Homeಚಳವಳಿಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ರ್‍ಯಾಲಿಯನ್ನು ದೆಹಲಿ ಹೊರಗಿನ ರಿಂಗ್‌ರೋಡ್‌ನಲ್ಲೇ ನಡೆಸುವುದಾಗಿ ಸಂಘಟನೆಗಳು ಘೋಷಿಸಿದೆ

- Advertisement -
- Advertisement -

ದೆಹಲಿ ಪೊಲೀಸರು ಸೋಮವಾರ ಮತ್ತು ಮಂಗಳವಾರ ಪ್ರತಿಭಟನಾ ನಿರತ ವಿವಿಧ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿ, ದೆಹಲಿಯ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಕೇಳಿದ್ದಾರೆ. ರಿಂಗ್ ರೋಡ್‌ ಮತ್ತು ಕಿಸಾನ್ ಘಾಟ್‌ನತ್ತ ರ್‍ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ.

ಇಂದು ಕೂಡ ರೈತ ನಾಯಕರೊಂದಿಗೆ ಚರ್ಚಿಸಲಿರುವ ಪೊಲೀಸರು, ಭದ್ರತಾ ವ್ಯವಸ್ಥೆಯ ವಿಷಯವನ್ನು ಮಾತನಾಡಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ್‍ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್ ವೇನಲ್ಲಿ ರ್‍ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ್‍ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

’ಸಂಪೂರ್ಣ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ ರ್‍ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ್‍ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

’ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ರ್ಯಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...