Homeಮುಖಪುಟಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

ಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸುರ್ಜಗಢ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪಗಳು ಕೇಳಿ ಬಂದಿದೆ.

ಪ್ರತಿಭಟನಾಕಾರರ ಪ್ರಕಾರ, ಪೊಲೀಸರು ಎಲ್ಲಾ ಪ್ರಮುಖ ನಾಯಕರನ್ನು ಬಂಧಿಸಿದ್ದಾರೆ. ಅವರಿಂದ ಚೀಲ, ವಸ್ತುಗಳನ್ನು ಬಲವಂತವಾಗಿ ಪಡೆದು ಶೋಧಿಸಿದ್ದಾರೆ. 8 ಜನ ಚಳವಳಿಯ ಮುಖಂಡರನ್ನು ಹೆಲಿಕಾಪ್ಟರ್ ಮೂಲಕ ಬಲವಂತವಾಗಿ ಕರೆದೊಯ್ಯಲಾಗಿದೆ ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಬಂಧಿತ 8 ಮಂದಿ ಚಳುವಳಿಯ ನಾಯಕರಲ್ಲಿ ಮಂಗೇಶ್ ನರೋಟಿ, ಪ್ರದೀಪ್ ಹೆಡೊ, ಸಾಯಿ ಕಾವ್ಡೊ, ಗಿಲ್ಲು ಕೌಡೊ, ಲಕ್ಷ್ಮಣ್ ಜೆಟ್ಟಿ, ಮಹದು ಕೌಡೊ, ನಿಕೇಶ್ ನರೋಟಿ ಮತ್ತು ಗಣೇಶ್ ಕೊರಿಯಾ ಅವರು ಸೇರಿದ್ದಾರೆ.

ಪೊಲೀಸರು ಗ್ರಾಮದಲ್ಲಿ ಗುಡಿಸಲುಗಳನ್ನು ಧ್ವಂಸಗೊಳಿಸಿ ಸುಟ್ಟು ಹಾಕಿದ್ದು, ಕೆಲವು ಪ್ರತಿಭಟನಾಕಾರರ ಬಳಿಯಿದ್ದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಲಾಠಿ ಚಾರ್ಜ್‌ ಮಾಡಲಾಗಿದೆ.  ಈ ವೇಳೆ ಹಲವರು ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ. 8 ಮುಖಂಡರಲ್ಲದೆ, ಸುಮಾರು 25 ಪ್ರತಿಭಟನಾಕಾರರನ್ನು ಬಂಧಿಸಿ ಟ್ರಕ್‌ಗಳಲ್ಲಿ ಕರೆದೊಯ್ಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದಾಮ್ಕೊಂಡ್ವಾಹಿ ಬಚಾವೋ ಸಂಘರ್ಷ ಸಮಿತಿಯು ಪ್ರತಿಭಟನಾಕಾರರನ್ನು ಗಡ್ಚಿರೋಲಿ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದೆ. 8 ನಾಯಕರು ಸೇರಿ ವಶಕ್ಕೆ ಪಡೆದುಕೊಂಡ ಇತರ ಪ್ರತಿಭಟನಾಕಾರರನ್ನು ಎತ್ತಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಇರಿಸಲಾಗಿದೆ ಮತ್ತು ಭಾರತೀಯರ ಸೆಕ್ಷನ್ 353ರಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು 8 ದಿನಗಳ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅವರನ್ನು ಚಂದ್ರಾಪುರ ಜೈಲಿಗೆ ಹಾಕಲಾಗುತ್ತದೆ ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ನಮಗೆ ತಿಳಿದಿಲ್ಲ ಎಂದು ಹೇಳಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬಂಧಿತರ ಯೋಗಕ್ಷೇಮದ ಬಗ್ಗೆ ನಮಗೆ ಭಯವಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಪೊಲೀಸ್ ಅಧಿಕಾರಿಗಳು ಲಾಠಿಗಳನ್ನು ಬಳಸಿ ಜನರನ್ನು ಬೆದರಿಸುತ್ತಿರುವುದು ಮತ್ತು ಯಾವುದೇ ವೀಡಿಯೊ ಅಥವಾ ಪೋಟೋಗಳನ್ನು ಚಿತ್ರೀಕರಿಸದಂತೆ ತಡೆಯುತ್ತಿರುವುದು ಕಂಡು ಬಂದಿದೆ.

