Homeಚಳವಳಿಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ರ್‍ಯಾಲಿಯನ್ನು ದೆಹಲಿ ಹೊರಗಿನ ರಿಂಗ್‌ರೋಡ್‌ನಲ್ಲೇ ನಡೆಸುವುದಾಗಿ ಸಂಘಟನೆಗಳು ಘೋಷಿಸಿದೆ

- Advertisement -
- Advertisement -

ದೆಹಲಿ ಪೊಲೀಸರು ಸೋಮವಾರ ಮತ್ತು ಮಂಗಳವಾರ ಪ್ರತಿಭಟನಾ ನಿರತ ವಿವಿಧ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿ, ದೆಹಲಿಯ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಕೇಳಿದ್ದಾರೆ. ರಿಂಗ್ ರೋಡ್‌ ಮತ್ತು ಕಿಸಾನ್ ಘಾಟ್‌ನತ್ತ ರ್‍ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ.

ಇಂದು ಕೂಡ ರೈತ ನಾಯಕರೊಂದಿಗೆ ಚರ್ಚಿಸಲಿರುವ ಪೊಲೀಸರು, ಭದ್ರತಾ ವ್ಯವಸ್ಥೆಯ ವಿಷಯವನ್ನು ಮಾತನಾಡಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ್‍ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್ ವೇನಲ್ಲಿ ರ್‍ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ್‍ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

’ಸಂಪೂರ್ಣ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ ರ್‍ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ್‍ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

’ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ರ್ಯಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...