Homeಮುಖಪುಟಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

ಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸುರ್ಜಗಢ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪಗಳು ಕೇಳಿ ಬಂದಿದೆ.

ಪ್ರತಿಭಟನಾಕಾರರ ಪ್ರಕಾರ, ಪೊಲೀಸರು ಎಲ್ಲಾ ಪ್ರಮುಖ ನಾಯಕರನ್ನು ಬಂಧಿಸಿದ್ದಾರೆ. ಅವರಿಂದ ಚೀಲ, ವಸ್ತುಗಳನ್ನು ಬಲವಂತವಾಗಿ ಪಡೆದು ಶೋಧಿಸಿದ್ದಾರೆ. 8 ಜನ ಚಳವಳಿಯ ಮುಖಂಡರನ್ನು ಹೆಲಿಕಾಪ್ಟರ್ ಮೂಲಕ ಬಲವಂತವಾಗಿ ಕರೆದೊಯ್ಯಲಾಗಿದೆ ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಬಂಧಿತ 8 ಮಂದಿ ಚಳುವಳಿಯ ನಾಯಕರಲ್ಲಿ ಮಂಗೇಶ್ ನರೋಟಿ, ಪ್ರದೀಪ್ ಹೆಡೊ, ಸಾಯಿ ಕಾವ್ಡೊ, ಗಿಲ್ಲು ಕೌಡೊ, ಲಕ್ಷ್ಮಣ್ ಜೆಟ್ಟಿ, ಮಹದು ಕೌಡೊ, ನಿಕೇಶ್ ನರೋಟಿ ಮತ್ತು ಗಣೇಶ್ ಕೊರಿಯಾ ಅವರು ಸೇರಿದ್ದಾರೆ.

ಪೊಲೀಸರು ಗ್ರಾಮದಲ್ಲಿ ಗುಡಿಸಲುಗಳನ್ನು ಧ್ವಂಸಗೊಳಿಸಿ ಸುಟ್ಟು ಹಾಕಿದ್ದು, ಕೆಲವು ಪ್ರತಿಭಟನಾಕಾರರ ಬಳಿಯಿದ್ದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಲಾಠಿ ಚಾರ್ಜ್‌ ಮಾಡಲಾಗಿದೆ.  ಈ ವೇಳೆ ಹಲವರು ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ. 8 ಮುಖಂಡರಲ್ಲದೆ, ಸುಮಾರು 25 ಪ್ರತಿಭಟನಾಕಾರರನ್ನು ಬಂಧಿಸಿ ಟ್ರಕ್‌ಗಳಲ್ಲಿ ಕರೆದೊಯ್ಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದಾಮ್ಕೊಂಡ್ವಾಹಿ ಬಚಾವೋ ಸಂಘರ್ಷ ಸಮಿತಿಯು ಪ್ರತಿಭಟನಾಕಾರರನ್ನು ಗಡ್ಚಿರೋಲಿ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದೆ. 8 ನಾಯಕರು ಸೇರಿ ವಶಕ್ಕೆ ಪಡೆದುಕೊಂಡ ಇತರ ಪ್ರತಿಭಟನಾಕಾರರನ್ನು ಎತ್ತಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಇರಿಸಲಾಗಿದೆ ಮತ್ತು ಭಾರತೀಯರ ಸೆಕ್ಷನ್ 353ರಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು 8 ದಿನಗಳ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅವರನ್ನು ಚಂದ್ರಾಪುರ ಜೈಲಿಗೆ ಹಾಕಲಾಗುತ್ತದೆ ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ನಮಗೆ ತಿಳಿದಿಲ್ಲ ಎಂದು ಹೇಳಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬಂಧಿತರ ಯೋಗಕ್ಷೇಮದ ಬಗ್ಗೆ ನಮಗೆ ಭಯವಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಪೊಲೀಸ್ ಅಧಿಕಾರಿಗಳು ಲಾಠಿಗಳನ್ನು ಬಳಸಿ ಜನರನ್ನು ಬೆದರಿಸುತ್ತಿರುವುದು ಮತ್ತು ಯಾವುದೇ ವೀಡಿಯೊ ಅಥವಾ ಪೋಟೋಗಳನ್ನು ಚಿತ್ರೀಕರಿಸದಂತೆ ತಡೆಯುತ್ತಿರುವುದು ಕಂಡು ಬಂದಿದೆ.

