Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...