತೃಭೂಮಿಗಿಂತ ಬಲಿಷ್ಠ ಪರಿಕಲ್ಪನೆಯಾಗುತ್ತದೆ. ಮುಸಲ್ಮಾನರಿಗೆ ಅವರು ಬದುಕಿ ಬಾಳುವ ದೆಹಲಿ ಅಥವಾ ಆಗ್ರಾಗಿಂತ ಮೆಕ್ಕಾ ಮದೀನಾ ಹೆಚ್ಚು ವಾಸ್ತವ. ರಾಷ್ಟ್ರ ಎಂಬುದು ಪ್ರಾದೇಶಿಕ ಅಲ್ಲ, ಅದು ಸಾಂಸ್ಕೃತಿಕ. ದೇಶದಲ್ಲಿ ವಾಸಿಸುವವರೆಲ್ಲರೂ ದೇಶದ ಭಾಗವಲ್ಲ, ದೇಶದ ಹೊರಗೆ ವಾಸಿಸಿರುವವರೆಲ್ಲ ಹೊರಗಿನವರು ಎಂದೇನೂ ಅರ್ಥವಲ್ಲ ಎಂಬುದು ಹಿಂದುತ್ವದ ಪ್ರತಿಪಾದಕ ವಿ.ಡಿ.ಸಾವರ್ಕರ್ ಅವರ ಪ್ರತಿಪಾದನೆಯಾಗಿತ್ತು. ಆದರೆ ಸಂವಿಧಾನ ರಚನಾ ಸಭೆಯು ಗೋಲ್ವಲ್ಕರ್ ಮತ್ತು ಸಾವರ್ಕರ್ ಅವರ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿತು. ಪೌರತ್ವದ ತಳಹದಿ ಧರ್ಮ ಅಲ್ಲ ಎಂದು ಸಾರಿತು. ಭಾರತವನ್ನು ಹಿಂದೂ ಬಹುಸಂಖ್ಯಾತ ದೇಶ ಎಂದು ಘೋಷಿಸದೆ ಜಾತ್ಯತೀತ ಮೌಲ್ಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿತು. ಆದರೆ ಮಹಮ್ಮದಾಲಿ ಜಿನ್ನಾ ನೇತೃತ್ವದ ಪಾಕಿಸ್ತಾನ ಇಸ್ಲಾಮಿಕ್ ರಾಷ್ಟ್ರ ಎಂದು ಸ್ಥಾಪಿತವಾಯಿತು. ಜಿನ್ನಾ ಅವರು ಅಂದು ಪಾಕಿಸ್ತಾನಕ್ಕೆ ಮಾಡಿದ್ದನ್ನು ಬಿಜೆಪಿ ಇಂದು ಭಾರತಕ್ಕೆ ಮಾಡಲು ಹೊರಟಿದೆ.

ರಾಷ್ಟ್ರೀಯತೆ ಮತ್ತು ಪೌರತ್ವದ ಈ ಪರಿಕಲ್ಪನೆಯು ಇದೀಗ ಬಿಜೆಪಿ ಆಡಳಿತದಲ್ಲಿ ಎನ್.ಆರ್.ಸಿ. ಮತ್ತು ಪೌರತ್ವ ತಿದ್ದುಪಡಿ ಕಾಯಿದೆಯ ರೂಪದಲ್ಲಿ ಪ್ರತಿಫಲಿಸತೊಡಗಿದೆ. ಅಸ್ಸಾಮಿನಲ್ಲಿ ಎನ್.ಆರ್.ಸಿ. ಜಾರಿಯೊಂದಿಗೆ ಕಾರ್ಯರೂಪಕ್ಕೆ ಇಳಿಸಲಾಗಿತ್ತು. ಅದರ ತಾರ್ಕಿಕ ಮುಂದುವರಿಕೆ ಜಮ್ಮು-ಕಾಶ್ಮೀರದಲ್ಲಿ ಜರುಗಿತು. ಈ ರಾಜ್ಯಕ್ಕೆ
ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಿತ್ತುಹಾಕಲಾಯಿತು. ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಒಡೆಯಲಾಯಿತು. ಸಾಂವಿಧಾನಿಕ ಸ್ವಾಯತ್ತಾಧಿಕಾರ ಮತ್ತು ಸಾಂಸ್ಕೃತಿಕ ಅಸ್ಮಿತೆಯ ರಕ್ಷಣೆ ಎರಡನ್ನೂ ಕಳೆದುಕೊಂಡಿರುವ ಕಾಶ್ಮೀರಿಗರು ಮುಂಬರುವ ದಿನಗಳಲ್ಲಿ ಎನ್.ಆರ್.ಸಿ. ಎದುರಿಸಬೇಕಾಗುತ್ತದೆ. ತಮ್ಮ ಪೌರತ್ವ ಸಾಬೀತು ಮಾಡಲಾಗದೆ ಹೋದರೆ ಪೌರ ಹಕ್ಕುಗಳನ್ನೂ ಕಳೆದುಕೊಳ್ಳಲಿದ್ದಾರೆ.

