Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...