Homeಮುಖಪುಟಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

ಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸುರ್ಜಗಢ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪಗಳು ಕೇಳಿ ಬಂದಿದೆ.

ಪ್ರತಿಭಟನಾಕಾರರ ಪ್ರಕಾರ, ಪೊಲೀಸರು ಎಲ್ಲಾ ಪ್ರಮುಖ ನಾಯಕರನ್ನು ಬಂಧಿಸಿದ್ದಾರೆ. ಅವರಿಂದ ಚೀಲ, ವಸ್ತುಗಳನ್ನು ಬಲವಂತವಾಗಿ ಪಡೆದು ಶೋಧಿಸಿದ್ದಾರೆ. 8 ಜನ ಚಳವಳಿಯ ಮುಖಂಡರನ್ನು ಹೆಲಿಕಾಪ್ಟರ್ ಮೂಲಕ ಬಲವಂತವಾಗಿ ಕರೆದೊಯ್ಯಲಾಗಿದೆ ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಬಂಧಿತ 8 ಮಂದಿ ಚಳುವಳಿಯ ನಾಯಕರಲ್ಲಿ ಮಂಗೇಶ್ ನರೋಟಿ, ಪ್ರದೀಪ್ ಹೆಡೊ, ಸಾಯಿ ಕಾವ್ಡೊ, ಗಿಲ್ಲು ಕೌಡೊ, ಲಕ್ಷ್ಮಣ್ ಜೆಟ್ಟಿ, ಮಹದು ಕೌಡೊ, ನಿಕೇಶ್ ನರೋಟಿ ಮತ್ತು ಗಣೇಶ್ ಕೊರಿಯಾ ಅವರು ಸೇರಿದ್ದಾರೆ.

ಪೊಲೀಸರು ಗ್ರಾಮದಲ್ಲಿ ಗುಡಿಸಲುಗಳನ್ನು ಧ್ವಂಸಗೊಳಿಸಿ ಸುಟ್ಟು ಹಾಕಿದ್ದು, ಕೆಲವು ಪ್ರತಿಭಟನಾಕಾರರ ಬಳಿಯಿದ್ದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಲಾಠಿ ಚಾರ್ಜ್‌ ಮಾಡಲಾಗಿದೆ.  ಈ ವೇಳೆ ಹಲವರು ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ. 8 ಮುಖಂಡರಲ್ಲದೆ, ಸುಮಾರು 25 ಪ್ರತಿಭಟನಾಕಾರರನ್ನು ಬಂಧಿಸಿ ಟ್ರಕ್‌ಗಳಲ್ಲಿ ಕರೆದೊಯ್ಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದಾಮ್ಕೊಂಡ್ವಾಹಿ ಬಚಾವೋ ಸಂಘರ್ಷ ಸಮಿತಿಯು ಪ್ರತಿಭಟನಾಕಾರರನ್ನು ಗಡ್ಚಿರೋಲಿ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದೆ. 8 ನಾಯಕರು ಸೇರಿ ವಶಕ್ಕೆ ಪಡೆದುಕೊಂಡ ಇತರ ಪ್ರತಿಭಟನಾಕಾರರನ್ನು ಎತ್ತಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಇರಿಸಲಾಗಿದೆ ಮತ್ತು ಭಾರತೀಯರ ಸೆಕ್ಷನ್ 353ರಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು 8 ದಿನಗಳ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅವರನ್ನು ಚಂದ್ರಾಪುರ ಜೈಲಿಗೆ ಹಾಕಲಾಗುತ್ತದೆ ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ನಮಗೆ ತಿಳಿದಿಲ್ಲ ಎಂದು ಹೇಳಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬಂಧಿತರ ಯೋಗಕ್ಷೇಮದ ಬಗ್ಗೆ ನಮಗೆ ಭಯವಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಪೊಲೀಸ್ ಅಧಿಕಾರಿಗಳು ಲಾಠಿಗಳನ್ನು ಬಳಸಿ ಜನರನ್ನು ಬೆದರಿಸುತ್ತಿರುವುದು ಮತ್ತು ಯಾವುದೇ ವೀಡಿಯೊ ಅಥವಾ ಪೋಟೋಗಳನ್ನು ಚಿತ್ರೀಕರಿಸದಂತೆ ತಡೆಯುತ್ತಿರುವುದು ಕಂಡು ಬಂದಿದೆ.

