Homeಕರ್ನಾಟಕದ.ಕ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ದ.ಕ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

- Advertisement -
- Advertisement -

ಗಾಂಜಾ ವ್ಯಸನಿಗಳಿಂದ ಹಲ್ಲೆಗೊಳಗಾಗಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸುವ ಬದಲು ಉಳ್ಳಾಲ ಪೊಲೀಸರು ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಮಂಗಳೂರಿನಲ್ಲಿ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಎರಡು ದಿನದ ಹಿಂದೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ- ಕರ್ನಾಟಕದ ವಿದ್ಯಾರ್ಥಿಗಳು ಝೀರೋ ಡ್ರಾಪೌಟ್ ಅಭಿಯಾನದ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ಸಾಧಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರಿನ ಜ್ಯೋತಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಗಾಂಜಾ ಮಾಫಿಯಾ ಸಕ್ರಿಯವಾಗಿದೆ ಎಂಬುದಕ್ಕೆ ಈ ಘಟನೆಯು ಸ್ಪಷ್ಟ ಉದಾಹರಣೆಯಾಗಿದೆ. ನ್ಯಾಯ ಒದಗಿಸಬೇಕಾದ ಪೊಲೀಸರು ಗಾಂಜಾ ಮಾಫಿಯದೊಂದಿಗೆ ಆಂತರಿಕವಾಗಿ ಶಾಮೀಲಾಗಿದ್ದಾರೆಯೇ ಎಂಬುದಕ್ಕೆ ಸಾರ್ವಜನಿಕರಲ್ಲಿ ಸಂಶಯ ಮೂಡಿದೆ. ಈ ಘಟನೆ ಬಗ್ಗೆ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು” ಒತ್ತಾಯಿಸಿದರು.

“ಪೊಲೀಸರು ಸಂಜೆ ವೇಳೆ ಏಕೆ ಹೊರಹೋಗುತ್ತೀರಿ ಎಂದು ನಮ್ಮನ್ನೆ ಪ್ರಶ್ನಿಸಿದ್ದಾರೆ. ವಿದ್ಯಾರ್ಥಿಗಳು ಶಾಲಾ ಕಾಲೇಜಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಡ್ರಾಪೌಟ್ ಆಗುತ್ತಿದ್ದು, ಇದನ್ನು ಮನಗಂಡು ಕ್ಯಾಂಪಸ್ ಫ್ರಂಟ್ ನಡೆಸುತ್ತಿರುವ ಝೀರೋ ಡ್ರಾಪೌಟ್ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮ ನಡೆಸಲು ನಾವು ಹೋಗಿದ್ದೆವು. ಅದು ತಪ್ಪೆ? ಈ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಶೀಘ್ರ ಸೂಕ್ತ ಕ್ರಮ ಕೈಗೊಂಡು ಹಲ್ಲೆ ನಡೆಸಿದ ಗಾಂಜಾ ವ್ಯಸನಿಗಳಿನ್ನು ಬಂಧಿಸಿ, ದೌರ್ಜನ್ಯ ನಡೆಸಿದ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ವಜಾ ಮಾಡಬೇಕೆಂದು” ಸಾಧಿಕ್ ಆಗ್ರಹಿಸಿದರು.

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ದ.ಕ ಜಿಲ್ಲಾಧ್ಯಕ್ಷ ಅಬ್ದುಲ್ ಬಾಸಿತ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಾಸಿರುದ್ದೀನ್ ಬಪ್ಪಳಿಗೆ, ಅಬ್ದುಲ್ ಖಲೀಫ ಸೇರಿದಂತೆ ಇತರರು ಪೊಲೀಸ್‌ ದೌರ್ಜನ್ಯವನ್ನು ಖಂಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಇಹ್ತಿಶಾಮ್ , ಕೋಶಾಧಿಕಾರಿ ಸುಲ್ತಾನ್ , ಕ್ಯಾಂಪಸ್ ಫ್ರಂಟ್ ಗ್ರಾಮಾಂತರ ಜಿಲ್ಲಾಧ್ಯಕ್ಷ ಸರ್ಫುದ್ದೀನ್ ಮಂಗಳೂರು, ಕಾರ್ಯದರ್ಶಿ ಅಶ್ರಫ್ ಜೋಕಟ್ಟೆ, ಮುರ್ಶಿದಾ ಉಪಸ್ಥಿತರಿದ್ದರು.


ಇದನ್ನೂ ಓದಿ: ಟಿಆರ್‌ಪಿ ಹಿಂದೆ ಬಿದ್ದಿರುವವರು ನನ್ನನ್ನು ತಪ್ಪಿತಸ್ಥಳೆಂದು ಘೋಷಿಸಿದರು: ದಿಶಾ ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...