ದ್ವೇಷವನ್ನು, ಶಂಕೆಯ ಅಸ್ತ್ರಗಳನ್ನು ತಯಾರಿಸಿ ಆಳುವವರ ಕೈಗೆ ಒಪ್ಪಿಸಿ ನಜರು ಒಪ್ಪಿಸುವ ಕಮ್ಮಟಗಳಾಗಿಬಿಟ್ಟಿವೆ ಛಾನೆಲ್ಲುಗಳು ಮತ್ತು ಪತ್ರಿಕೆಗಳು.

ಹಿಂದೂ ಮುಸ್ಲಿಂ ಧ್ರುವೀಕರಣವನ್ನು ತಾರಕಕ್ಕೆ ಒಯ್ಯುವ ನಿಚ್ಚಳ ಉದ್ದೇಶವನ್ನು ಹೊಂದಿರುವ ನಡೆಯಿದು. ಸಾಮಾಜಿಕ ಬದುಕಿಗೆ ವಿಷ ಕಲೆಸುವ ಕೃತ್ಯಕ್ಕೆ ದೇಶದ ಸಮೂಹ ಮಾಧ್ಯಮಗಳು ತಾಳ ಹಾಕತೊಡಗಿವೆ. ಸ್ವಾರ್ಥಕ್ಕಾಗಿ ಆಡತೊಡಗಿರುವ ಅಪಾಯಕಾರಿ ಆಟವಿದು.

ಈ ತಳಮಳದ ದುಬಾರಿ ಬೆಲೆಯನ್ನು ತೆರುವ ಪರಿಸ್ಥಿತಿಯಲ್ಲಿಲ್ಲ ಭಾರತ. ನಮ್ಮ ಸಮಾಜ ಗೊಂದಲದ ಸಮುದ್ರಕ್ಕೆ ಬೀಳಲಿದೆ. ಭಾರತದ ಮಾನವತಾವಾದಿ ಮೇರು ಪ್ರತಿಭೆ ರಾಹುಲ ಸಾಂಕೃತ್ಯಾಯನ (ಕೇದಾರನಾಥ ಪಾಂಡೆ) ಅವರು ಆರು ದಶಕಗಳ ಹಿಂದೆ ಬರೆದ ಈ ಮಾತುಗಳು ಇಂದಿಗೂ ಪ್ರಸ್ತುತ-“ಧರ್ಮ ದ್ವೇಷವನ್ನು ಬಿತ್ತುವುದಿಲ್ಲ” (“ಮಜಹಬ ನಹೀ ಸಿಖಾತಾ..ಆಪಸ ಮೇಂ ಬೈರ ರಖನಾ..”) ಎಂಬ ಮಾತು ಬಿಳಿ ಸುಳ್ಳು. ಧರ್ಮ ದ್ವೇಷವನ್ನು ಹೇಳಿಕೊಡುವುದಿಲ್ಲ ಎಂದಾದರೆ ನಮ್ಮ ದೇಶ ಜುಟ್ಟು- ಗಡ್ಡದ ಲಡಾಯಿಯಲ್ಲಿ ಸಾವಿರ ವರ್ಷಗಳಿಂದ ಯಾಕೆ ಬರಬಾದಾಗುತ್ತಿದೆ. ಹಳೆಯ ಚರಿತ್ರೆ ಬದಿಗಿಡಿ, ಈಗಲೂ ಹಿಂದುಸ್ತಾನದ ಶಹರಗಳು ಮತ್ತು ಹಳ್ಳಿಗಳಲ್ಲಿ ಒಂದು ಧರ್ಮದವರ ನೆತ್ತರಿಗಾಗಿ ಮತ್ತೊಂದು ಧರ್ಮದವರನ್ನು ಯಾರು ಯಾಕೆ ಎತ್ತಿಕಟ್ಟುತ್ತಿದ್ದಾರೆ?

ರಾಹುಲ ಸಾಂಕೃತ್ಯಾಯನ

1927ರಲ್ಲಿ ಭಗತ್ ಸಿಂಗ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೆ ಹಿಡಿದ ಕನ್ನಡಿ. ಕೋಮುವಾದಿ ನಂಜಿನ ಬಗ್ಗಡವನ್ನು ಬಡಿದೆಬ್ಬಿಸುತ್ತಿರುವ ವಿಷಮತೆ-ಅಸಹನೆಗಳ ಸಮಕಾಲೀನ ಸಂದರ್ಭಕ್ಕೆ ಅಕ್ಷರಶಃ ಅನ್ವಯಿಸುತ್ತವೆ.

‘ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿರಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರರೆಂಬ ಕಾರಣಕ್ಕಾಗಿ ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ.
ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಕೊನೆಯಿಲ್ಲದಷ್ಟು ಭಾಷಣಬಾಜಿ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ….

ಭಗತ್‌ ಸಿಂಗ್‌

ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ ಕುಳಿತಿರುವ ಇಂತಹವರ ಸಂಖ್ಯೆ ಸಣ್ಣದೇನೂ ಅಲ್ಲ….” ಎಂದಿದ್ದಾರೆ.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು- “ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು.”

“ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗೆಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...