Homeಕರ್ನಾಟಕದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ

ದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಬುಧವಾರ ನಡೆದ ‘ದೇವನಹಳ್ಳಿ ಚಲೋ’ ಪ್ರತಿಭಟನೆಯನ್ನು ಪೊಲೀಸರು ಹತ್ತಿಕ್ಕಿದ್ದು, ಪ್ರತಿಭಟನಾನಿರತ ಹೋರಾಟಗಾರರು ಮತ್ತು ರೈತರನ್ನು ಅಮಾನವೀಯವಾಗಿ ಎಳೆದಾಡಿ ಬಂಧಿಸಿದ್ದರು. ಸರ್ಕಾರದ ಈ ನಡೆ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಇಂದು ಸರ್ಕಾರದ ವಿರುದ್ಧ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಪ್ಪರದಕಲ್ಲಿನ ಬಳಿಯಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ, ಕಾರ್ಮಿಕ, ಪ್ರಗತಿಪರ ಮತ್ತು ರೈತ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬಲವಂತದ ಭೂಸ್ವಾಧೀನ ವಾಪಸ್‌ ಪಡೆಯಬೇಕು ಹಾಗೂ ಪ್ರತಿಭಟನಾನಿರತರನ್ನು ಬಂಧಿಸಲು ಹಿಂಸಾತ್ಮಕ ದಾರಿ ಬಳಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದರು.

ಪೊಲೀಸರಿಂದ ನಿನ್ನೆ ದೌರ್ಜನ್ಯಕ್ಕೆ ಒಳಗಾಗಿದ್ದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ನಂಜಪ್ಪ, ರಮೇಶ್ ಚೀಮಾಚನಹಳ್ಳಿ, ಮಾರೇಗೌಡ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ಕೊರಳೂರು ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.

ಬಳ್ಳಾರಿ

ದೇವನಹಳ್ಳಿಯಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ದಬ್ಬಾಳಿಕೆಯಿಂದ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ( ಸಮಿತಿ ಅಂಬೇಡ್ಕರ್ ವಾದ) ಬಳ್ಳಾರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ

ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಸುತ್ತಿದ್ದ ಹೋರಾಟದಲ್ಲಿ ರೈತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ ಬಂಧಿಸಿರುವ ಕ್ರಮವನ್ನು ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಂಧಿಸಿರುವ ಮುಖಂಡರು ಹಾಗೂ ಹೋರಾಟಗಾರರನ್ನು ಬೇಷರತ್ ಆಗಿ ಬಿಡುಗಡೆ ಮಾಡಬೇಕು. ಡಿಸಿಪಿ ಸಜಿತ್‌ರವರ ಮೇಲೆ‌ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತದ ಭೂಸ್ವಾದೀನದ ವಿರುದ್ಧ ಹಮ್ಮಿಕೊಂಡಿದ್ದ ದೇವನಹಳ್ಳಿ ಚಲೋ ಹೋರಾಟದಲ್ಲಿ ರೈತರು ಮತ್ತು ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸಿ ಬಂಧಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐ(ಎಂ)ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು. ಸಿಪಿಐ(ಎಂ) ಬೆಂಗಳೂರು ಉತ್ತರ-ದಕ್ಷಿಣ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ಸಿಪಿಐಎಂ ರಾಜ್ಯ ನಾಯಕರಾದ ಯು.ಬಸವರಾಜ, ಗೋಪಾಲಕೃಷ್ಣ ಅರಳಹಳ್ಳಿ, ಕೆ.ಮಹಾಂತೇಶ್, ಉತ್ತರ ಜಿಲ್ಲಾ ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ, ರಾಜ್ಯ ಸಮಿತಿ ಸದಸ್ಯರಾದ ಯಶವಂತ್ ಹಾಗೂ ಇತರರು ಭಾಗವಹಿಸಿ ಮಾತನಾಡಿದರು.

ಹೊಸಕೋಟೆ

ದಾವಣಗೆರೆ

ಮಂಡ್ಯ

ಹಾಗಲಗಂಚಿ-ಶೃಂಗೇರಿ

ಆಳಂದ

ಕಂಪ್ಲಿ

ಕುಡತಿನಿ

ಕುರಗೋಡು

ಚಿಕ್ಕಬಳ್ಳಾಪುರ

ತುಮಕೂರು

ಪಾವಗಡ

ಬಾಗೇಪಲ್ಲಿ

ಹಾಸನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಸ್ವಾಧೀನಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಮೂರೂವರೆ ವರ್ಷಗಳಿಂದ ರೈತರು ಹೋರಾಟ ನಡೆಸಿತ್ತಿದ್ದಾರೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮತ್ತು ಕೆಐಎಡಿಬಿ ನಡುವಿನ ಸಂಘರ್ಷ ನಿರ್ಣಾಯ ಹಂತಕ್ಕೆ ತಲುಪಿದ್ದು, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ಬುಧವಾರ (ಜೂ.25) ದೇವನಹಳ್ಳಿ ಚಲೋ ಹೋರಾಟಕ್ಕೆ ಕರೆ ನೀಡಿತ್ತು.

ಚನ್ನರಾಯಪಟ್ಟಣ ರೈತರ ಬಂಧನ: ಸಿಎಂ ಭೇಟಿಗೆ ಆಗಮಿಸಿದ್ದ ನಟ ಪ್ರಕಾಶ್‌ ರಾಜ್‌ ಅವರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...