Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...