Homeಮುಖಪುಟಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

ಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸುರ್ಜಗಢ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪಗಳು ಕೇಳಿ ಬಂದಿದೆ.

ಪ್ರತಿಭಟನಾಕಾರರ ಪ್ರಕಾರ, ಪೊಲೀಸರು ಎಲ್ಲಾ ಪ್ರಮುಖ ನಾಯಕರನ್ನು ಬಂಧಿಸಿದ್ದಾರೆ. ಅವರಿಂದ ಚೀಲ, ವಸ್ತುಗಳನ್ನು ಬಲವಂತವಾಗಿ ಪಡೆದು ಶೋಧಿಸಿದ್ದಾರೆ. 8 ಜನ ಚಳವಳಿಯ ಮುಖಂಡರನ್ನು ಹೆಲಿಕಾಪ್ಟರ್ ಮೂಲಕ ಬಲವಂತವಾಗಿ ಕರೆದೊಯ್ಯಲಾಗಿದೆ ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಬಂಧಿತ 8 ಮಂದಿ ಚಳುವಳಿಯ ನಾಯಕರಲ್ಲಿ ಮಂಗೇಶ್ ನರೋಟಿ, ಪ್ರದೀಪ್ ಹೆಡೊ, ಸಾಯಿ ಕಾವ್ಡೊ, ಗಿಲ್ಲು ಕೌಡೊ, ಲಕ್ಷ್ಮಣ್ ಜೆಟ್ಟಿ, ಮಹದು ಕೌಡೊ, ನಿಕೇಶ್ ನರೋಟಿ ಮತ್ತು ಗಣೇಶ್ ಕೊರಿಯಾ ಅವರು ಸೇರಿದ್ದಾರೆ.

ಪೊಲೀಸರು ಗ್ರಾಮದಲ್ಲಿ ಗುಡಿಸಲುಗಳನ್ನು ಧ್ವಂಸಗೊಳಿಸಿ ಸುಟ್ಟು ಹಾಕಿದ್ದು, ಕೆಲವು ಪ್ರತಿಭಟನಾಕಾರರ ಬಳಿಯಿದ್ದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಲಾಠಿ ಚಾರ್ಜ್‌ ಮಾಡಲಾಗಿದೆ.  ಈ ವೇಳೆ ಹಲವರು ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ. 8 ಮುಖಂಡರಲ್ಲದೆ, ಸುಮಾರು 25 ಪ್ರತಿಭಟನಾಕಾರರನ್ನು ಬಂಧಿಸಿ ಟ್ರಕ್‌ಗಳಲ್ಲಿ ಕರೆದೊಯ್ಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದಾಮ್ಕೊಂಡ್ವಾಹಿ ಬಚಾವೋ ಸಂಘರ್ಷ ಸಮಿತಿಯು ಪ್ರತಿಭಟನಾಕಾರರನ್ನು ಗಡ್ಚಿರೋಲಿ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದೆ. 8 ನಾಯಕರು ಸೇರಿ ವಶಕ್ಕೆ ಪಡೆದುಕೊಂಡ ಇತರ ಪ್ರತಿಭಟನಾಕಾರರನ್ನು ಎತ್ತಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಇರಿಸಲಾಗಿದೆ ಮತ್ತು ಭಾರತೀಯರ ಸೆಕ್ಷನ್ 353ರಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು 8 ದಿನಗಳ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅವರನ್ನು ಚಂದ್ರಾಪುರ ಜೈಲಿಗೆ ಹಾಕಲಾಗುತ್ತದೆ ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ನಮಗೆ ತಿಳಿದಿಲ್ಲ ಎಂದು ಹೇಳಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬಂಧಿತರ ಯೋಗಕ್ಷೇಮದ ಬಗ್ಗೆ ನಮಗೆ ಭಯವಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಪೊಲೀಸ್ ಅಧಿಕಾರಿಗಳು ಲಾಠಿಗಳನ್ನು ಬಳಸಿ ಜನರನ್ನು ಬೆದರಿಸುತ್ತಿರುವುದು ಮತ್ತು ಯಾವುದೇ ವೀಡಿಯೊ ಅಥವಾ ಪೋಟೋಗಳನ್ನು ಚಿತ್ರೀಕರಿಸದಂತೆ ತಡೆಯುತ್ತಿರುವುದು ಕಂಡು ಬಂದಿದೆ.