ಈ ಮಧ್ಯೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಕೂಡ ಆರೋಪವನ್ನು ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಕೊಲೆಗೆ ಪ್ರಯತ್ನಿಸಿದರು. ಅವರ ಬಳಿ ಸ್ಫೋಟಕಗಳಿತ್ತು ಮತ್ತು ಮಾವೋವಾದಿಗಳಿಂದ ಹಣ ಪಡೆದಿದ್ದಾರೆ. ಮಾವೋವಾದಿ ಪ್ರಭಾವದಿಂದ ಪ್ರತಿಭಟನೆ ನಡೆಸುತ್ತಿದ್ದವರು ತೊಡಗಟ್ಟಾ ಮೂಲಕ ವಾಂಗೆಟೂರಿಗೆ ತೆರಳುತ್ತಿದ್ದ ಭದ್ರತಾ ಸಿಬ್ಬಂದಿಗಳನ್ನು ತಡೆದಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳಲು ತಮಗೆ ಬಲವಂತ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾವೋವಾದಿಗಳ ನೇತೃತ್ವದ ಪ್ರತಿಭಟನೆಯಿಂದ ಬೇಸತ್ತ ಕಾರಣ ಗ್ರಾಮಸ್ಥರೇ ಪ್ರತಿಭಟನಾ ಸ್ಥಳದಲ್ಲಿ ಗುಡಿಸಲುಗಳನ್ನು ತೆಗೆದುಹಾಕಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಯಾವುದೇ ಗುಡಿಸಲುಗಳನ್ನು ಧ್ವಂಸ ಗೊಳಿಸಿಲ್ಲ ಎಂದು ಹೇಳಿದ್ದಾರೆ.

ಗಡ್ಚಿರೋಲಿಯಲ್ಲಿ ದಬ್ಬಾಳಿಕೆ ಕುರಿತ ಪ್ರಜಾಸತ್ತಾತ್ಮಕ ಹಕ್ಕುಗಳ ಸಂಘಟನೆಯ 2018ರ ಸತ್ಯಶೋಧನೆಯ ವರದಿಯು ಎಟಪಲ್ಲಿಯಲ್ಲಿ ಗಣಿಗಾರಿಕೆ ಕಂಪನಿ, ಸ್ಥಳೀಯ ಆಡಳಿತ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಒಟ್ಟಾಗಿ ಕೆಲಸ ಮಾಡುತ್ತದೆ ಎಂದು ಗಮನಿಸಿದೆ ಎಂದು ಸೆಪ್ಟೆಂಬರ್‌ನಲ್ಲಿ Scroll.in.ವರದಿ ಮಾಡಿದೆ ಎಂದು ವೈರ್‌ ಉಲ್ಲೇಖಿಸಿದೆ.

ಗಣಿಗಾರಿಕೆಯಿಂದ ಕೃಷಿ, ಪರಿಸರ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದಲ್ಲದೆ ಮತ್ತು ಸುರ್ಜಗರ್ ನಿವಾಸಿಗಳ ಆರೋಗ್ಯದ ಮೇಲೆ ಭಾರಿ ಪ್ರಭಾವವನ್ನು ಬೀರಿದೆ. ಈ ಪ್ರದೇಶವು ರೆಡ್ ಐರನ್ ಆಕ್ಸೈಡ್ ವಿಸರ್ಜನೆ, ರಾಸಾಯನಿಕ ಹೊರಸೂಸುವಿಕೆ ಮತ್ತು ದೊಡ್ಡ ಪ್ರಮಾಣದ ಶಿಲಾಖಂಡರಾಶಿಗಳಿಂದ ಕಲುಷಿತಗೊಂಡಿದೆ. ಈ ಭಾಗದ ಶುದ್ಧ ನೀರು ಕೆಂಪು ಬಣ್ಣಕ್ಕೆ ತಿರುಗಿದ್ದು, ಬಳಕೆಗೆ ಯೋಗ್ಯವಾಗಿಲ್ಲ ಮತ್ತು ಕೃಷಿ ಗದ್ದೆಗಳು ಹೂಳು ತುಂಬಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

 

ಇದನ್ನು ಓದಿ; ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...