Homeಕರ್ನಾಟಕಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ ತಗುಲಿದ ಪರಿಣಾಮ ಹೊಗೆಯಿಂದ ಉಸಿರುಗಟ್ಟಿ ಶರ್ಮಿಳಾ ಅವರು ಸಾವಿಗೀಡಾಗಿದ್ದರು ಎಂದು ನಂಬಲಾಗಿತ್ತು. ಆದರೆ, ಪೊಲೀಸರ ತನಿಖೆಯಿಂದ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ಗೊತ್ತಾಗಿದೆ. ಶರ್ಮಿಳಾ ಅವರನ್ನು ಕತ್ತು ಹಿಸುಕಿ ಕೊಂದು, ನಂತರ ಸಾಕ್ಷ್ಯಗಳನ್ನು ನಾಶಮಾಡಲು ಆಕೆಯ ಫ್ಲ್ಯಾಟ್‌ಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಪಿಯುಸಿ ವಿದ್ಯಾರ್ಥಿ ಕರ್ನಲ್ ಕುರೈ ಕೆ ಎಂದು ಗುರುತಿಸಲಾಗಿದೆ. ಈತ ಶರ್ಮಿಳಾ ಅವರ ಪಕ್ಕದ ಫ್ಲಾಟ್‌ನಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ.

ಶರ್ಮಿಳಾ ಅವರ ಸ್ನೇಹಿತರ ಹೇಳಿಕೆಗಳು ಮತ್ತು ವಿಧಿವಿಜ್ಞಾನ ಪರೀಕ್ಷೆಯ ಆಧಾರದ ಮೇಲೆ, ಪೊಲೀಸರು ಕರ್ನಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಪ್ರಕಾರ, ಜನವರಿ 3ರಂದು ರಾತ್ರಿ 9 ಗಂಟೆಯ ಸುಮಾರಿಗೆ ಆರೋಪಿ ಕರ್ನಲ್ ಶರ್ಮಿಳಾ ಅವರ ಫ್ಲ್ಯಾಟ್‌ಗೆ ಸ್ಲೈಡಿಂಗ್ ಕಿಟಕಿ ಮೂಲಕ ಪ್ರವೇಶಿಸಿದ್ದ. ಶರ್ಮಿಳಾ ಮುಖಾಮುಖಿಯಾದಾಗ ಆಕೆಯೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿದ್ದ. ಆಕೆ ವಿರೋಧಿಸಿದಾಗ ಬಾಯಿ ಮತ್ತು ಮೂಗನ್ನು ಒತ್ತಿ ಹಿಡಿದಿದ್ದಾನೆ. ಇದರಿಂದ ಶರ್ಮಿಳಾ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಶರ್ಮಿಳಾ ಅವರ ಮನೆಗೆ ಹೋಗಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಯೇ ಎಂಬುವುದು ಇನ್ನೂ ದೃಢವಾಗಿಲ್ಲ. ಕೆಲ ಮಾಧ್ಯಮಗಳು ಅತ್ಯಾಚಾರ ನಡೆದಿದೆ ಎಂದು ವರದಿ ಮಾಡಿವೆ.

ಶರ್ಮಿಳಾ ಅವರ ಮೃತದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿವೆ. ಆರೋಪಿ ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಬಟ್ಟೆಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಒಳಗಡೆ ಪ್ರವೇಶಿಸಿದ ಅದೇ ಕಿಟಕಿಯ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳು ಶರ್ಮಿಳಾ ಬೆಂಕಿ ಅವಘಡಕ್ಕೆ ಬಲಿಯಾಗಿದ್ದಾರೆ ಎಂಬ ಆರಂಭಿಕ ನಂಬಿಕೆಗೆ ವಿರುದ್ಧವಾಗಿ ಬಂದಿವೆ. ಆ ಬಳಿಕ ಪ್ರಕರಣ ತಿರುವು ಪಡೆದುಕೊಂಡಿದೆ. ಶರ್ಮಿಳಾ ಅವರ ಕೈಗಳ ಮೇಲಿದ್ದ ಗಾಯಗಳು, ಕೊನೆ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಆಕೆ ಹೋರಾಟ ನಡೆಸಿದ್ದನ್ನು ಎತ್ತಿ ತೋರಿಸಿವೆ. ಮರಣೋತ್ತರ ಪರೀಕ್ಷೆಯ ವರದಿ ಬೆಂಕಿ ಆವರಿಸಿಕೊಳ್ಳುವ ಮುನ್ನವೇ ದೇಹದ ಮೇಲೆ ಗಾಯಗಳಾಗಿವೆ ಎಂಬುವುದಾಗಿ ಹೇಳಿವೆ ಎಂದು ತಿಳಿಸಿದ್ದಾರೆ.

ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಕರ್ನಲ್‌ನನ್ನು ಬಂಧಿಸಲಾಗಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ : ಜನವರಿ 3ರಂದು ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ಅವರ ಫ್ಲ್ಯಾಟ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಪಾರ್ಟ್‌ಮೆಂಟ್ ಮಾಲೀಕ, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಫ್ಲ್ಯಾಟ್‌ ಬಾಗಿಲು ಒಡೆದು ಒಳನುಗ್ಗಿ ಬೆಂಕಿ ನಂದಿಸಿದ್ದರು. ಈ ವೇಳೆ ಅವರಿಗೆ ಶರ್ಮಿಳಾ ಅವರು ಅಡುಗೆ ಕೋಣೆ ಬಳಿ ಪ್ರಜ್ಞಾಹೀನರಾಗಿ ಬಿದ್ದಿರುವುದು ಕಂಡು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಫ್ಲ್ಯಾಟ್‌ನಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದ ಕಾರಣ ಉಸಿರುಗಟ್ಟಿ ಶರ್ಮಿಳಾ ಸಾವಿಗೀಡಾಗಿರಬಹುದು ಎಂದು ಅಂದಾಜಿಸಿದ್ದರು. ಘಟನೆ ಸಂಬಂದ ಶರ್ಮಿಳಾ ಅವರ ಸ್ನೇಹಿತ ಕೆ. ರೋಹಿತ್ ಎಂಬವರು ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...