Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...