ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದಕ್ಕಾಗಿ ಇತಿಹಾಸಕಾರ ರಾಮಚಂದ್ರ ಗುಹಾ, ಲೇಖಕಿ ಗೀತಾ ಮೆನನ್ ಸೇರಿದಂತೆ ಹಲವು ಹೋರಾಟಗಾರರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ಮುಂದೆ “ಪೌರತ್ವ ಕಾಯ್ದೆ ಸಂವಿಧಾನದ ವಿರುದ್ಧವಿದೆ” ಎಂಬ ಅಂಬೇಡ್ಕರ್ರವರ ಭಿತ್ತಿ ಪತ್ರ ಹಿಡಿದುಕೊಂಡಿದ್ದ ರಾಮಚಂದ್ರ ಗುಹರವರನ್ನು ಪೊಲೀಸರು ಅಮಾನವೀಯವಾಗಿ ಎಳೆದಾಡಿ ಬಂಧಿಸಿದ್ದಾರೆ.
ಬಂಧಿಸುವುದಿದ್ದರೆ ಗೌರವಯುತವಾಗಿ ಬಂಧಿಸಿ ಹೀಗೆಕೆ ಮಾಡುತ್ತೀರಿ ಎಂದು ಅವರು ಪ್ರಶ್ನಿಸಿದ್ದಕ್ಕೆ ಅವರ ಮೇಲೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ವಿಡಿಯೋ ನೋಡಿ
Omg! Unbelievable look at the policeman raining his arms to punch Ramachandra Guha! https://t.co/pvNA0d9G8Y
— Saravanan Annadurai (@asaravanan21) December 19, 2019
ಈ ಕುರಿತು ಹಲವಾರು ಜನ ಸಾಮಾಜಿಕ ಜಾಲತಾಣಗಳ್ಲಲಿ ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಪ್ರತಿಭಟನಾಕಾರರನ್ನು ಮೈಸೂರ ರಸ್ತೆ ಮತ್ತು ಸಂಪಂಗಿರಾಮನಗರದ ಪೊಲೀಸ್ ಠಾಣೆಗಳಿಗೆ ಕರೆದೊಯ್ದಿದ್ದ ಅವರ ಮೊಬೈಲ್ ಕಸಿದುಕೊಂಡಿರುವ ಪೊಲೀಸರು ದೂರು ದಾಖಲಿಸಲು ಪ್ರತಿಯೊಬ್ಬರ ವಿಳಾಸ ಸಂಗ್ರಹಿಸುತ್ತಿದ್ದಾರೆ.
ಒಟ್ಟಿನಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವವರ ಮೇಲೆ ಪೊಲೀಸರು ಹಲ್ಲೆ ಮಾಡಲು, ಪ್ರತಿಭಟನೆಯನ್ನು ನಿಗ್ರಹಿಸಲು ಮುಂದಾಗಿದ್ದಾರೆ. ಆದರೆ ನಿಷೇದಾಜ್ಞೆ ನಡುವೆಯೂ ಪ್ರತಿಭಟನೆಗಳು ಹೆಚ್ಚಾಗುತ್ತಲೇ ಇವೆ.
ನಿಷೇಧಾಜ್ಞೆ ಧಿಕ್ಕರಿಸಿ ಕಲಬುರಗಿಯಲ್ಲಿ ಸುಮಾರು ನಲ್ವತ್ತು ಸಾವಿರ ಜನರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಜನಸ್ತೋಮಕ್ಕೆ ಹೆದರಿ ಬಂಧಿಸಿದ ಕೆಲವರನ್ನೂ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.