Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...