Homeಮುಖಪುಟಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

ಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸುರ್ಜಗಢ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪಗಳು ಕೇಳಿ ಬಂದಿದೆ.

ಪ್ರತಿಭಟನಾಕಾರರ ಪ್ರಕಾರ, ಪೊಲೀಸರು ಎಲ್ಲಾ ಪ್ರಮುಖ ನಾಯಕರನ್ನು ಬಂಧಿಸಿದ್ದಾರೆ. ಅವರಿಂದ ಚೀಲ, ವಸ್ತುಗಳನ್ನು ಬಲವಂತವಾಗಿ ಪಡೆದು ಶೋಧಿಸಿದ್ದಾರೆ. 8 ಜನ ಚಳವಳಿಯ ಮುಖಂಡರನ್ನು ಹೆಲಿಕಾಪ್ಟರ್ ಮೂಲಕ ಬಲವಂತವಾಗಿ ಕರೆದೊಯ್ಯಲಾಗಿದೆ ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಬಂಧಿತ 8 ಮಂದಿ ಚಳುವಳಿಯ ನಾಯಕರಲ್ಲಿ ಮಂಗೇಶ್ ನರೋಟಿ, ಪ್ರದೀಪ್ ಹೆಡೊ, ಸಾಯಿ ಕಾವ್ಡೊ, ಗಿಲ್ಲು ಕೌಡೊ, ಲಕ್ಷ್ಮಣ್ ಜೆಟ್ಟಿ, ಮಹದು ಕೌಡೊ, ನಿಕೇಶ್ ನರೋಟಿ ಮತ್ತು ಗಣೇಶ್ ಕೊರಿಯಾ ಅವರು ಸೇರಿದ್ದಾರೆ.

ಪೊಲೀಸರು ಗ್ರಾಮದಲ್ಲಿ ಗುಡಿಸಲುಗಳನ್ನು ಧ್ವಂಸಗೊಳಿಸಿ ಸುಟ್ಟು ಹಾಕಿದ್ದು, ಕೆಲವು ಪ್ರತಿಭಟನಾಕಾರರ ಬಳಿಯಿದ್ದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಲಾಠಿ ಚಾರ್ಜ್‌ ಮಾಡಲಾಗಿದೆ.  ಈ ವೇಳೆ ಹಲವರು ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ. 8 ಮುಖಂಡರಲ್ಲದೆ, ಸುಮಾರು 25 ಪ್ರತಿಭಟನಾಕಾರರನ್ನು ಬಂಧಿಸಿ ಟ್ರಕ್‌ಗಳಲ್ಲಿ ಕರೆದೊಯ್ಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದಾಮ್ಕೊಂಡ್ವಾಹಿ ಬಚಾವೋ ಸಂಘರ್ಷ ಸಮಿತಿಯು ಪ್ರತಿಭಟನಾಕಾರರನ್ನು ಗಡ್ಚಿರೋಲಿ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದೆ. 8 ನಾಯಕರು ಸೇರಿ ವಶಕ್ಕೆ ಪಡೆದುಕೊಂಡ ಇತರ ಪ್ರತಿಭಟನಾಕಾರರನ್ನು ಎತ್ತಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಇರಿಸಲಾಗಿದೆ ಮತ್ತು ಭಾರತೀಯರ ಸೆಕ್ಷನ್ 353ರಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು 8 ದಿನಗಳ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅವರನ್ನು ಚಂದ್ರಾಪುರ ಜೈಲಿಗೆ ಹಾಕಲಾಗುತ್ತದೆ ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ನಮಗೆ ತಿಳಿದಿಲ್ಲ ಎಂದು ಹೇಳಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬಂಧಿತರ ಯೋಗಕ್ಷೇಮದ ಬಗ್ಗೆ ನಮಗೆ ಭಯವಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಪೊಲೀಸ್ ಅಧಿಕಾರಿಗಳು ಲಾಠಿಗಳನ್ನು ಬಳಸಿ ಜನರನ್ನು ಬೆದರಿಸುತ್ತಿರುವುದು ಮತ್ತು ಯಾವುದೇ ವೀಡಿಯೊ ಅಥವಾ ಪೋಟೋಗಳನ್ನು ಚಿತ್ರೀಕರಿಸದಂತೆ ತಡೆಯುತ್ತಿರುವುದು ಕಂಡು ಬಂದಿದೆ.

