Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...