Homeಕರ್ನಾಟಕಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ ತಗುಲಿದ ಪರಿಣಾಮ ಹೊಗೆಯಿಂದ ಉಸಿರುಗಟ್ಟಿ ಶರ್ಮಿಳಾ ಅವರು ಸಾವಿಗೀಡಾಗಿದ್ದರು ಎಂದು ನಂಬಲಾಗಿತ್ತು. ಆದರೆ, ಪೊಲೀಸರ ತನಿಖೆಯಿಂದ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ಗೊತ್ತಾಗಿದೆ. ಶರ್ಮಿಳಾ ಅವರನ್ನು ಕತ್ತು ಹಿಸುಕಿ ಕೊಂದು, ನಂತರ ಸಾಕ್ಷ್ಯಗಳನ್ನು ನಾಶಮಾಡಲು ಆಕೆಯ ಫ್ಲ್ಯಾಟ್‌ಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಪಿಯುಸಿ ವಿದ್ಯಾರ್ಥಿ ಕರ್ನಲ್ ಕುರೈ ಕೆ ಎಂದು ಗುರುತಿಸಲಾಗಿದೆ. ಈತ ಶರ್ಮಿಳಾ ಅವರ ಪಕ್ಕದ ಫ್ಲಾಟ್‌ನಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ.

ಶರ್ಮಿಳಾ ಅವರ ಸ್ನೇಹಿತರ ಹೇಳಿಕೆಗಳು ಮತ್ತು ವಿಧಿವಿಜ್ಞಾನ ಪರೀಕ್ಷೆಯ ಆಧಾರದ ಮೇಲೆ, ಪೊಲೀಸರು ಕರ್ನಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಪ್ರಕಾರ, ಜನವರಿ 3ರಂದು ರಾತ್ರಿ 9 ಗಂಟೆಯ ಸುಮಾರಿಗೆ ಆರೋಪಿ ಕರ್ನಲ್ ಶರ್ಮಿಳಾ ಅವರ ಫ್ಲ್ಯಾಟ್‌ಗೆ ಸ್ಲೈಡಿಂಗ್ ಕಿಟಕಿ ಮೂಲಕ ಪ್ರವೇಶಿಸಿದ್ದ. ಶರ್ಮಿಳಾ ಮುಖಾಮುಖಿಯಾದಾಗ ಆಕೆಯೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿದ್ದ. ಆಕೆ ವಿರೋಧಿಸಿದಾಗ ಬಾಯಿ ಮತ್ತು ಮೂಗನ್ನು ಒತ್ತಿ ಹಿಡಿದಿದ್ದಾನೆ. ಇದರಿಂದ ಶರ್ಮಿಳಾ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಶರ್ಮಿಳಾ ಅವರ ಮನೆಗೆ ಹೋಗಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಯೇ ಎಂಬುವುದು ಇನ್ನೂ ದೃಢವಾಗಿಲ್ಲ. ಕೆಲ ಮಾಧ್ಯಮಗಳು ಅತ್ಯಾಚಾರ ನಡೆದಿದೆ ಎಂದು ವರದಿ ಮಾಡಿವೆ.

ಶರ್ಮಿಳಾ ಅವರ ಮೃತದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿವೆ. ಆರೋಪಿ ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಬಟ್ಟೆಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಒಳಗಡೆ ಪ್ರವೇಶಿಸಿದ ಅದೇ ಕಿಟಕಿಯ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳು ಶರ್ಮಿಳಾ ಬೆಂಕಿ ಅವಘಡಕ್ಕೆ ಬಲಿಯಾಗಿದ್ದಾರೆ ಎಂಬ ಆರಂಭಿಕ ನಂಬಿಕೆಗೆ ವಿರುದ್ಧವಾಗಿ ಬಂದಿವೆ. ಆ ಬಳಿಕ ಪ್ರಕರಣ ತಿರುವು ಪಡೆದುಕೊಂಡಿದೆ. ಶರ್ಮಿಳಾ ಅವರ ಕೈಗಳ ಮೇಲಿದ್ದ ಗಾಯಗಳು, ಕೊನೆ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಆಕೆ ಹೋರಾಟ ನಡೆಸಿದ್ದನ್ನು ಎತ್ತಿ ತೋರಿಸಿವೆ. ಮರಣೋತ್ತರ ಪರೀಕ್ಷೆಯ ವರದಿ ಬೆಂಕಿ ಆವರಿಸಿಕೊಳ್ಳುವ ಮುನ್ನವೇ ದೇಹದ ಮೇಲೆ ಗಾಯಗಳಾಗಿವೆ ಎಂಬುವುದಾಗಿ ಹೇಳಿವೆ ಎಂದು ತಿಳಿಸಿದ್ದಾರೆ.

ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಕರ್ನಲ್‌ನನ್ನು ಬಂಧಿಸಲಾಗಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ : ಜನವರಿ 3ರಂದು ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ಅವರ ಫ್ಲ್ಯಾಟ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಪಾರ್ಟ್‌ಮೆಂಟ್ ಮಾಲೀಕ, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಫ್ಲ್ಯಾಟ್‌ ಬಾಗಿಲು ಒಡೆದು ಒಳನುಗ್ಗಿ ಬೆಂಕಿ ನಂದಿಸಿದ್ದರು. ಈ ವೇಳೆ ಅವರಿಗೆ ಶರ್ಮಿಳಾ ಅವರು ಅಡುಗೆ ಕೋಣೆ ಬಳಿ ಪ್ರಜ್ಞಾಹೀನರಾಗಿ ಬಿದ್ದಿರುವುದು ಕಂಡು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಫ್ಲ್ಯಾಟ್‌ನಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದ ಕಾರಣ ಉಸಿರುಗಟ್ಟಿ ಶರ್ಮಿಳಾ ಸಾವಿಗೀಡಾಗಿರಬಹುದು ಎಂದು ಅಂದಾಜಿಸಿದ್ದರು. ಘಟನೆ ಸಂಬಂದ ಶರ್ಮಿಳಾ ಅವರ ಸ್ನೇಹಿತ ಕೆ. ರೋಹಿತ್ ಎಂಬವರು ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...