ಈ ಮಧ್ಯೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಕೂಡ ಆರೋಪವನ್ನು ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಕೊಲೆಗೆ ಪ್ರಯತ್ನಿಸಿದರು. ಅವರ ಬಳಿ ಸ್ಫೋಟಕಗಳಿತ್ತು ಮತ್ತು ಮಾವೋವಾದಿಗಳಿಂದ ಹಣ ಪಡೆದಿದ್ದಾರೆ. ಮಾವೋವಾದಿ ಪ್ರಭಾವದಿಂದ ಪ್ರತಿಭಟನೆ ನಡೆಸುತ್ತಿದ್ದವರು ತೊಡಗಟ್ಟಾ ಮೂಲಕ ವಾಂಗೆಟೂರಿಗೆ ತೆರಳುತ್ತಿದ್ದ ಭದ್ರತಾ ಸಿಬ್ಬಂದಿಗಳನ್ನು ತಡೆದಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳಲು ತಮಗೆ ಬಲವಂತ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾವೋವಾದಿಗಳ ನೇತೃತ್ವದ ಪ್ರತಿಭಟನೆಯಿಂದ ಬೇಸತ್ತ ಕಾರಣ ಗ್ರಾಮಸ್ಥರೇ ಪ್ರತಿಭಟನಾ ಸ್ಥಳದಲ್ಲಿ ಗುಡಿಸಲುಗಳನ್ನು ತೆಗೆದುಹಾಕಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಯಾವುದೇ ಗುಡಿಸಲುಗಳನ್ನು ಧ್ವಂಸ ಗೊಳಿಸಿಲ್ಲ ಎಂದು ಹೇಳಿದ್ದಾರೆ.

ಗಡ್ಚಿರೋಲಿಯಲ್ಲಿ ದಬ್ಬಾಳಿಕೆ ಕುರಿತ ಪ್ರಜಾಸತ್ತಾತ್ಮಕ ಹಕ್ಕುಗಳ ಸಂಘಟನೆಯ 2018ರ ಸತ್ಯಶೋಧನೆಯ ವರದಿಯು ಎಟಪಲ್ಲಿಯಲ್ಲಿ ಗಣಿಗಾರಿಕೆ ಕಂಪನಿ, ಸ್ಥಳೀಯ ಆಡಳಿತ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಒಟ್ಟಾಗಿ ಕೆಲಸ ಮಾಡುತ್ತದೆ ಎಂದು ಗಮನಿಸಿದೆ ಎಂದು ಸೆಪ್ಟೆಂಬರ್‌ನಲ್ಲಿ Scroll.in.ವರದಿ ಮಾಡಿದೆ ಎಂದು ವೈರ್‌ ಉಲ್ಲೇಖಿಸಿದೆ.

ಗಣಿಗಾರಿಕೆಯಿಂದ ಕೃಷಿ, ಪರಿಸರ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದಲ್ಲದೆ ಮತ್ತು ಸುರ್ಜಗರ್ ನಿವಾಸಿಗಳ ಆರೋಗ್ಯದ ಮೇಲೆ ಭಾರಿ ಪ್ರಭಾವವನ್ನು ಬೀರಿದೆ. ಈ ಪ್ರದೇಶವು ರೆಡ್ ಐರನ್ ಆಕ್ಸೈಡ್ ವಿಸರ್ಜನೆ, ರಾಸಾಯನಿಕ ಹೊರಸೂಸುವಿಕೆ ಮತ್ತು ದೊಡ್ಡ ಪ್ರಮಾಣದ ಶಿಲಾಖಂಡರಾಶಿಗಳಿಂದ ಕಲುಷಿತಗೊಂಡಿದೆ. ಈ ಭಾಗದ ಶುದ್ಧ ನೀರು ಕೆಂಪು ಬಣ್ಣಕ್ಕೆ ತಿರುಗಿದ್ದು, ಬಳಕೆಗೆ ಯೋಗ್ಯವಾಗಿಲ್ಲ ಮತ್ತು ಕೃಷಿ ಗದ್ದೆಗಳು ಹೂಳು ತುಂಬಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

 

ಇದನ್ನು ಓದಿ; ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...