Homeಮುಖಪುಟಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

ಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

- Advertisement -
- Advertisement -

“ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯ ಮೇಲಿನ ಪೊಲೀಸ್ ದಬ್ಬಾಳಿಕೆಯ ವಿರುದ್ಧ ಮಾರ್ಚ್ 28 ರಂದು ಭಾರತದಾದ್ಯಂತ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರೀಯ ಸಮನ್ವಯ ಸಮಿತಿಯು ಭಾರತದಾದ್ಯಂತ ರೈತರಿಗೆ ಕರೆ ನೀಡಿದೆ” ಎಂದು ರೈತ ಸಂಘ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಿಸಾನ್ ಮಜ್ದೂರ್ ಮೋರ್ಚಾ, ಎಸ್‌ಕೆಎಂ ಸೇರಿದಂತೆ ಎಲ್ಲ ರೈತ ಸಂಘಟನೆಗಳು ಮತ್ತು ವೇದಿಕೆಗಳು ಸಮಸ್ಯೆ ಆಧಾರಿತ ಏಕತೆಗೆ ಸೇರಬೇಕು. ದಬ್ಬಾಳಿಕೆಯ ವಿರುದ್ಧ ಒಗ್ಗೂಡಲು ಮುಂದೆ ಬರಬೇಕು ಎಂದು ಎಸ್‌ಕೆಎಂ ಒತ್ತಾಯಿಸಿದೆ.

“ಭಗವಂತ್ ಸಿಂಗ್ ಮಾನ್ ನೇತೃತ್ವದ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ, ಪಂಜಾಬ್ ಪೊಲೀಸರು ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸೇರಿದಂತೆ 350 ರೈತ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಖಾನೌರಿ ಮತ್ತು ಶಂಬು ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರ ಡೇರೆಗಳು ಮತ್ತು ವೇದಿಕೆಗಳನ್ನು ಪೊಲೀಸರು ಬುಲ್ಡೋಜರ್‌ನಿಂದ ಕೆಡವಿದ್ದು, ಟ್ರ್ಯಾಕ್ಟರ್ ಟ್ರೇಲರ್‌ಗಳು, ಟ್ರಾಲಿಗಳು ಮತ್ತು ಇತರ ಉಪಕರಣಗಳನ್ನು ಬಲವಂತವಾಗಿ ತೆರವುಗೊಳಿಸಿದರು” ಎಂದು ಹೇಳಿಕೆ ತಿಳಿಸಿದೆ.

ಈ ಮಧ್ಯೆ, ಬುಧವಾರ ಹಲವಾರು ರೈತ ನಾಯಕರೊಂದಿಗೆ ಬಂಧನಕ್ಕೊಳಗಾದ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ವಾಲ್ ಅವರನ್ನು ಭಾನುವಾರ ಜಲಂಧರ್‌ನಿಂದ ಪಟಿಯಾಲಕ್ಕೆ ಸ್ಥಳಾಂತರಿಸಲಾಯಿತು.

ಕಳೆದ ವರ್ಷ ನವೆಂಬರ್ 26 ರಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿರುವ ದಲ್ಲೆವಾಲ್ ಅವರನ್ನು ಬುಧವಾರ ಪಂಜಾಬ್ ಪೊಲೀಸರು ಹಲವಾರು ರೈತರನ್ನು ಬಂಧಿಸಿದ ನಂತರ ಜಲಂಧರ್‌ನ ಪಂಜಾಬ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಲಾಯಿತು. ಬಳಿಕ, ಅವರನ್ನು ಜಲಂಧರ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹಕ್ಕೆ ಕರೆದೊಯ್ಯಲಾಯಿತು.

ಭಾನುವಾರ, ರೈತ ನಾಯಕನನ್ನು ಪಟಿಯಾಲದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.

ಚಂಡೀಗಢದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಕೇಂದ್ರ ನಿಯೋಗದೊಂದಿಗೆ ಸಭೆಯ ನಂತರ ಹಿಂತಿರುಗುತ್ತಿದ್ದ ಪಂಧೇರ್, ದಲ್ಲೆವಾಲ್ ಮತ್ತು ಹಲವಾರು ರೈತ ನಾಯಕರನ್ನು ಬುಧವಾರ ಮೊಹಾಲಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು.

ಸಭೆಯಲ್ಲಿ ರೈತರ ವಿವಿಧ ಬೇಡಿಕೆಗಳ ಬಗ್ಗೆ, ವಿಶೇಷವಾಗಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನಿನ ಬಗ್ಗೆ ಚರ್ಚಿಸಲಾಯಿತು. ಸಭೆಯ ನಂತರ ನಿರ್ಗಮಿಸಿದ ರೈತರು ಮೊಹಾಲಿಗೆ ಪ್ರವೇಶಿಸಿದಾಗ, ಅವರನ್ನು ತಡೆಯಲಿ ಭಾರೀ ಬ್ಯಾರಿಕೇಡ್ ಹಾಕಲಾಯಿತು; ಅವರಸ್ಥಳದಲ್ಲೇ ಕೆಲವು ನಾಯಕರನ್ನು ಬಂಧಿಸಲಾಯಿತು.

ಶಂಭು ಮತ್ತು ಖಾನೌರಿಯಲ್ಲಿ ನಡೆದ ಪ್ರತಿಭಟನೆಗಳ ನೇತೃತ್ವವನ್ನು ಎಸ್‌ಕೆಎಂ ಮತ್ತು ಕೆಎಂಎಂ ಸಂಘಟನೆಗಳು ವಹಿಸಿವೆ.

ಪಂಜಾಬ್ ಪೊಲೀಸರು ಪ್ರತಿಭಟನಾ ನಿರತ ರೈತರ ಮೇಲೆ ನಡೆಸಿದ ದಬ್ಬಾಳಿಕೆಯ ನಡುವೆ, ಎಸ್‌ಕೆಎಂ ಮತ್ತು ಭಾರತಿ ಕಿಸಾನ್ ಯೂನಿಯನ್ ಶುಕ್ರವಾರ ಪಂಜಾಬ್ ಸರ್ಕಾರ ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದವು.

ರೈತರ ವಿರುದ್ಧ ಪೊಲೀಸ್ ಕ್ರಮಕ್ಕಾಗಿ ಸರ್ಕಾರವನ್ನು ಟೀಕಿಸಿದ ರೈತ ಸಂಘಟನೆಗಳು, ಬಂಧನಕ್ಕೊಳಗಾದ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಾ ಮಾತುಕತೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಿದವು.

ಭಾನುವಾರ ಎಸ್‌ಕೆಎಂ ಹೇಳಿಕೆಯ ಪ್ರಕಾರ, ಮಾರ್ಚ್ 28 ರಂದು ಪಂಜಾಬ್‌ನಾದ್ಯಂತ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳ ಮುಂದೆ ‘ಪೊಲೀಸ್ ದಬ್ಬಾಳಿಕೆ’ಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ.

ಧರ್ಮಾಧಾರಿತ ಮೀಸಲಾತಿ ಸಂವಿಧಾನವನ್ನು ಉಲ್ಲಂಘಿಸುತ್ತದೆ: ಆರ್‌ಎಸ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...