Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...