Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...