ಈ ಮಧ್ಯೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಕೂಡ ಆರೋಪವನ್ನು ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಕೊಲೆಗೆ ಪ್ರಯತ್ನಿಸಿದರು. ಅವರ ಬಳಿ ಸ್ಫೋಟಕಗಳಿತ್ತು ಮತ್ತು ಮಾವೋವಾದಿಗಳಿಂದ ಹಣ ಪಡೆದಿದ್ದಾರೆ. ಮಾವೋವಾದಿ ಪ್ರಭಾವದಿಂದ ಪ್ರತಿಭಟನೆ ನಡೆಸುತ್ತಿದ್ದವರು ತೊಡಗಟ್ಟಾ ಮೂಲಕ ವಾಂಗೆಟೂರಿಗೆ ತೆರಳುತ್ತಿದ್ದ ಭದ್ರತಾ ಸಿಬ್ಬಂದಿಗಳನ್ನು ತಡೆದಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳಲು ತಮಗೆ ಬಲವಂತ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾವೋವಾದಿಗಳ ನೇತೃತ್ವದ ಪ್ರತಿಭಟನೆಯಿಂದ ಬೇಸತ್ತ ಕಾರಣ ಗ್ರಾಮಸ್ಥರೇ ಪ್ರತಿಭಟನಾ ಸ್ಥಳದಲ್ಲಿ ಗುಡಿಸಲುಗಳನ್ನು ತೆಗೆದುಹಾಕಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಯಾವುದೇ ಗುಡಿಸಲುಗಳನ್ನು ಧ್ವಂಸ ಗೊಳಿಸಿಲ್ಲ ಎಂದು ಹೇಳಿದ್ದಾರೆ.

ಗಡ್ಚಿರೋಲಿಯಲ್ಲಿ ದಬ್ಬಾಳಿಕೆ ಕುರಿತ ಪ್ರಜಾಸತ್ತಾತ್ಮಕ ಹಕ್ಕುಗಳ ಸಂಘಟನೆಯ 2018ರ ಸತ್ಯಶೋಧನೆಯ ವರದಿಯು ಎಟಪಲ್ಲಿಯಲ್ಲಿ ಗಣಿಗಾರಿಕೆ ಕಂಪನಿ, ಸ್ಥಳೀಯ ಆಡಳಿತ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಒಟ್ಟಾಗಿ ಕೆಲಸ ಮಾಡುತ್ತದೆ ಎಂದು ಗಮನಿಸಿದೆ ಎಂದು ಸೆಪ್ಟೆಂಬರ್‌ನಲ್ಲಿ Scroll.in.ವರದಿ ಮಾಡಿದೆ ಎಂದು ವೈರ್‌ ಉಲ್ಲೇಖಿಸಿದೆ.

ಗಣಿಗಾರಿಕೆಯಿಂದ ಕೃಷಿ, ಪರಿಸರ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದಲ್ಲದೆ ಮತ್ತು ಸುರ್ಜಗರ್ ನಿವಾಸಿಗಳ ಆರೋಗ್ಯದ ಮೇಲೆ ಭಾರಿ ಪ್ರಭಾವವನ್ನು ಬೀರಿದೆ. ಈ ಪ್ರದೇಶವು ರೆಡ್ ಐರನ್ ಆಕ್ಸೈಡ್ ವಿಸರ್ಜನೆ, ರಾಸಾಯನಿಕ ಹೊರಸೂಸುವಿಕೆ ಮತ್ತು ದೊಡ್ಡ ಪ್ರಮಾಣದ ಶಿಲಾಖಂಡರಾಶಿಗಳಿಂದ ಕಲುಷಿತಗೊಂಡಿದೆ. ಈ ಭಾಗದ ಶುದ್ಧ ನೀರು ಕೆಂಪು ಬಣ್ಣಕ್ಕೆ ತಿರುಗಿದ್ದು, ಬಳಕೆಗೆ ಯೋಗ್ಯವಾಗಿಲ್ಲ ಮತ್ತು ಕೃಷಿ ಗದ್ದೆಗಳು ಹೂಳು ತುಂಬಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

 

ಇದನ್ನು ಓದಿ; ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...