Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...