ಈ ಮಧ್ಯೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಕೂಡ ಆರೋಪವನ್ನು ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಕೊಲೆಗೆ ಪ್ರಯತ್ನಿಸಿದರು. ಅವರ ಬಳಿ ಸ್ಫೋಟಕಗಳಿತ್ತು ಮತ್ತು ಮಾವೋವಾದಿಗಳಿಂದ ಹಣ ಪಡೆದಿದ್ದಾರೆ. ಮಾವೋವಾದಿ ಪ್ರಭಾವದಿಂದ ಪ್ರತಿಭಟನೆ ನಡೆಸುತ್ತಿದ್ದವರು ತೊಡಗಟ್ಟಾ ಮೂಲಕ ವಾಂಗೆಟೂರಿಗೆ ತೆರಳುತ್ತಿದ್ದ ಭದ್ರತಾ ಸಿಬ್ಬಂದಿಗಳನ್ನು ತಡೆದಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳಲು ತಮಗೆ ಬಲವಂತ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾವೋವಾದಿಗಳ ನೇತೃತ್ವದ ಪ್ರತಿಭಟನೆಯಿಂದ ಬೇಸತ್ತ ಕಾರಣ ಗ್ರಾಮಸ್ಥರೇ ಪ್ರತಿಭಟನಾ ಸ್ಥಳದಲ್ಲಿ ಗುಡಿಸಲುಗಳನ್ನು ತೆಗೆದುಹಾಕಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಯಾವುದೇ ಗುಡಿಸಲುಗಳನ್ನು ಧ್ವಂಸ ಗೊಳಿಸಿಲ್ಲ ಎಂದು ಹೇಳಿದ್ದಾರೆ.

ಗಡ್ಚಿರೋಲಿಯಲ್ಲಿ ದಬ್ಬಾಳಿಕೆ ಕುರಿತ ಪ್ರಜಾಸತ್ತಾತ್ಮಕ ಹಕ್ಕುಗಳ ಸಂಘಟನೆಯ 2018ರ ಸತ್ಯಶೋಧನೆಯ ವರದಿಯು ಎಟಪಲ್ಲಿಯಲ್ಲಿ ಗಣಿಗಾರಿಕೆ ಕಂಪನಿ, ಸ್ಥಳೀಯ ಆಡಳಿತ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಒಟ್ಟಾಗಿ ಕೆಲಸ ಮಾಡುತ್ತದೆ ಎಂದು ಗಮನಿಸಿದೆ ಎಂದು ಸೆಪ್ಟೆಂಬರ್‌ನಲ್ಲಿ Scroll.in.ವರದಿ ಮಾಡಿದೆ ಎಂದು ವೈರ್‌ ಉಲ್ಲೇಖಿಸಿದೆ.

ಗಣಿಗಾರಿಕೆಯಿಂದ ಕೃಷಿ, ಪರಿಸರ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದಲ್ಲದೆ ಮತ್ತು ಸುರ್ಜಗರ್ ನಿವಾಸಿಗಳ ಆರೋಗ್ಯದ ಮೇಲೆ ಭಾರಿ ಪ್ರಭಾವವನ್ನು ಬೀರಿದೆ. ಈ ಪ್ರದೇಶವು ರೆಡ್ ಐರನ್ ಆಕ್ಸೈಡ್ ವಿಸರ್ಜನೆ, ರಾಸಾಯನಿಕ ಹೊರಸೂಸುವಿಕೆ ಮತ್ತು ದೊಡ್ಡ ಪ್ರಮಾಣದ ಶಿಲಾಖಂಡರಾಶಿಗಳಿಂದ ಕಲುಷಿತಗೊಂಡಿದೆ. ಈ ಭಾಗದ ಶುದ್ಧ ನೀರು ಕೆಂಪು ಬಣ್ಣಕ್ಕೆ ತಿರುಗಿದ್ದು, ಬಳಕೆಗೆ ಯೋಗ್ಯವಾಗಿಲ್ಲ ಮತ್ತು ಕೃಷಿ ಗದ್ದೆಗಳು ಹೂಳು ತುಂಬಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

 

ಇದನ್ನು ಓದಿ; ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...