Homeಮುಖಪುಟಹೆತ್ತ ತಾಯಿ ಮೇಲೆ ಅತ್ಯಾಚಾರ ಆರೋಪ: ಮಗನನ್ನು ಬಂಧಿಸಿದ ಪೊಲೀಸರು

ಹೆತ್ತ ತಾಯಿ ಮೇಲೆ ಅತ್ಯಾಚಾರ ಆರೋಪ: ಮಗನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಹೆತ್ತ ತಾಯಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿಯ ಹೌಜ್ ಖಾಝಿ ಪ್ರದೇಶದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರನ್ನು ಭೇಟಿಯಾಗಿ ದೂರು ಸಲ್ಲಿಸಿದ ಸಂತ್ರಸ್ತೆ ತಾಯಿ, ತನ್ನ ಮಗ ಕೋಣೆಯಲ್ಲಿ ಕೂಡಿ ಹಾಕಿ ಬುರ್ಖಾ ಕಳಚುವಂತೆ ಒತ್ತಾಯಿಸಿ ಥಳಿಸಿದ್ದಾನೆ. ಅಲ್ಲದೆ, ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.

“ದಶಕಗಳ ಹಿಂದೆ ನೀನು ವಿವಾಹೇತರ ಸಂಬಂಧ ಹೊಂದಿದ್ದೆ. ಅದಕ್ಕಾಗಿ ನಿನ್ನನ್ನು ಶಿಕ್ಷಿಸುತ್ತೀದ್ದೇನೆ” ಎಂದ ಮಗ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾನೆ” ಎಂದು 65 ವರ್ಷದ ತಾಯಿ ಆರೋಪಿಸಿದ್ದಾರೆ.

ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ ಪ್ರಕಾರ, ಆಕೆ ನಿವೃತ್ತ ಸರ್ಕಾರಿ ನೌಕರನಾಗಿರುವ ತನ್ನ ಪತಿ, ಮಗಳು ಮತ್ತು ಆರೋಪಿ ಮಗನ ಜೊತೆ ದೆಹಲಿಯ ಹೌಜ್ ಖಾಝಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆಕೆಯ ದೊಡ್ಡ ಮಗಳು ಪಕ್ಕದಲ್ಲೇ ತನ್ನ ಗಂಡನ ಜೊತೆ ಪ್ರತ್ಯೇಕ ಮನೆ ಮಾಡಿದ್ದಾರೆ.

ಜುಲೈ 17ರಂದು, ಮಹಿಳೆ, ಆಕೆಯ ಪತಿ ಮತ್ತು ಕಿರಿಯ ಮಗಳು ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆ ತೆರಳಿದ್ದರು. ಎಂಟು ದಿನಗಳ ನಂತರ, ಅವರು ಇನ್ನೂ ಸೌದಿಯಲ್ಲೇ ಇದ್ದಾಗ ಆರೋಪಿಯು ತನ್ನ ತಂದೆಗೆ ಪದೇ ಪದೇ ಕರೆ ಮಾಡಿ ದೆಹಲಿಗೆ ಮರಳುವಂತೆ ಒತ್ತಾಯಿಸಿದ್ದ.

ತನ್ನ ತಂದೆ ತಾಯಿಗೆ ವಿಚ್ಚೇದನ ನೀಡಬೇಕೆಂದು ಆತ ಬಯಸಿದ್ದ. ಇದಕ್ಕೆ ಆತ, ತನ್ನ ತಂಗಿ ಹುಟ್ಟುವ ಮೊದಲು ತಂದೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ತಾಯಿ ಪರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದುತ್ತಿದ್ದರು ಎಂದು ಕಾರಣ ಕೊಟ್ಟಿದ್ದ.

ಆಗಸ್ಟ್ 1ರಂದು ಕುಟುಂಬವು ಸೌದಿ ಅರೇಬಿಯಾದಿಂದ ಮನೆಗೆ ಮರಳಿದಾಗ ಆರೋಪಿ ಮಗ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಬುರ್ಖಾ ಕಳಚುವಂತೆ ಒತ್ತಾಯಿಸಿ ಥಳಿಸಿದ್ದಾನೆ.ಆತ ತನ್ನ ಪತಿಗೆ ತನ್ನನ್ನು ಕೆಡಿಸಿದ್ದಾಗಿ ಹೇಳಿದ್ದಾನೆ ಎಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಆಗಸ್ಟ್ 11ರಂದು ಆರೋಪಿಯು ತನ್ನ ತಾಯಿಯೊಂದಿಗೆ ಖಾಸಗಿಯಾಗಿ ಮಾತನಾಡಬೇಕೆಂದು ಕುಟುಂಬ ಸದಸ್ಯರಿಗೆ ತಿಳಿಸಿದ್ದ. ಬಳಿಕ ಆಕೆಯನ್ನು ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ. ತಾಯಿ ಎಷ್ಟು ಬೇಡಿಕೊಂಡರೂ ಕೇಳದ ಆತ, “ದಶಕಗಳ ಹಿಂದೆ ಮಾಡಿದ ತಪ್ಪಿಗೆ ಶಿಕ್ಷಿಸುತ್ತಿದ್ದೇನೆ” ಎಂದು ದೌರ್ಜನ್ಯ ನಡೆಸಿದ್ದಾನೆ.

ಇದರಿಂದ ಭಯಭೀತರಾಗಿದ್ದ ಮಹಿಳೆ ಆರಂಭದಲ್ಲಿ ತನ್ನ ಹಿರಿಯ ಮಗಳ ಮನೆಯಲ್ಲಿ ಆಶ್ರಯ ಪಡೆದಿದ್ದರು. ಪರಿಸ್ಥಿತಿ ಹದಗೆಟ್ಟಾಗ ಮನೆಗೆ ಹಿಂತಿರುಗಿದ್ದರು.

ಆಗಸ್ಟ್ 14ರಂದು ಆರೋಪಿ ತನ್ನ ತಾಯಿ ಮಲಗಿದ್ದ ಕೋಣೆಗೆ ನುಗ್ಗಿ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಮರುದಿನ, ಮಹಿಳೆ ತನ್ನ ಕಿರಿಯ ಮಗಳಿಗೆ ವಿಷಯ ತಿಳಿಸಿದ್ದು, ಪೊಲೀಸರನ್ನು ಸಂಪರ್ಕಿಸುವಂತೆ ಒತ್ತಾಯಿಸಿದ್ದಾರೆ.

ಬಳಿಕ ಮಗಳು ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಸಹೋದರ ವಿರುದ್ದ ದೂರು ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...