Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...