Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...