Homeಕರ್ನಾಟಕಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ ತಗುಲಿದ ಪರಿಣಾಮ ಹೊಗೆಯಿಂದ ಉಸಿರುಗಟ್ಟಿ ಶರ್ಮಿಳಾ ಅವರು ಸಾವಿಗೀಡಾಗಿದ್ದರು ಎಂದು ನಂಬಲಾಗಿತ್ತು. ಆದರೆ, ಪೊಲೀಸರ ತನಿಖೆಯಿಂದ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ಗೊತ್ತಾಗಿದೆ. ಶರ್ಮಿಳಾ ಅವರನ್ನು ಕತ್ತು ಹಿಸುಕಿ ಕೊಂದು, ನಂತರ ಸಾಕ್ಷ್ಯಗಳನ್ನು ನಾಶಮಾಡಲು ಆಕೆಯ ಫ್ಲ್ಯಾಟ್‌ಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಪಿಯುಸಿ ವಿದ್ಯಾರ್ಥಿ ಕರ್ನಲ್ ಕುರೈ ಕೆ ಎಂದು ಗುರುತಿಸಲಾಗಿದೆ. ಈತ ಶರ್ಮಿಳಾ ಅವರ ಪಕ್ಕದ ಫ್ಲಾಟ್‌ನಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ.

ಶರ್ಮಿಳಾ ಅವರ ಸ್ನೇಹಿತರ ಹೇಳಿಕೆಗಳು ಮತ್ತು ವಿಧಿವಿಜ್ಞಾನ ಪರೀಕ್ಷೆಯ ಆಧಾರದ ಮೇಲೆ, ಪೊಲೀಸರು ಕರ್ನಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಪ್ರಕಾರ, ಜನವರಿ 3ರಂದು ರಾತ್ರಿ 9 ಗಂಟೆಯ ಸುಮಾರಿಗೆ ಆರೋಪಿ ಕರ್ನಲ್ ಶರ್ಮಿಳಾ ಅವರ ಫ್ಲ್ಯಾಟ್‌ಗೆ ಸ್ಲೈಡಿಂಗ್ ಕಿಟಕಿ ಮೂಲಕ ಪ್ರವೇಶಿಸಿದ್ದ. ಶರ್ಮಿಳಾ ಮುಖಾಮುಖಿಯಾದಾಗ ಆಕೆಯೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿದ್ದ. ಆಕೆ ವಿರೋಧಿಸಿದಾಗ ಬಾಯಿ ಮತ್ತು ಮೂಗನ್ನು ಒತ್ತಿ ಹಿಡಿದಿದ್ದಾನೆ. ಇದರಿಂದ ಶರ್ಮಿಳಾ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಶರ್ಮಿಳಾ ಅವರ ಮನೆಗೆ ಹೋಗಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಯೇ ಎಂಬುವುದು ಇನ್ನೂ ದೃಢವಾಗಿಲ್ಲ. ಕೆಲ ಮಾಧ್ಯಮಗಳು ಅತ್ಯಾಚಾರ ನಡೆದಿದೆ ಎಂದು ವರದಿ ಮಾಡಿವೆ.

ಶರ್ಮಿಳಾ ಅವರ ಮೃತದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿವೆ. ಆರೋಪಿ ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಬಟ್ಟೆಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಒಳಗಡೆ ಪ್ರವೇಶಿಸಿದ ಅದೇ ಕಿಟಕಿಯ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳು ಶರ್ಮಿಳಾ ಬೆಂಕಿ ಅವಘಡಕ್ಕೆ ಬಲಿಯಾಗಿದ್ದಾರೆ ಎಂಬ ಆರಂಭಿಕ ನಂಬಿಕೆಗೆ ವಿರುದ್ಧವಾಗಿ ಬಂದಿವೆ. ಆ ಬಳಿಕ ಪ್ರಕರಣ ತಿರುವು ಪಡೆದುಕೊಂಡಿದೆ. ಶರ್ಮಿಳಾ ಅವರ ಕೈಗಳ ಮೇಲಿದ್ದ ಗಾಯಗಳು, ಕೊನೆ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಆಕೆ ಹೋರಾಟ ನಡೆಸಿದ್ದನ್ನು ಎತ್ತಿ ತೋರಿಸಿವೆ. ಮರಣೋತ್ತರ ಪರೀಕ್ಷೆಯ ವರದಿ ಬೆಂಕಿ ಆವರಿಸಿಕೊಳ್ಳುವ ಮುನ್ನವೇ ದೇಹದ ಮೇಲೆ ಗಾಯಗಳಾಗಿವೆ ಎಂಬುವುದಾಗಿ ಹೇಳಿವೆ ಎಂದು ತಿಳಿಸಿದ್ದಾರೆ.

ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಕರ್ನಲ್‌ನನ್ನು ಬಂಧಿಸಲಾಗಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ : ಜನವರಿ 3ರಂದು ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ಅವರ ಫ್ಲ್ಯಾಟ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಪಾರ್ಟ್‌ಮೆಂಟ್ ಮಾಲೀಕ, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಫ್ಲ್ಯಾಟ್‌ ಬಾಗಿಲು ಒಡೆದು ಒಳನುಗ್ಗಿ ಬೆಂಕಿ ನಂದಿಸಿದ್ದರು. ಈ ವೇಳೆ ಅವರಿಗೆ ಶರ್ಮಿಳಾ ಅವರು ಅಡುಗೆ ಕೋಣೆ ಬಳಿ ಪ್ರಜ್ಞಾಹೀನರಾಗಿ ಬಿದ್ದಿರುವುದು ಕಂಡು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಫ್ಲ್ಯಾಟ್‌ನಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದ ಕಾರಣ ಉಸಿರುಗಟ್ಟಿ ಶರ್ಮಿಳಾ ಸಾವಿಗೀಡಾಗಿರಬಹುದು ಎಂದು ಅಂದಾಜಿಸಿದ್ದರು. ಘಟನೆ ಸಂಬಂದ ಶರ್ಮಿಳಾ ಅವರ ಸ್ನೇಹಿತ ಕೆ. ರೋಹಿತ್ ಎಂಬವರು ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...