Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...