Homeಚಳವಳಿಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ರ್‍ಯಾಲಿಯನ್ನು ದೆಹಲಿ ಹೊರಗಿನ ರಿಂಗ್‌ರೋಡ್‌ನಲ್ಲೇ ನಡೆಸುವುದಾಗಿ ಸಂಘಟನೆಗಳು ಘೋಷಿಸಿದೆ

- Advertisement -
- Advertisement -

ದೆಹಲಿ ಪೊಲೀಸರು ಸೋಮವಾರ ಮತ್ತು ಮಂಗಳವಾರ ಪ್ರತಿಭಟನಾ ನಿರತ ವಿವಿಧ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿ, ದೆಹಲಿಯ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಕೇಳಿದ್ದಾರೆ. ರಿಂಗ್ ರೋಡ್‌ ಮತ್ತು ಕಿಸಾನ್ ಘಾಟ್‌ನತ್ತ ರ್‍ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ.

ಇಂದು ಕೂಡ ರೈತ ನಾಯಕರೊಂದಿಗೆ ಚರ್ಚಿಸಲಿರುವ ಪೊಲೀಸರು, ಭದ್ರತಾ ವ್ಯವಸ್ಥೆಯ ವಿಷಯವನ್ನು ಮಾತನಾಡಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ್‍ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್ ವೇನಲ್ಲಿ ರ್‍ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ್‍ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

’ಸಂಪೂರ್ಣ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ ರ್‍ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ್‍ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

’ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ರ್ಯಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...