Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...