ಈ ಮಧ್ಯೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಕೂಡ ಆರೋಪವನ್ನು ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಕೊಲೆಗೆ ಪ್ರಯತ್ನಿಸಿದರು. ಅವರ ಬಳಿ ಸ್ಫೋಟಕಗಳಿತ್ತು ಮತ್ತು ಮಾವೋವಾದಿಗಳಿಂದ ಹಣ ಪಡೆದಿದ್ದಾರೆ. ಮಾವೋವಾದಿ ಪ್ರಭಾವದಿಂದ ಪ್ರತಿಭಟನೆ ನಡೆಸುತ್ತಿದ್ದವರು ತೊಡಗಟ್ಟಾ ಮೂಲಕ ವಾಂಗೆಟೂರಿಗೆ ತೆರಳುತ್ತಿದ್ದ ಭದ್ರತಾ ಸಿಬ್ಬಂದಿಗಳನ್ನು ತಡೆದಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳಲು ತಮಗೆ ಬಲವಂತ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾವೋವಾದಿಗಳ ನೇತೃತ್ವದ ಪ್ರತಿಭಟನೆಯಿಂದ ಬೇಸತ್ತ ಕಾರಣ ಗ್ರಾಮಸ್ಥರೇ ಪ್ರತಿಭಟನಾ ಸ್ಥಳದಲ್ಲಿ ಗುಡಿಸಲುಗಳನ್ನು ತೆಗೆದುಹಾಕಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಯಾವುದೇ ಗುಡಿಸಲುಗಳನ್ನು ಧ್ವಂಸ ಗೊಳಿಸಿಲ್ಲ ಎಂದು ಹೇಳಿದ್ದಾರೆ.

ಗಡ್ಚಿರೋಲಿಯಲ್ಲಿ ದಬ್ಬಾಳಿಕೆ ಕುರಿತ ಪ್ರಜಾಸತ್ತಾತ್ಮಕ ಹಕ್ಕುಗಳ ಸಂಘಟನೆಯ 2018ರ ಸತ್ಯಶೋಧನೆಯ ವರದಿಯು ಎಟಪಲ್ಲಿಯಲ್ಲಿ ಗಣಿಗಾರಿಕೆ ಕಂಪನಿ, ಸ್ಥಳೀಯ ಆಡಳಿತ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಒಟ್ಟಾಗಿ ಕೆಲಸ ಮಾಡುತ್ತದೆ ಎಂದು ಗಮನಿಸಿದೆ ಎಂದು ಸೆಪ್ಟೆಂಬರ್‌ನಲ್ಲಿ Scroll.in.ವರದಿ ಮಾಡಿದೆ ಎಂದು ವೈರ್‌ ಉಲ್ಲೇಖಿಸಿದೆ.

ಗಣಿಗಾರಿಕೆಯಿಂದ ಕೃಷಿ, ಪರಿಸರ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದಲ್ಲದೆ ಮತ್ತು ಸುರ್ಜಗರ್ ನಿವಾಸಿಗಳ ಆರೋಗ್ಯದ ಮೇಲೆ ಭಾರಿ ಪ್ರಭಾವವನ್ನು ಬೀರಿದೆ. ಈ ಪ್ರದೇಶವು ರೆಡ್ ಐರನ್ ಆಕ್ಸೈಡ್ ವಿಸರ್ಜನೆ, ರಾಸಾಯನಿಕ ಹೊರಸೂಸುವಿಕೆ ಮತ್ತು ದೊಡ್ಡ ಪ್ರಮಾಣದ ಶಿಲಾಖಂಡರಾಶಿಗಳಿಂದ ಕಲುಷಿತಗೊಂಡಿದೆ. ಈ ಭಾಗದ ಶುದ್ಧ ನೀರು ಕೆಂಪು ಬಣ್ಣಕ್ಕೆ ತಿರುಗಿದ್ದು, ಬಳಕೆಗೆ ಯೋಗ್ಯವಾಗಿಲ್ಲ ಮತ್ತು ಕೃಷಿ ಗದ್ದೆಗಳು ಹೂಳು ತುಂಬಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

 

ಇದನ್ನು ಓದಿ; ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...